AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಈ ಫೋಟೋ ಹಿಮಾಚಲ ಪ್ರದೇಶದ ಮನಾಲಿಯದ್ದೇ ಆದರೂ..ಕೊವಿಡ್​ 19 2ನೇ ಅಲೆ ಸಂದರ್ಭದಲ್ಲ..!

Amigosblink ಸ್ಟುಡಿಯೋದ ಫೇಸ್​ಬುಕ್​ ಪೇಜ್​ನ ಅಡ್ಮಿನಿಸ್ಟ್ರೇಟರ್ ಆಗಿರುವ ಅಜಯ್​ ಕುಮಾರ್​ ಅವರನ್ನು ಬೂಮ್​ ಸಂಪರ್ಕಿಸಿ ಈ ಬಗ್ಗೆ ಪ್ರಶ್ನೆ ಮಾಡಿದೆ. ಈ ಫೋಟೋವನ್ನು ತೆಗೆದಿದ್ದು 2020ರ ಡಿಸೆಂಬರ್​ನಲ್ಲಿ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ.

Fact Check: ಈ ಫೋಟೋ ಹಿಮಾಚಲ ಪ್ರದೇಶದ ಮನಾಲಿಯದ್ದೇ ಆದರೂ..ಕೊವಿಡ್​ 19 2ನೇ ಅಲೆ ಸಂದರ್ಭದಲ್ಲ..!
ವೈರಲ್​ ಆದ ಫೋಟ)
TV9 Web
| Edited By: |

Updated on: Jul 13, 2021 | 6:43 PM

Share

ಇತ್ತೀಚೆಗೆ ಅಂದರೆ ಜುಲೈ ಪ್ರಾರಂಭದಲ್ಲಿ ಮನಾಲಿ(Manali) ಯ ಮಾಲ್​ ರಸ್ತೆಯ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್​ ಆಗಿತ್ತು. ವಿಪರೀತ ಜನಸಂದಣಿ ಇರುವ ಫೋಟೋವನ್ನು ಶೇರ್​ ಮಾಡಿಕೊಂಡಿದ್ದ ಕೆಲವು ಫೇಸ್​ಬುಕ್​, ಟ್ವಿಟರ್​ ಬಳಕೆದಾರರು ಕೊವಿಡ್​ 2ನೇ ಅಲೆಯ ಹೊತ್ತಲ್ಲಿ, ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಇಷ್ಟೊಂದು ಪ್ರವಾಸಿಗರು ನೆರೆದಿದ್ದಾರೆ. ಇಲ್ಲಿ ಯಾವುದೇ ಸಾಮಾಜಿಕ ಅಂತರ ನಿಯಮ ಪಾಲನೆಯಾಗುತ್ತಿಲ್ಲ ಎಂದು ಕ್ಯಾಪ್ಷನ್​ಗಳನ್ನು ಬರೆದಿದ್ದರು. ಅಲ್ಲಿ ಪ್ರವಾಸಿಗರು ನೆರೆದಿದ್ದನ್ನು ನೋಡಿದವರೆಲ್ಲ ಹುಬ್ಬೇರಿಸಿದ್ದರು.

ಆದರೆ ಈ ಫೋಟೋ ಹಳೇಯದಾಗಿದ್ದು, ಕೊವಿಡ್​ 19 ಎರಡನೇ ಅಲೆ ಬರುವುದಕ್ಕೂ ಮೊದಲೇ Amigosblink ಎಂಬ ಸ್ಟುಡಿಯೋ ತೆಗೆದಿದ್ದು ಎಂಬುದು ಫ್ಯಾಕ್ಟ್​ಚೆಕ್ (FactCheck) ​ನಿಂದ ಗೊತ್ತಾಗಿದೆ. ಆಲ್ಟ್​ ನ್ಯೂಸ್​ ಈ ಫೋಟೋವನ್ನು ರಿವರ್ಸ್​ ಸರ್ಚ್​ ಇಮೇಜ್​​ಗೆ ಹಾಕಿತ್ತು. ಆಗ ಇದೇ ಫೋಟೋ 2021ರ ಜನವರಿ 24ರಂದೂ ಸೋಷಿಯಲ್ ಮೀಡಿಯಾದಲ್ಲಿ ವೈರಲ್​ ಆಗಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ. ಅಷ್ಟಕ್ಕೂ ಈ ಫೋಟೋ ತೆಗೆಯಲ್ಪಟ್ಟಿದೆ ಎಂದೂ ಗೊತ್ತಾಗಿದೆ. ಹಾಗೇ, ಇದು ಹಿಮಾಚಲ ಪ್ರದೇಶ ಮನಾಲಿಯದ್ದೇ ಫೋಟೋ ಆದರೂ 2020ರ ಡಿಸೆಂಬರ್​​ 31ರಂದೇ ಕ್ಲಿಕ್ಕಿಸಿದ್ದು ಎಂದು ಬೂಮ್​ ಫ್ಯಾಕ್ಟ್​ಚೆಕ್​ ಕೂಡ ಸ್ಪಷ್ಟಪಡಿಸಿದೆ.

ಹಳೇ ಫೋಟೋವನ್ನು ಜುಲೈ 4ರಂದು ಅಮರ್​ಪ್ರೀತ್​ ಸಿಂಗ್​ ಎಂಬುವರು ಶೇರ್​ ಮಾಡಿಕೊಂಡಿದ್ದರು. ಈ ಫೋಟೋ ಮಾತನಾಡುತ್ತದೆ. ಆಸ್ಪತ್ರೆಯಲ್ಲಿ ರೂಂ ಇಲ್ಲ..ಹಾಗೇ ಮನಾಲಿಯ ಹೋಟೆಲ್​ಗಳಲ್ಲೂ ರೂಂ ಇಲ್ಲ ಎಂದು ಕ್ಯಾಪ್ಷನ್​ ಬರೆದಿದ್ದರು.

Amigosblink ಸ್ಟುಡಿಯೋದ ಫೇಸ್​ಬುಕ್​ ಪೇಜ್​ನ ಅಡ್ಮಿನಿಸ್ಟ್ರೇಟರ್ ಆಗಿರುವ ಅಜಯ್​ ಕುಮಾರ್​ ಅವರನ್ನು ಬೂಮ್​ ಸಂಪರ್ಕಿಸಿ ಈ ಬಗ್ಗೆ ಪ್ರಶ್ನೆ ಮಾಡಿದೆ. ಈ ಫೋಟೋವನ್ನು ತೆಗೆದಿದ್ದು 2020ರ ಡಿಸೆಂಬರ್​ನಲ್ಲಿ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಅದರ ಫೇಸ್​ಬುಕ್ ಪೇಜ್​​ನಲ್ಲಿ ಕಳೆದ ಡಿಸೆಂಬರ್​​ನಲ್ಲಿ ನೀಡಲಾದ ಲೈವ್​​ನಲ್ಲಿಯೂ ಈ ಸನ್ನಿವೇಶ ಕಂಡುಬಂದಿದೆ. ಹಾಗಾಗಿ ಇತ್ತೀಚೆಗೆ ತೆಗೆಯಲಾದ ಫೋಟೋ ಇದಲ್ಲ ಎಂದು ಆಲ್ಟ್​ ಮತ್ತು ಬೂಮ್​ ಮಾದ್ಯಮಗಳು ವರದಿ ಮಾಡಿವೆ.

ಆರು ತಿಂಗಳ ಹಿಂದೆಯೇ ವೈರಲ್​ ಆಗಿತ್ತು ಈ ಫೋಟೋ

ಇದನ್ನೂ ಓದಿ: ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಆರೋಪಿ ಅರುಣಾ ಕುಮಾರಿ ಪುರಾಣ ಬಿಚ್ಚಿಟ್ಟ ನಾಗವರ್ಧನ್, ನಾಗೇಂದ್ರ ಪ್ರಸಾದ್

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ