AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಪೊಲೀಸ್ ಮತ್ತು ಪ್ರತಿಭಟನಾಕಾರರ ನಡುವಿನ ಸಂಘರ್ಷದಲ್ಲಿ ಹಲವರಿಗೆ ಗಾಯ

ಹಲವಾರು ಸ್ಥಳಗಳಲ್ಲಿ ಉದ್ರಿಕ್ತ ಪ್ರತಿಭಟನಾಕಾರರು ಪೊಲೀಸರು ಮತ್ತು ಇತರ ಭದ್ರತಾ ಏಜೆನ್ಸಿಗಳ ಸಿಬ್ಬಂದಿ ಜತೆ ಜಗಳವಾಡಿದ್ದಾರೆ. ಗುಂಪು ಚದುರಿಸಲು ಪೊಲೀಸರು ಲಾಠಿ ಮತ್ತು ಅಶ್ರುವಾಯು ಪ್ರಯೋಗಿಸಿದರು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಸಿಂಜಾಮೆಯಿ ಪೊಲೀಸ್ ಠಾಣೆಯ ಹೊರಗೆ ಗುಂಪು ಮತ್ತು ಪೊಲೀಸರ ನಡುವೆ ಘರ್ಷಣೆಗಳು ನಡೆದವು.ಅಲ್ಲಿ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಬಳಸಿದರು. ಮೂವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಪೊಲೀಸ್ ಮತ್ತು ಪ್ರತಿಭಟನಾಕಾರರ ನಡುವಿನ ಸಂಘರ್ಷದಲ್ಲಿ ಹಲವರಿಗೆ ಗಾಯ
ಮಣಿಪುರದಲ್ಲಿ ಹಿಂಸಾಚಾರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Sep 21, 2023 | 8:26 PM

Share

ಗುವಾಹಟಿ ಸೆಪ್ಟೆಂಬರ್ 21: ರಾಜ್ಯ ರಾಜಧಾನಿ ಇಂಫಾಲ್ ಸೇರಿದಂತೆ ಮಣಿಪುರದ (Manipur) ಕೆಲವು ಭಾಗಗಳಲ್ಲಿ ಹಿಂಸಾಚಾರ (Violence) ಮತ್ತೊಮ್ಮೆ ಉಲ್ಬಣಗೊಂಡಿದ್ದು, ವಿವಿಧ ಪ್ರದೇಶಗಳಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಸಂಘರ್ಷವುಂಟಾಗಿದೆ. ಪೊಲೀಸರು ಲಾಠಿ ಪ್ರಹಾರ ಮತ್ತು ಅಶ್ರುವಾಯು ಶೆಲ್‌ಗಳನ್ನು ಬಳಸಿದ್ದು, ಅನೇಕ ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಸೆಪ್ಟೆಂಬರ್ 16 ರಂದು ಭದ್ರತಾ ಪಡೆಗಳ ಸಮವಸ್ತ್ರದಲ್ಲಿ ಮತ್ತು ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಸಿಕ್ಕಿಬಿದ್ದ ಐವರನ್ನು ಬಂಧಿಸಿದ ನಂತರ ಪರಿಸ್ಥಿತಿ ಉಲ್ಬಣಗೊಳ್ಳುತ್ತಿದೆ.

ಇದು ಮಣಿಪುರ ಪ್ರದೇಶಗಳಲ್ಲಿ ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಯಿತು. ಬಂಧಿತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಸ್ಥಳೀಯರು ಮಂಗಳವಾರದಿಂದ ಕಣಿವೆಯಲ್ಲಿ 48 ಗಂಟೆಗಳ ಲಾಕ್‌ಡೌನ್ ಜಾರಿಗೊಳಿಸಿದ್ದಾರೆ. ಸೋಮವಾರ ಅನಧಿಕೃತ ಮುಷ್ಕರವಾಗಿತ್ತು. ಗುರುವಾರ ಮಧ್ಯಾಹ್ನ, ಮಹಿಳಾ ಪ್ರತಿಭಟನಾಕಾರರು ಬಂಧಿತರನ್ನು ಬಿಡುಗಡೆಗೆ ಒತ್ತಾಯಿಸಿ ಐದು ಕಣಿವೆ ಜಿಲ್ಲೆಗಳ ಪ್ರದೇಶಗಳಲ್ಲಿ ಪೊಲೀಸ್ ಠಾಣೆಗಳಿಗೆ ಮೆರವಣಿಗೆ ನಡೆಸಿದರು. ಇಲ್ಲದಿದ್ದಲ್ಲಿ ಅವರನ್ನೂ ಬಂಧಿಸಬೇಕು ಎಂದು ಆಗ್ರಹಿಸಿದರು.

ಹಲವಾರು ಸ್ಥಳಗಳಲ್ಲಿ ಉದ್ರಿಕ್ತ ಪ್ರತಿಭಟನಾಕಾರರು ಪೊಲೀಸರು ಮತ್ತು ಇತರ ಭದ್ರತಾ ಏಜೆನ್ಸಿಗಳ ಸಿಬ್ಬಂದಿ ಜತೆ ಜಗಳವಾಡಿದ್ದಾರೆ. ಗುಂಪು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದ್ದು ಅಶ್ರುವಾಯು ಪ್ರಯೋಗಿಸಿದರು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಸಿಂಜಾಮೆಯಿ ಪೊಲೀಸ್ ಠಾಣೆಯ ಹೊರಗೆ ಗುಂಪು ಮತ್ತು ಪೊಲೀಸರ ನಡುವೆ ಘರ್ಷಣೆಗಳು ನಡೆದವು.ಅಲ್ಲಿ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಬಳಸಿದರು. ಮೂವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ, ರಾಜ್ಯ ಆಡಳಿತವು ಕರ್ಫ್ಯೂ ಸಡಿಲಿಕೆ ಆದೇಶಗಳನ್ನು ಹಿಂತೆಗೆದುಕೊಂಡಿದೆ ಮತ್ತು ದೊಡ್ಡ ಕೂಟಗಳನ್ನು ನಿಷೇಧಿಸುವ ನಿಷೇಧದ ಆದೇಶಗಳನ್ನು ಪುನಃ ವಿಧಿಸಿದೆ.

ಇದನ್ನೂ ಓದಿ: ಮಣಿಪುರ: ಮನೆಯಿಂದಲೇ ಯೋಧನ ಅಪಹರಣ, ಹತ್ಯೆ

ಮಣಿಪುರದಲ್ಲಿ ಮೇ ತಿಂಗಳ ಆರಂಭದಿಂದಲೂ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ, ಇದರಲ್ಲಿ 150 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:25 pm, Thu, 21 September 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ