AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮದುವೆ ಮೆರವಣಿಗೆಯ ವಾದ್ಯದಿಂದ ಹೃದಯಾಘಾತವಾಗಿ 63 ಕೋಳಿಗಳ ಸಾವು

ಭಾನುವಾರ ರಾತ್ರಿ ಒಡಿಶಾದಲ್ಲಿ ಮದುವೆಯ ಮೆರವಣಿಗೆ ಕೋಳಿ ಫಾರ್ಮ್ ಅನ್ನು ಹಾದುಹೋದಾಗ ವಾದ್ಯದ ಶಬ್ದದಿಂದ 63 ಕೋಳಿಗಳು ಮೃತಪಟ್ಟಿವೆ

Viral News: ಮದುವೆ ಮೆರವಣಿಗೆಯ ವಾದ್ಯದಿಂದ ಹೃದಯಾಘಾತವಾಗಿ 63 ಕೋಳಿಗಳ ಸಾವು
ಒಡಿಶಾದ ಮದುವೆ ಮೆರವಣಿಗೆಯಲ್ಲಿ ಸಂಗೀತ ಕಾರ್ಯಕ್ರಮ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 24, 2021 | 4:24 PM

ಭುವನೇಶ್ವರ: ಭಾರತದಲ್ಲಿ ಮದುವೆಯೆಂದರೆ ಅಲ್ಲಿ ಸಂಭ್ರಮಕ್ಕೇನೂ ಕೊರತೆಯಿಲ್ಲ. ಆದರೆ, ಸಂಗೀತ, ಪಟಾಕಿ, ನೃತ್ಯ, ಬ್ಯಾಂಡ್‌ನೊಂದಿಗೆ ನಡೆದ ಸಾಂಪ್ರದಾಯಿಕ ಭಾರತೀಯ ವಿವಾಹದ ಮೆರವಣಿಗೆಯಿಂದಾಗಿ 63 ಕೋಳಿಗಳು ಸಾವನ್ನಪ್ಪಿವೆ. ಭಾನುವಾರ ರಾತ್ರಿ ಒಡಿಶಾದಲ್ಲಿ ಮದುವೆಯ ಮೆರವಣಿಗೆ ಕೋಳಿ ಫಾರ್ಮ್ ಅನ್ನು ಹಾದುಹೋದಾಗ ಆ ಗಡಚಿಕ್ಕುವ ಶಬ್ದದಿಂದ 63 ಕೋಳಿಗಳು ಮೃತಪಟ್ಟಿವೆ ಎಂದು ಕೋಳಿ ಫಾರಂ ಮಾಲೀಕ ರಂಜಿತ್ ಕುಮಾರ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.

ಮದುವೆಯ ಮೆರವಣಿಗೆ ಸಂಗೀತವು ತುಂಬಾ ಗದ್ದಲದಿಂದ ಕೂಡಿತ್ತು. ಅದು ಕೋಳಿಗಳನ್ನು ಭಯಭೀತಗೊಳಿಸಿದ್ದರಿಂದ ಧ್ವನಿಯನ್ನು ಕಡಿಮೆ ಮಾಡಲು ನಾನು ಬ್ಯಾಂಡ್ ನಿರ್ವಾಹಕರ ಬಳಿ ಮನವಿ ಮಾಡಿದೆ. ಆದರೆ ಅವರು ಕೇಳಲಿಲ್ಲ. ವರನ ಕಡೆಯ ಸಂಬಂಧಿಕರು ನನ್ನ ಜೊತೆ ಜಗಳವಾಡಿ ಮುಂದೆ ಹೋದರು ಎಂದು ಅವರು ದೂರಿನಲ್ಲಿ ವಿವರಿಸಿದ್ದಾರೆ.

ಮದುವೆಯ ಮೆರವಣಿಗೆ ಗದ್ದಲದಿಂದ ಹೆದರಿದ ಕೋಳಿಗಳು ಹೃದಯಾಘಾತದಿಂದ ಸಾವನ್ನಪ್ಪಿವೆ ಎಂದು ಪಶುವೈದ್ಯರು ತಿಳಿಸಿದ್ದಾರೆ. ಮದುವೆಯನ್ನು ಆಯೋಜಿಸಿದ್ದವರು ಇದಕ್ಕೆ ಪರಿಹಾರವನ್ನು ನೀಡಲು ನಿರಾಕರಿಸಿದ್ದರಿಂದ ಪೊಲೀಸರಿಗೆ ದೂರು ನೀಡಲಾಯಿತು.

ಪ್ರಾಣಿಗಳ ವರ್ತನೆ ಕುರಿತು ಪುಸ್ತಕವನ್ನು ಬರೆದಿರುವ ಪ್ರಾಣಿಶಾಸ್ತ್ರದ ಪ್ರಾಧ್ಯಾಪಕ ಸೂರ್ಯಕಾಂತ ಮಿಶ್ರಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ದೊಡ್ಡ ಶಬ್ದವು ಪಕ್ಷಿಗಳಲ್ಲಿ ಹೃದಯಾಘಾತ ಉಂಟಾಗುತ್ತದೆ. ಕೋಳಿಗಳು ಸಿರ್ಕಾಡಿಯನ್ ಲಯದಿಂದ ನಿಯಂತ್ರಿಸಲ್ಪಡುತ್ತವೆ. ಜೋರಾಗಿ ಸಂಗೀತದ ಕಾರಣದಿಂದಾಗಿ ಒತ್ತಡದಿಂದ ಕೋಳಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದಿದ್ದಾರೆ.

ತಮ್ಮ ವಿರುದ್ಧ ಕೇಸ್ ದಾಖಲಿಸಿದ್ದು ಗೊತ್ತಾದ ನಂತರ ಮದುವೆಯ ಆಯೋಜಕರು ಬಂದು ಕೋಳಿ ಫಾರಂ ಮಾಲೀಕರ ಜೊತೆ ಸಂಧಾನ ಮಾಡಿಕೊಂಡಿದ್ದಾರೆ. ಇದರಿಂದ ಕೋಳಿ ಫಾರಂ ಮಾಲೀಕ ಕೇಸನ್ನು ವಾಪಾಸ್ ಪಡೆದಿದ್ದಾರೆ. ಹೀಗಾಗಿ, ಕೋಳಿಗಳ ಸಾವಿಗೆ ಕಾರಣರಾದವರ ವಿರುದ್ಧ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ.

ಇದನ್ನೂ ಓದಿ: Viral Video: ಹೂವಿನ ಟೋಪಿ ಧರಿಸಿ ನಿದ್ರಿಸುತ್ತಿರುವ ಮುದ್ದಾದ ಬಾತುಕೋಳಿ; ಕ್ಯೂಟ್ ವಿಡಿಯೊ ನೋಡಿ

ಅಚ್ಚರಿ ಘಟನೆ! ಪುನೀತ್ ರಾಜ್​ಕುಮಾರ್ ಸಮಾಧಿಗೆ ಪ್ರದಕ್ಷಿಣೆ ಹಾಕಿದ ಕೋಳಿ

ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ