AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ, ಬಿಜೆಪಿ ಕಚೇರಿ, ಕಾರ್ಯಕರ್ತರ ಮನೆಗಳಿಗೆ ಬೆಂಕಿ: ಟಿಎಂಸಿಯೇ ಹೊಣೆ ಎಂದು ಬಿಜೆಪಿ ಆರೋಪ

ಬಿಜೆಪಿಯ ಮಹಿಳಾ ಕಾರ್ಯಕರ್ತೆಯರ ಮೇಲೆಯೂ ಟಿಎಂಸಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಆರಂಭಗಡ, ಬಿಷ್ಣುಪುರ, ಎಂಟಲಿ, ಹೌರಾ ಮತ್ತು ಬೋಲ್​ಪುರ ಪಟ್ಟಣಗಳಲ್ಲಿ ಹಿಂಸಾಚಾರ ನಡೆದಿದೆ ಎಂದು ಬಿಜೆಪಿ ನಾಯಕ ಬಿ.ಎಲ್.ಸಂತೋಷ್ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ, ಬಿಜೆಪಿ ಕಚೇರಿ, ಕಾರ್ಯಕರ್ತರ ಮನೆಗಳಿಗೆ ಬೆಂಕಿ: ಟಿಎಂಸಿಯೇ ಹೊಣೆ ಎಂದು ಬಿಜೆಪಿ ಆರೋಪ
ಪಶ್ಚಿಮ ಬಂಗಾಳದ ಆರಂಭಗಡದಲ್ಲಿ ಬೆಂಕಿಗೆ ಆಹುತಿಯಾದ ಟಿಎಂಸಿ ಕಚೇರಿ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:May 02, 2021 | 10:48 PM

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್​ ಸ್ಪಷ್ಟ ಮುನ್ನಡೆ ದಾಖಲಿಸಿದ ನಂತರ ರಾಜ್ಯದಲ್ಲಿ ಹಿಂಸಾಚಾರದ ಘಟನೆಗಳು ವರದಿಯಾಗಿವೆ. ಬಿಜೆಪಿಯ ಕಚೇರಿ ಮತ್ತು ಕಾರ್ಯಕರ್ತರ ಮನೆಗಳ ಮೇಲೆ ಟಿಎಂಸಿ ಗೂಂಡಾಗಳು ದಾಳಿ ನಡೆಸಿ, ಬೆಂಕಿ ಹಚ್ಚಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್.ಸಂತೋಷ್ ನೇರ ಆರೋಪ ಮಾಡಿದ್ದಾರೆ.

ನಮ್ಮ ಪಕ್ಷದ ಮಹಿಳಾ ಕಾರ್ಯಕರ್ತೆಯರ ಮೇಲೆಯೂ ಟಿಎಂಸಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಆರಂಭಗಡ, ಬಿಷ್ಣುಪುರ, ಎಂಟಲಿ, ಹೌರಾ ಮತ್ತು ಬೋಲ್​ಪುರ ಪಟ್ಟಣಗಳಲ್ಲಿ ಹಿಂಸಾಚಾರ ನಡೆದಿದೆ ಎಂದು ಸಂತೋಷ್ ಆರೋಪಿಸಿದ್ದಾರೆ. ಬಿಜೆಪಿಯ ಐಟಿ ಘಟಕದ ಮುಖ್ಯಸ್ಥ ಅಮಿತ್ ಮಾಳವೀಯ ಹಿಂಸಾಚಾರಕ್ಕೆ ಸಂಬಂಧಿಸಿದ ವಿಡಿಯೊಗಳನ್ನು ಟ್ವೀಟ್ ಮಾಡಿದ್ದಾರೆ. ಈ ಆರೋಪಗಳನ್ನು ಟಿಎಂಸಿ ಸಾರಾಸಗಟಾಗಿ ನಿರಾಕರಿಸಿದೆ.

ಸ್ವತಃ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಶಾ ಮತ್ತು ಇತರ ಹಲವು ಹಿರಿಯ ಪ್ರಭಾವಿ ನಾಯಕರು ಪಶ್ಚಿಮ ಬಂಗಾಳದಲ್ಲಿಯೇ ವಾಸ್ತವ್ಯ ಹೂಡಿ ಬಿರುಸಿನ ಪ್ರಚಾರ ನಡೆಸಿದರೂ ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಿಸಲು ಸಾಧ್ಯವಾಗಿರಲಿಲ್ಲ. ಪಶ್ಚಿಮ ಬಂಗಾಳದ ಚುನಾವಣೆ ಫಲಿತಾಂಶಗಳು ಪ್ರಕಟವಾದ ಬೆನ್ನಿಗೇ ಹಿಂಸಾಚಾರದ ಘಟನೆಗಳು ವರದಿಯಾಗಿವೆ.

ಬಿಜೆಪಿಯ ಪ್ರಬಲ ಸವಾಲಿನ ನಡುವೆಯೂ ಟಿಎಂಸಿ ಪಶ್ಚಿಮ ಬಂಗಾಳದಲ್ಲಿ 219 ಸ್ಥಾನಗಳಲ್ಲಿ ಮುನ್ನಡೆ ದಾಖಲಿಸಿದೆ. ಬಿಜೆಪಿಯು ಕೇವಲ 71 ಸ್ಥಾನಗಳಲ್ಲಿ ಮುಂದಿದ್ದು, ಪ್ರತಿಪಕ್ಷ ಸ್ಥಾನದಲ್ಲಿ ಕುಳಿತುಕೊಳ್ಳಬೇಕಾಗಿದೆ. ಚುನಾವಣಾ ಆಯೋಗವು ಗೆಲುವಿನ ಘೋಷಣೆ ಮಾಡಿದ ನಂತರ ಟಿಎಂಸಿ ಕಾರ್ಯಕರ್ತರು ಹಲವೆಡೆ ವಿಜಯೋತ್ಸವದ ಮೆರವಣಿಗೆಗಳನ್ನು ನಡೆಸಿದರು. ಈ ಸಂದರ್ಭದಲ್ಲಿ ಹಿಂಸಾಚಾರಗಳು ವರದಿಯಾಗಿವೆ. ದೇಶದಲ್ಲಿ ಕೊರೊನಾ 2ನೇ ಅಲೆ ಪ್ರಬಲವಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ವಿಜಯೋತ್ಸವಗಳನ್ನು ನಡೆಸುವಂತಿಲ್ಲ ಎಂದು ನಿರ್ಬಂಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

(Violence Breaks out in West Bengal After Declaration of Results Bjp Alleges TMC Responsible for violence)

ಇದನ್ನೂ ಓದಿ: ಫಲಿತಾಂಶ ವಿಶ್ಲೇಷಣೆ: ಭಾರತದಲ್ಲಿ ಬಿಜೆಪಿ ಮೇಲುಗೈಗೆ ಕಡಿವಾಣ ಹಾಕಲು ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಬಳಸಿದ ತಂತ್ರಗಳು ಮಾದರಿಯಾಗಬಲ್ಲವೇ?

ಇದನ್ನೂ ಓದಿ: ಫಲಿತಾಂಶ ವಿಶ್ಲೇಷಣೆ: 40 ವರ್ಷಗಳ ನಂತರ ಕೇರಳದಲ್ಲಿ ಕಮ್ಯೂನಿಸ್ಟ್ ಪಕ್ಷಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟ ಪಿಣರಾಯಿ ವಿಜಯನ್

Published On - 10:47 pm, Sun, 2 May 21

ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ