AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀದಿ ನಾಡಲ್ಲಿ ಇನ್ನೂ ಮುಗಿದಿಲ್ಲ ಹಿಂಸಾಚಾರ..: ವಿಡಿಯೋ ಬಿಡುಗಡೆ ಮಾಡಿ, ಅಸಮಾಧಾನ ವ್ಯಕ್ತಪಡಿಸಿದ ಪಶ್ಚಿಮಬಂಗಾಳ ರಾಜ್ಯಪಾಲ

ಪಶ್ಚಿಮಬಂಗಾಳದಲ್ಲಿ ಈಗಲೂ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಡಿಜಿಪಿಗೆ ತಿಳಿಸಲಾಗಿದೆ. ಹಲವು ಸಂದರ್ಭಗಳಲ್ಲಿ ಅವರ ಗಮನಕ್ಕೆ ತರಲಾಗಿದೆ ಆದರೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ರಾಜ್ಯಪಾಲರು ತಿಳಿಸಿದ್ದಾರೆ.

ದೀದಿ ನಾಡಲ್ಲಿ ಇನ್ನೂ ಮುಗಿದಿಲ್ಲ ಹಿಂಸಾಚಾರ..: ವಿಡಿಯೋ ಬಿಡುಗಡೆ ಮಾಡಿ, ಅಸಮಾಧಾನ ವ್ಯಕ್ತಪಡಿಸಿದ ಪಶ್ಚಿಮಬಂಗಾಳ ರಾಜ್ಯಪಾಲ
ಜಗದೀಪ್​ ಧನ್​ಕರ್​​
TV9 Web
| Edited By: |

Updated on: Jun 06, 2021 | 12:52 PM

Share

ಪಶ್ಚಿಮಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಂತರವೂ ಹಿಂಸಾಚಾರ ನಡೆದಿದ್ದು ಗೊತ್ತೇ ಇದೆ. ಆದರೆ ಅದಿನ್ನೂ ಮುಗಿದಿಲ್ಲ..ಇನ್ನೂ ಹಿಂಸಾಚಾರ ನಡೆಯುತ್ತಲೇ ಇದೆ ಎಂದು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್​ ಧನ್​ಕರ್​ ಟ್ವೀಟ್​​ ಮಾಡಿದ್ದಾರೆ. ಈ ರಾಜ್ಯದಲ್ಲಿ ಹಿಂಸಾಚಾರ ಇನ್ನೂ ಮುಂದುವರಿಯುತ್ತಿದೆ. ಮನುಕುಲಕ್ಕೇ ಅವಮಾನವಾಗುವಂಥ ವಿಚಾರ ಇದು ಟ್ವೀಟ್​ ಮಾಡಿರುವ ಜಗದೀಪ್​ ಧನ್​ಕರ್​, ಹಿಂಸಾಚಾರದಿಂದ ಕೆಲವು ಮನೆಗಳು ಧ್ವಂಸಗೊಂಡಿದ್ದರ ಫೋಟೋಗಳನ್ನೂ ಶೇರ್​ ಮಾಡಿದ್ದಾರೆ. ಹೀಗೆ ವಿಧ್ವಂಸಕ ಕೃತ್ಯ ನಡೆಸುತ್ತಿರುವವರ ವಿರುದ್ಧ ರಾಜ್ಯ ಪೊಲೀಸರು ಯಾರೂ ಕ್ರಮ ಕೂಡ ಕೈಗೊಳ್ಳುತ್ತಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೇ 2ರಂದು ಚುನಾವಣಾ ಫಲಿತಾಂಶ ಹೊರಬೀಳುವ ದಿನದಿಂದಲೂ ಹಿಂಸಾಚಾರ ನಡೆಯುತ್ತಲೇ ಇದೆ. ಈ ಮೂಲಕ ಪ್ರಜಾಪ್ರಭುತ್ವದಲ್ಲಿ ಧೈರ್ಯವಾಗಿ ಪ್ರತಿಪಕ್ಷಗಳಿಗೆ ಮತಚಲಾಯಿಸುವವರಿಗೆ ಶಿಕ್ಷೆ ನೀಡಲಾಗುತ್ತಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ.

ಪಶ್ಚಿಮಬಂಗಾಳದಲ್ಲಿ ಈಗಲೂ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಡಿಜಿಪಿಗೆ ತಿಳಿಸಲಾಗಿದೆ. ಹಲವು ಸಂದರ್ಭಗಳಲ್ಲಿ ಅವರ ಗಮನಕ್ಕೆ ತರಲಾಗಿದೆ. ಇಂಥ ಹೀನ ಕೃತ್ಯಗಳಿಗೆ ಲೆಕ್ಕ ಚುಕ್ತಾ ಮಾಡುವುದು ಅನಿವಾರ್ಯ. ಪ್ರಜಾಪ್ರಭುತ್ವ ಎಂದಿಗೂ ದುರ್ಬಲಗೊಳ್ಳುವುದಿಲ್ಲ..ಕಾನೂನು ಮತ್ತು ಸುವ್ಯವಸ್ಥೆ ಇಲ್ಲಿ ಪುನಃಸ್ಥಾಪನೆಯಾಗುತ್ತದೆ ಎಂಬುದು ನನ್ನ ಆಶಯ ಎಂದು ಜಗದೀಪ್​ ಧನ್​ಕರ್​ ಹೇಳಿದ್ದಾರೆ.

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ