AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Violation of Code of Conduct: 48 ಗಂಟೆಗಳ ಕಾಲ ಚುನಾವಣೆ ಪ್ರಚಾರ ಮಾಡದಂತೆ ತೆಲಂಗಾಣ ಸಚಿವರಿಗೆ ಚುನಾವಣಾ ಆಯೋಗ ನಿರ್ಬಂಧ

ಬಿಆರ್‌ಎಸ್ ಅಭ್ಯರ್ಥಿಗೆ ಮತ ನೀಡದಿದ್ದರೆ ಎಲ್ಲಾ ಕಲ್ಯಾಣ ಯೋಜನೆಗಳನ್ನು ನಿಲ್ಲಿಸುವುದಾಗಿ ಸಚಿವರು ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಜಗದೀಶ್ ರೆಡ್ಡಿ ವಿರುದ್ಧ ಬಿಜೆಪಿಯ ಕಪಿಲವಾಯಿ ದಿಲೀಪ್ ಕುಮಾರ್ ಅವರು ಅಕ್ಟೋಬರ್ 26 ರಂದು ದೂರು ದಾಖಲಿಸಿದ್ದಾರೆ.

Violation of Code of Conduct: 48 ಗಂಟೆಗಳ ಕಾಲ ಚುನಾವಣೆ ಪ್ರಚಾರ ಮಾಡದಂತೆ ತೆಲಂಗಾಣ ಸಚಿವರಿಗೆ ಚುನಾವಣಾ ಆಯೋಗ ನಿರ್ಬಂಧ
BRS leader
TV9 Web
| Edited By: |

Updated on: Oct 29, 2022 | 8:45 PM

Share

ತೆಲಂಗಾಣ:ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು  ಚುನಾವಣಾ ಆಯೋಗ ತೆಲಂಗಾಣ ಇಂಧನ ಸಚಿವ ಜಿ ಜಗದೀಶ್ ರೆಡ್ಡಿ ಅವರನ್ನು 48 ಗಂಟೆಗಳ ಕಾಲ ಮುನುಗೋಡು ವಿಧಾನಸಭಾ ಉಪಚುನಾವಣೆಯಲ್ಲಿ ಪ್ರಚಾರ ಮಾಡದಂತೆ ಚುನಾವಣಾ ಆಯೋಗ ನಿರ್ಬಂಧಿಸಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದಕ್ಕಾಗಿ ತೆಲಂಗಾಣದ ಇಂಧನ ಸಚಿವ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕ ಜಿ ಜಗದೀಶ್ ರೆಡ್ಡಿ ಅವರಿಗೆ ಚುನಾವಣಾ ಆಯೋಗವು ಅವರಿಗೆ ನೋಟಿಸ್ ನೀಡಿದೆ. ಅಕ್ಟೋಬರ್ 25ರಂದು ಮುನುಗೋಡು ಉಪಚುನಾವಣೆ ಸಲುವಾಗಿ ನಡೆಸಿದ ಪ್ರಚಾರದಲ್ಲಿ ಸಾರ್ವಜನಿಕ ಭಾಷಣದಲ್ಲಿ ಜಗದೀಶ್ ರೆಡ್ಡಿ ಅವರು ಕಾರ್ ಚಿಹ್ನೆಗೆ (ಬಿಆರ್‌ಎಸ್ ಚುನಾವಣಾ ಚಿಹ್ನೆ) ಮತ ನೀಡದಿದ್ದರೆ ಕಲ್ಯಾಣ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಹೇಳಿದರು.

ಬಿಆರ್‌ಎಸ್ ಅಭ್ಯರ್ಥಿಗೆ ಮತ ನೀಡದಿದ್ದರೆ ಎಲ್ಲಾ ಕಲ್ಯಾಣ ಯೋಜನೆಗಳನ್ನು ನಿಲ್ಲಿಸುವುದಾಗಿ ಸಚಿವರು ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಜಗದೀಶ್ ರೆಡ್ಡಿ ವಿರುದ್ಧ ಬಿಜೆಪಿಯ ಕಪಿಲವಾಯಿ ದಿಲೀಪ್ ಕುಮಾರ್ ಅವರು ಅಕ್ಟೋಬರ್ 26 ರಂದು ದೂರು ದಾಖಲಿಸಿದ್ದಾರೆ.

ಚುನಾವಣೆ ಕೂಸುಕುಂಟ್ಲ ಪ್ರಭಾಕರ ರೆಡ್ಡಿ ಮತ್ತು ರಾಜಗೋಪಾಲ್ ರೆಡ್ಡಿ ನಡುವೆ ಅಲ್ಲ, ಇದು 2 ಸಾವಿರ ಪಿಂಚಣಿ ಮುಂದುವರಿಸಬೇಕೋ ಬೇಡವೋ ಎಂಬುದಕ್ಕೆ ಚುನಾವಣೆ, ರೈತ ಬಂಧು ಮುಂದುವರಿಸಬೇಕೋ ಬೇಡವೋ, 24 ಗಂಟೆ ಉಚಿತ ಕರೆಂಟ್ ಮುಂದುವರಿಸಬೇಕೋ ಬೇಡವೋ ಎಂಬುದಕ್ಕೆ ಚುನಾವಣೆ. ಅಂಗವಿಕಲರಿಗೆ 3,000 ರೂಪಾಯಿ ಪಿಂಚಣಿ ಮುಂದುವರಿಸಬೇಕೋ ಬೇಡವೋ, ಯೋಜನೆ ಮುಂದುವರಿಸಲು ಇಚ್ಛಿಸುವವರು ಕಾರಿಗೆ ಮತ ನೀಡಿ ಕೆಸಿಆರ್ ಜೊತೆ ನಿಲ್ಲಬಹುದು. ಮೋದಿ ಜೀ 3,000 ರೂಪಾಯಿ ಪಿಂಚಣಿ ಬೇಡ ಎಂದಿದ್ದು, ಖಂಡಿತ ಕೊಡುತ್ತೇನೆ ಎಂದು ಕೆಸಿಆರ್ ಹೇಳಿದರು. ಯಾರಿಗಾದರೂ ಪಿಂಚಣಿ ಬಗ್ಗೆ ಆಸಕ್ತಿಯಿಲ್ಲದಿದ್ದರೆ ಅವರು ಮೋದಿಗೆ ಮತ ಹಾಕಬಹುದು, ಯಾರಿಗಾದರೂ ಈ ಯೋಜನೆಗಳು ಬೇಕಿದ್ದರೆ ಕೆಸಿಆರ್‌ಗೆ ಮತ ನೀಡಿ ಎಂದು ಸಚಿವರು ಹೇಳಿದರು.

ಅಕ್ಟೋಬರ್ 29ರ ಶನಿವಾರ ಮಧ್ಯಾಹ್ನ 3 ಗಂಟೆಯೊಳಗೆ ಮೇಲಿನ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ವಿವರಿಸಲು ರೆಡ್ಡಿ ಅವರಿಗೆ EC ಕೇಳಿದೆ, ನೀಡದಿದ್ದರೆ ಸಚಿವರಿಗೆ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನೋಟಿಸ್ ಜಾರಿ ಮಾಡಿದೆ.

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು