AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಶಿಶುಗಳಿಗೆ ಜನ್ಮ ನೀಡಿ 7 ಹೆಣ್ಣುಮಕ್ಕಳ ತಾಯಿಯಾದ ಮಹಿಳೆ!

ಉತ್ತರ ಪ್ರದೇಶದ ಕನ್ನೌಜ್​​ನಲ್ಲಿ 30 ವರ್ಷದ ಮಹಿಳೆಯೊಬ್ಬರು 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸ್ಥಳೀಯ ನರ್ಸಿಂಗ್ ಹೋಂನಲ್ಲಿ ಆಕೆ 4 ಮಕ್ಕಳನ್ನು ಹೆತ್ತಿದ್ದಾರೆ. ಇದು ಬಹಳ ಅಪರೂಪದ ಘಟನೆಯಾಗಿದೆ. ಅದಕ್ಕಿಂತಲೂ ವಿಶೇಷ ಸಂಗತಿಯೆಂದರೆ ಈಗಾಗಲೇ 3 ಹೆಣ್ಣು ಮಕ್ಕಳ ತಾಯಿಯಾಗಿರುವ ಆ ಮಹಿಳೆ ಇದೀಗ 4 ಹೆಣ್ಣುಮಕ್ಕಳನ್ನು ಹೆರುವ ಮೂಲಕ 7 ಹೆಣ್ಣುಮಕ್ಕಳ ತಾಯಿಯಾಗಿದ್ದಾರೆ! ಈ ಎಲ್ಲ ಮಕ್ಕಳೂ ನಾರ್ಮಲ್ ಡೆಲಿವರಿ ಮೂಲಕ ಜನಿಸಿವೆ.

4 ಶಿಶುಗಳಿಗೆ ಜನ್ಮ ನೀಡಿ 7 ಹೆಣ್ಣುಮಕ್ಕಳ ತಾಯಿಯಾದ ಮಹಿಳೆ!
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Dec 23, 2025 | 9:56 PM

Share

ನವದೆಹಲಿ, ಡಿಸೆಂಬರ್ 23: ಉತ್ತರ ಪ್ರದೇಶದಲ್ಲೊಂದು ಅತ್ಯಂತ ಅಪರೂಪದ ಘಟನೆ ನಡೆದಿದೆ. ಮಹಿಳೆಯೊಬ್ಬರು ನಾರ್ಮಲ್ ಡೆಲಿವರಿ ಮೂಲಕ 4 ಹೆಣ್ಣುಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಕೆ ಈಗಾಗಲೇ 3 ಹೆಣ್ಣುಮಕ್ಕಳ ತಾಯಿಯಾಗಿದ್ದು, ಒಟ್ಟಾರೆ 7 ಮಕ್ಕಳ ತಾಯಿಯಾಗಿದ್ದಾರೆ. ಇವರೆಲ್ಲರೂ ನಾರ್ಮಲ್ ಡೆಲಿವರಿ ಮೂಲಕವೇ ಜನಿಸಿದ್ದು ಎಂಬುದು ವಿಶೇಷ.

ಉತ್ತರ ಪ್ರದೇಶದ ಕನ್ನೌಜ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 30 ವರ್ಷದ ಮಹಿಳೆ ವೈಷ್ಣವಿ ನರ್ಸಿಂಗ್ ಹೋಂನಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ಅಪರೂಪದ ಘಟನೆ ಆಸ್ಪತ್ರೆ ಸಿಬ್ಬಂದಿಯನ್ನು ಅಚ್ಚರಿಗೊಳಿಸಿದೆ. ಡಿಸೆಂಬರ್ 21ರಂದು ಅನಿತಾ ಎಂಬ ಮಹಿಳೆ ನಾರ್ಮಲ್ ಡೆಲಿವರಿ ಮೂಲಕ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಅನಿತಾ ಜನ್ಮ ನೀಡಿದ 4 ಹೆಣ್ಣು ಮಕ್ಕಳ ಜನನಗಳ ನಡುವೆ ಎರಡರಿಂದ ಮೂರು ನಿಮಿಷಗಳ ಅಂತರವಿತ್ತು.

ಇದನ್ನೂ ಓದಿ: ಮೈ ಮೇಲೆ ಕಕ್ಕ ಮಾಡಿದ್ದಕ್ಕೆ ತಾಯಿಯ ಪ್ರಿಯಕರನಿಂದ 3 ವರ್ಷದ ಮಗುವಿನ ಕೊಲೆ!

ತಥಿಯಾ ಪಟ್ಟಣದ ನಿವಾಸಿ 30 ವರ್ಷದ ಅನಿತಾ ಅವರನ್ನು ಡಿಸೆಂಬರ್ 20ರಂದು ಅವರ ಪತಿ ಅನುಜ್ ಸಿಂಗ್ ಹೆರಿಗೆಗಾಗಿ ಬರ್ಧೈಯಾ ರಸ್ತೆಯಲ್ಲಿರುವ ವೈಷ್ಣವಿ ನರ್ಸಿಂಗ್ ಹೋಂಗೆ ದಾಖಲಿಸಿದ್ದರು. ಇಬ್ಬರು ಹೆಣ್ಣು ಮಕ್ಕಳ ತೂಕ ಸುಮಾರು ಒಂದು ಕೆಜಿ ಆಗಿದ್ದರೆ, ಉಳಿದ ಶಿಶುಗಳು ಒಂದೂವರೆ ಕೆಜಿಗಿಂತಲೂ ಹೆಚ್ಚು ತೂಕವಿತ್ತು.

ಇದೇ ರೀತಿ ಕೆಲವು ದಿನಗಳ ಹಿಂದೆ, ಮಹಾರಾಷ್ಟ್ರದ ಸತಾರಾದ ಜಿಲ್ಲಾ ಆಸ್ಪತ್ರೆಯಲ್ಲಿ 30 ವರ್ಷದ ಮಹಿಳೆ 4 ಮಕ್ಕಳಿಗೆ ಜನ್ಮ ನೀಡಿದ್ದರು. ಅವರಿಗೂ ಮೂವರು ಮಕ್ಕಳಿದ್ದರು. ಈ ಮೂಲಕ ಅವರು ಕೂಡ 7 ಮಕ್ಕಳ ತಾಯಿಯಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!