AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಈ ಫೋಟೋ ಹಿಮಾಚಲ ಪ್ರದೇಶದ ಮನಾಲಿಯದ್ದೇ ಆದರೂ..ಕೊವಿಡ್​ 19 2ನೇ ಅಲೆ ಸಂದರ್ಭದಲ್ಲ..!

Amigosblink ಸ್ಟುಡಿಯೋದ ಫೇಸ್​ಬುಕ್​ ಪೇಜ್​ನ ಅಡ್ಮಿನಿಸ್ಟ್ರೇಟರ್ ಆಗಿರುವ ಅಜಯ್​ ಕುಮಾರ್​ ಅವರನ್ನು ಬೂಮ್​ ಸಂಪರ್ಕಿಸಿ ಈ ಬಗ್ಗೆ ಪ್ರಶ್ನೆ ಮಾಡಿದೆ. ಈ ಫೋಟೋವನ್ನು ತೆಗೆದಿದ್ದು 2020ರ ಡಿಸೆಂಬರ್​ನಲ್ಲಿ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ.

Fact Check: ಈ ಫೋಟೋ ಹಿಮಾಚಲ ಪ್ರದೇಶದ ಮನಾಲಿಯದ್ದೇ ಆದರೂ..ಕೊವಿಡ್​ 19 2ನೇ ಅಲೆ ಸಂದರ್ಭದಲ್ಲ..!
ವೈರಲ್​ ಆದ ಫೋಟ)
TV9 Web
| Edited By: |

Updated on: Jul 13, 2021 | 6:43 PM

Share

ಇತ್ತೀಚೆಗೆ ಅಂದರೆ ಜುಲೈ ಪ್ರಾರಂಭದಲ್ಲಿ ಮನಾಲಿ(Manali) ಯ ಮಾಲ್​ ರಸ್ತೆಯ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್​ ಆಗಿತ್ತು. ವಿಪರೀತ ಜನಸಂದಣಿ ಇರುವ ಫೋಟೋವನ್ನು ಶೇರ್​ ಮಾಡಿಕೊಂಡಿದ್ದ ಕೆಲವು ಫೇಸ್​ಬುಕ್​, ಟ್ವಿಟರ್​ ಬಳಕೆದಾರರು ಕೊವಿಡ್​ 2ನೇ ಅಲೆಯ ಹೊತ್ತಲ್ಲಿ, ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಇಷ್ಟೊಂದು ಪ್ರವಾಸಿಗರು ನೆರೆದಿದ್ದಾರೆ. ಇಲ್ಲಿ ಯಾವುದೇ ಸಾಮಾಜಿಕ ಅಂತರ ನಿಯಮ ಪಾಲನೆಯಾಗುತ್ತಿಲ್ಲ ಎಂದು ಕ್ಯಾಪ್ಷನ್​ಗಳನ್ನು ಬರೆದಿದ್ದರು. ಅಲ್ಲಿ ಪ್ರವಾಸಿಗರು ನೆರೆದಿದ್ದನ್ನು ನೋಡಿದವರೆಲ್ಲ ಹುಬ್ಬೇರಿಸಿದ್ದರು.

ಆದರೆ ಈ ಫೋಟೋ ಹಳೇಯದಾಗಿದ್ದು, ಕೊವಿಡ್​ 19 ಎರಡನೇ ಅಲೆ ಬರುವುದಕ್ಕೂ ಮೊದಲೇ Amigosblink ಎಂಬ ಸ್ಟುಡಿಯೋ ತೆಗೆದಿದ್ದು ಎಂಬುದು ಫ್ಯಾಕ್ಟ್​ಚೆಕ್ (FactCheck) ​ನಿಂದ ಗೊತ್ತಾಗಿದೆ. ಆಲ್ಟ್​ ನ್ಯೂಸ್​ ಈ ಫೋಟೋವನ್ನು ರಿವರ್ಸ್​ ಸರ್ಚ್​ ಇಮೇಜ್​​ಗೆ ಹಾಕಿತ್ತು. ಆಗ ಇದೇ ಫೋಟೋ 2021ರ ಜನವರಿ 24ರಂದೂ ಸೋಷಿಯಲ್ ಮೀಡಿಯಾದಲ್ಲಿ ವೈರಲ್​ ಆಗಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ. ಅಷ್ಟಕ್ಕೂ ಈ ಫೋಟೋ ತೆಗೆಯಲ್ಪಟ್ಟಿದೆ ಎಂದೂ ಗೊತ್ತಾಗಿದೆ. ಹಾಗೇ, ಇದು ಹಿಮಾಚಲ ಪ್ರದೇಶ ಮನಾಲಿಯದ್ದೇ ಫೋಟೋ ಆದರೂ 2020ರ ಡಿಸೆಂಬರ್​​ 31ರಂದೇ ಕ್ಲಿಕ್ಕಿಸಿದ್ದು ಎಂದು ಬೂಮ್​ ಫ್ಯಾಕ್ಟ್​ಚೆಕ್​ ಕೂಡ ಸ್ಪಷ್ಟಪಡಿಸಿದೆ.

ಹಳೇ ಫೋಟೋವನ್ನು ಜುಲೈ 4ರಂದು ಅಮರ್​ಪ್ರೀತ್​ ಸಿಂಗ್​ ಎಂಬುವರು ಶೇರ್​ ಮಾಡಿಕೊಂಡಿದ್ದರು. ಈ ಫೋಟೋ ಮಾತನಾಡುತ್ತದೆ. ಆಸ್ಪತ್ರೆಯಲ್ಲಿ ರೂಂ ಇಲ್ಲ..ಹಾಗೇ ಮನಾಲಿಯ ಹೋಟೆಲ್​ಗಳಲ್ಲೂ ರೂಂ ಇಲ್ಲ ಎಂದು ಕ್ಯಾಪ್ಷನ್​ ಬರೆದಿದ್ದರು.

Amigosblink ಸ್ಟುಡಿಯೋದ ಫೇಸ್​ಬುಕ್​ ಪೇಜ್​ನ ಅಡ್ಮಿನಿಸ್ಟ್ರೇಟರ್ ಆಗಿರುವ ಅಜಯ್​ ಕುಮಾರ್​ ಅವರನ್ನು ಬೂಮ್​ ಸಂಪರ್ಕಿಸಿ ಈ ಬಗ್ಗೆ ಪ್ರಶ್ನೆ ಮಾಡಿದೆ. ಈ ಫೋಟೋವನ್ನು ತೆಗೆದಿದ್ದು 2020ರ ಡಿಸೆಂಬರ್​ನಲ್ಲಿ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಅದರ ಫೇಸ್​ಬುಕ್ ಪೇಜ್​​ನಲ್ಲಿ ಕಳೆದ ಡಿಸೆಂಬರ್​​ನಲ್ಲಿ ನೀಡಲಾದ ಲೈವ್​​ನಲ್ಲಿಯೂ ಈ ಸನ್ನಿವೇಶ ಕಂಡುಬಂದಿದೆ. ಹಾಗಾಗಿ ಇತ್ತೀಚೆಗೆ ತೆಗೆಯಲಾದ ಫೋಟೋ ಇದಲ್ಲ ಎಂದು ಆಲ್ಟ್​ ಮತ್ತು ಬೂಮ್​ ಮಾದ್ಯಮಗಳು ವರದಿ ಮಾಡಿವೆ.

ಆರು ತಿಂಗಳ ಹಿಂದೆಯೇ ವೈರಲ್​ ಆಗಿತ್ತು ಈ ಫೋಟೋ

ಇದನ್ನೂ ಓದಿ: ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಆರೋಪಿ ಅರುಣಾ ಕುಮಾರಿ ಪುರಾಣ ಬಿಚ್ಚಿಟ್ಟ ನಾಗವರ್ಧನ್, ನಾಗೇಂದ್ರ ಪ್ರಸಾದ್

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​