AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Violation of Code of Conduct: 48 ಗಂಟೆಗಳ ಕಾಲ ಚುನಾವಣೆ ಪ್ರಚಾರ ಮಾಡದಂತೆ ತೆಲಂಗಾಣ ಸಚಿವರಿಗೆ ಚುನಾವಣಾ ಆಯೋಗ ನಿರ್ಬಂಧ

ಬಿಆರ್‌ಎಸ್ ಅಭ್ಯರ್ಥಿಗೆ ಮತ ನೀಡದಿದ್ದರೆ ಎಲ್ಲಾ ಕಲ್ಯಾಣ ಯೋಜನೆಗಳನ್ನು ನಿಲ್ಲಿಸುವುದಾಗಿ ಸಚಿವರು ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಜಗದೀಶ್ ರೆಡ್ಡಿ ವಿರುದ್ಧ ಬಿಜೆಪಿಯ ಕಪಿಲವಾಯಿ ದಿಲೀಪ್ ಕುಮಾರ್ ಅವರು ಅಕ್ಟೋಬರ್ 26 ರಂದು ದೂರು ದಾಖಲಿಸಿದ್ದಾರೆ.

Violation of Code of Conduct: 48 ಗಂಟೆಗಳ ಕಾಲ ಚುನಾವಣೆ ಪ್ರಚಾರ ಮಾಡದಂತೆ ತೆಲಂಗಾಣ ಸಚಿವರಿಗೆ ಚುನಾವಣಾ ಆಯೋಗ ನಿರ್ಬಂಧ
BRS leader
TV9 Web
| Edited By: |

Updated on: Oct 29, 2022 | 8:45 PM

Share

ತೆಲಂಗಾಣ:ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು  ಚುನಾವಣಾ ಆಯೋಗ ತೆಲಂಗಾಣ ಇಂಧನ ಸಚಿವ ಜಿ ಜಗದೀಶ್ ರೆಡ್ಡಿ ಅವರನ್ನು 48 ಗಂಟೆಗಳ ಕಾಲ ಮುನುಗೋಡು ವಿಧಾನಸಭಾ ಉಪಚುನಾವಣೆಯಲ್ಲಿ ಪ್ರಚಾರ ಮಾಡದಂತೆ ಚುನಾವಣಾ ಆಯೋಗ ನಿರ್ಬಂಧಿಸಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದಕ್ಕಾಗಿ ತೆಲಂಗಾಣದ ಇಂಧನ ಸಚಿವ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕ ಜಿ ಜಗದೀಶ್ ರೆಡ್ಡಿ ಅವರಿಗೆ ಚುನಾವಣಾ ಆಯೋಗವು ಅವರಿಗೆ ನೋಟಿಸ್ ನೀಡಿದೆ. ಅಕ್ಟೋಬರ್ 25ರಂದು ಮುನುಗೋಡು ಉಪಚುನಾವಣೆ ಸಲುವಾಗಿ ನಡೆಸಿದ ಪ್ರಚಾರದಲ್ಲಿ ಸಾರ್ವಜನಿಕ ಭಾಷಣದಲ್ಲಿ ಜಗದೀಶ್ ರೆಡ್ಡಿ ಅವರು ಕಾರ್ ಚಿಹ್ನೆಗೆ (ಬಿಆರ್‌ಎಸ್ ಚುನಾವಣಾ ಚಿಹ್ನೆ) ಮತ ನೀಡದಿದ್ದರೆ ಕಲ್ಯಾಣ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಹೇಳಿದರು.

ಬಿಆರ್‌ಎಸ್ ಅಭ್ಯರ್ಥಿಗೆ ಮತ ನೀಡದಿದ್ದರೆ ಎಲ್ಲಾ ಕಲ್ಯಾಣ ಯೋಜನೆಗಳನ್ನು ನಿಲ್ಲಿಸುವುದಾಗಿ ಸಚಿವರು ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಜಗದೀಶ್ ರೆಡ್ಡಿ ವಿರುದ್ಧ ಬಿಜೆಪಿಯ ಕಪಿಲವಾಯಿ ದಿಲೀಪ್ ಕುಮಾರ್ ಅವರು ಅಕ್ಟೋಬರ್ 26 ರಂದು ದೂರು ದಾಖಲಿಸಿದ್ದಾರೆ.

ಚುನಾವಣೆ ಕೂಸುಕುಂಟ್ಲ ಪ್ರಭಾಕರ ರೆಡ್ಡಿ ಮತ್ತು ರಾಜಗೋಪಾಲ್ ರೆಡ್ಡಿ ನಡುವೆ ಅಲ್ಲ, ಇದು 2 ಸಾವಿರ ಪಿಂಚಣಿ ಮುಂದುವರಿಸಬೇಕೋ ಬೇಡವೋ ಎಂಬುದಕ್ಕೆ ಚುನಾವಣೆ, ರೈತ ಬಂಧು ಮುಂದುವರಿಸಬೇಕೋ ಬೇಡವೋ, 24 ಗಂಟೆ ಉಚಿತ ಕರೆಂಟ್ ಮುಂದುವರಿಸಬೇಕೋ ಬೇಡವೋ ಎಂಬುದಕ್ಕೆ ಚುನಾವಣೆ. ಅಂಗವಿಕಲರಿಗೆ 3,000 ರೂಪಾಯಿ ಪಿಂಚಣಿ ಮುಂದುವರಿಸಬೇಕೋ ಬೇಡವೋ, ಯೋಜನೆ ಮುಂದುವರಿಸಲು ಇಚ್ಛಿಸುವವರು ಕಾರಿಗೆ ಮತ ನೀಡಿ ಕೆಸಿಆರ್ ಜೊತೆ ನಿಲ್ಲಬಹುದು. ಮೋದಿ ಜೀ 3,000 ರೂಪಾಯಿ ಪಿಂಚಣಿ ಬೇಡ ಎಂದಿದ್ದು, ಖಂಡಿತ ಕೊಡುತ್ತೇನೆ ಎಂದು ಕೆಸಿಆರ್ ಹೇಳಿದರು. ಯಾರಿಗಾದರೂ ಪಿಂಚಣಿ ಬಗ್ಗೆ ಆಸಕ್ತಿಯಿಲ್ಲದಿದ್ದರೆ ಅವರು ಮೋದಿಗೆ ಮತ ಹಾಕಬಹುದು, ಯಾರಿಗಾದರೂ ಈ ಯೋಜನೆಗಳು ಬೇಕಿದ್ದರೆ ಕೆಸಿಆರ್‌ಗೆ ಮತ ನೀಡಿ ಎಂದು ಸಚಿವರು ಹೇಳಿದರು.

ಅಕ್ಟೋಬರ್ 29ರ ಶನಿವಾರ ಮಧ್ಯಾಹ್ನ 3 ಗಂಟೆಯೊಳಗೆ ಮೇಲಿನ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ವಿವರಿಸಲು ರೆಡ್ಡಿ ಅವರಿಗೆ EC ಕೇಳಿದೆ, ನೀಡದಿದ್ದರೆ ಸಚಿವರಿಗೆ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನೋಟಿಸ್ ಜಾರಿ ಮಾಡಿದೆ.

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​