AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀದಿ ನಾಡಲ್ಲಿ ಇನ್ನೂ ಮುಗಿದಿಲ್ಲ ಹಿಂಸಾಚಾರ..: ವಿಡಿಯೋ ಬಿಡುಗಡೆ ಮಾಡಿ, ಅಸಮಾಧಾನ ವ್ಯಕ್ತಪಡಿಸಿದ ಪಶ್ಚಿಮಬಂಗಾಳ ರಾಜ್ಯಪಾಲ

ಪಶ್ಚಿಮಬಂಗಾಳದಲ್ಲಿ ಈಗಲೂ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಡಿಜಿಪಿಗೆ ತಿಳಿಸಲಾಗಿದೆ. ಹಲವು ಸಂದರ್ಭಗಳಲ್ಲಿ ಅವರ ಗಮನಕ್ಕೆ ತರಲಾಗಿದೆ ಆದರೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ರಾಜ್ಯಪಾಲರು ತಿಳಿಸಿದ್ದಾರೆ.

ದೀದಿ ನಾಡಲ್ಲಿ ಇನ್ನೂ ಮುಗಿದಿಲ್ಲ ಹಿಂಸಾಚಾರ..: ವಿಡಿಯೋ ಬಿಡುಗಡೆ ಮಾಡಿ, ಅಸಮಾಧಾನ ವ್ಯಕ್ತಪಡಿಸಿದ ಪಶ್ಚಿಮಬಂಗಾಳ ರಾಜ್ಯಪಾಲ
ಜಗದೀಪ್​ ಧನ್​ಕರ್​​
TV9 Web
| Edited By: |

Updated on: Jun 06, 2021 | 12:52 PM

Share

ಪಶ್ಚಿಮಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಂತರವೂ ಹಿಂಸಾಚಾರ ನಡೆದಿದ್ದು ಗೊತ್ತೇ ಇದೆ. ಆದರೆ ಅದಿನ್ನೂ ಮುಗಿದಿಲ್ಲ..ಇನ್ನೂ ಹಿಂಸಾಚಾರ ನಡೆಯುತ್ತಲೇ ಇದೆ ಎಂದು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್​ ಧನ್​ಕರ್​ ಟ್ವೀಟ್​​ ಮಾಡಿದ್ದಾರೆ. ಈ ರಾಜ್ಯದಲ್ಲಿ ಹಿಂಸಾಚಾರ ಇನ್ನೂ ಮುಂದುವರಿಯುತ್ತಿದೆ. ಮನುಕುಲಕ್ಕೇ ಅವಮಾನವಾಗುವಂಥ ವಿಚಾರ ಇದು ಟ್ವೀಟ್​ ಮಾಡಿರುವ ಜಗದೀಪ್​ ಧನ್​ಕರ್​, ಹಿಂಸಾಚಾರದಿಂದ ಕೆಲವು ಮನೆಗಳು ಧ್ವಂಸಗೊಂಡಿದ್ದರ ಫೋಟೋಗಳನ್ನೂ ಶೇರ್​ ಮಾಡಿದ್ದಾರೆ. ಹೀಗೆ ವಿಧ್ವಂಸಕ ಕೃತ್ಯ ನಡೆಸುತ್ತಿರುವವರ ವಿರುದ್ಧ ರಾಜ್ಯ ಪೊಲೀಸರು ಯಾರೂ ಕ್ರಮ ಕೂಡ ಕೈಗೊಳ್ಳುತ್ತಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೇ 2ರಂದು ಚುನಾವಣಾ ಫಲಿತಾಂಶ ಹೊರಬೀಳುವ ದಿನದಿಂದಲೂ ಹಿಂಸಾಚಾರ ನಡೆಯುತ್ತಲೇ ಇದೆ. ಈ ಮೂಲಕ ಪ್ರಜಾಪ್ರಭುತ್ವದಲ್ಲಿ ಧೈರ್ಯವಾಗಿ ಪ್ರತಿಪಕ್ಷಗಳಿಗೆ ಮತಚಲಾಯಿಸುವವರಿಗೆ ಶಿಕ್ಷೆ ನೀಡಲಾಗುತ್ತಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ.

ಪಶ್ಚಿಮಬಂಗಾಳದಲ್ಲಿ ಈಗಲೂ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಡಿಜಿಪಿಗೆ ತಿಳಿಸಲಾಗಿದೆ. ಹಲವು ಸಂದರ್ಭಗಳಲ್ಲಿ ಅವರ ಗಮನಕ್ಕೆ ತರಲಾಗಿದೆ. ಇಂಥ ಹೀನ ಕೃತ್ಯಗಳಿಗೆ ಲೆಕ್ಕ ಚುಕ್ತಾ ಮಾಡುವುದು ಅನಿವಾರ್ಯ. ಪ್ರಜಾಪ್ರಭುತ್ವ ಎಂದಿಗೂ ದುರ್ಬಲಗೊಳ್ಳುವುದಿಲ್ಲ..ಕಾನೂನು ಮತ್ತು ಸುವ್ಯವಸ್ಥೆ ಇಲ್ಲಿ ಪುನಃಸ್ಥಾಪನೆಯಾಗುತ್ತದೆ ಎಂಬುದು ನನ್ನ ಆಶಯ ಎಂದು ಜಗದೀಪ್​ ಧನ್​ಕರ್​ ಹೇಳಿದ್ದಾರೆ.

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ