Viral News: ಅಯೋಧ್ಯೆಯ ರಾಮ ಮಂದಿರದ ದರ್ಶನಕ್ಕೆ ಚಪ್ಪಲಿ ಧರಿಸದೆ 11 ವರ್ಷ ಕಾದ ಭಕ್ತ

ಅಯೋಧ್ಯೆಯ ಭಗವಾನ್ ಶ್ರೀರಾಮನ ದೇವಾಲಯವನ್ನು ನಿರ್ಮಿಸಿದಾಗ ಮಧ್ಯಪ್ರದೇಶದ ಭಕ್ತ ಸೈಕಲ್​ನಲ್ಲಿ ರಾಮನ ದರ್ಶನಕ್ಕೆ ತೆರಳಿದರು. ರಾಮನನ್ನು ಕಣ್ತುಂಬಿಕೊಂಡ ನಂತರ ಇದೀಗ 11 ವರ್ಷಗಳ ಬಳಿಕ ಅವರು ಚಪ್ಪಲಿ ಧರಿಸಲಿದ್ದಾರೆ.

Viral News: ಅಯೋಧ್ಯೆಯ ರಾಮ ಮಂದಿರದ ದರ್ಶನಕ್ಕೆ ಚಪ್ಪಲಿ ಧರಿಸದೆ 11 ವರ್ಷ ಕಾದ ಭಕ್ತ
ಶ್ರೀರಾಮ ಲಲ್ಲಾ
Follow us
|

Updated on: Aug 17, 2024 | 7:48 PM

ಲಾಹೋರ್: ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯ ಭಕ್ತರೊಬ್ಬರು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ದೊಡ್ಡ ದೇವಾಲಯವನ್ನು ನಿರ್ಮಿಸುವವರೆಗೆ 11 ವರ್ಷಗಳ ಕಾಲ ಚಪ್ಪಲಿಯನ್ನು ಧರಿಸುವುದಿಲ್ಲ ಎಂದು ಶಪಥ ಮಾಡಿದ್ದರು. ಅವರು ಶ್ರೀರಾಮನ ಭಕ್ತರಾಗಿದ್ದಾರೆ. ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ದೇವಾಲಯವನ್ನು ನಿರ್ಮಿಸಿದಾಗ ಅವರು ರಾಮನ ದರ್ಶನಕ್ಕೆ ಸೈಕಲ್​ನಲ್ಲಿ ತೆರಳಿದರು. ಇದೀಗ ರಾಮನ ದರ್ಶನದ ಬಳಿಕ 11 ವರ್ಷಗಳ ನಂತರ ಚಪ್ಪಲಿ ಧರಿಸಲಿದ್ದಾರೆ.

ರಾಮನ ಭಕ್ತ ಗಜಾನನ ಮಧ್ಯಪ್ರದೇಶದ ಲೋಣಿ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. 11 ವರ್ಷಗಳ ಹಿಂದೆ ನಾನು ಅಯೋಧ್ಯೆಯಲ್ಲಿ ಶ್ರೀರಾಮನಿಗೆ ದೊಡ್ಡ ಮಂದಿರವನ್ನು ನಿರ್ಮಿಸಿದ ನಂತರ ಮತ್ತೆ ಬರುವುದಾಗಿ ಪ್ರತಿಜ್ಞೆ ಮಾಡಿದ್ದೆ. ಮಂದಿರ ನಿರ್ಮಾಣ ಆಗುವವರೆಗೂ ನಾನು ಚಪ್ಪಲಿ ಹಾಕುವುದಿಲ್ಲ ಎಂದು ಶಪಥ ಮಾಡಿದ್ದೆ. ಈಗ ಶ್ರೀರಾಮನ ದೊಡ್ಡ ದೇವಾಲಯವನ್ನು ನಿರ್ಮಿಸಲಾಗಿದೆ. ನಾನು ಸೈಕಲ್​ನಲ್ಲಿ ಭಗವಾನ್ ಶ್ರೀರಾಮನ ಪಟ್ಟಣವಾದ ಅಯೋಧ್ಯೆಗೆ ತಲುಪಿ ರಾಮಲಲ್ಲಾನ ದರ್ಶನ ಪಡೆದೆ. ಈಗ 11 ವರ್ಷಗಳ ನಂತರ ಮತ್ತೆ ಚಪ್ಪಲಿ ಹಾಕಲು ಆರಂಭಿಸುತ್ತೇನೆ. ನಾನು 11 ವರ್ಷಗಳ ಕಾಲ ಚಪ್ಪಲಿ ಇಲ್ಲದೆ ಬದುಕಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: Ayodhya: ಅಯೋಧ್ಯೆ ಪ್ರವಾಸದ ವೇಳೆ ರಾಮ ಮಂದಿರದಲ್ಲಿ ಪೂಜೆ ಸಲ್ಲಿಸಿದ ಸಿಎಂ ಯೋಗಿ ಆದಿತ್ಯನಾಥ್

ಸದ್ಯಕ್ಕೆ ಗಜಾನನ ನೀರಿನ ವ್ಯಾಪಾರ ನಡೆಸುತ್ತಿದ್ದಾರೆ. ದೇವರು ತನ್ನ ಭಕ್ತರಿಗೆ ತುಂಬಾ ಸಹಾಯ ಮಾಡುತ್ತಾನೆ. ನನ್ನ ಶ್ರೀರಾಮ ಲಲ್ಲಾ ದೊಡ್ಡ ದೇವಸ್ಥಾನದಲ್ಲಿ ಕುಳಿತಾಗ ಮಾತ್ರ ನಾನು ಚಪ್ಪಲಿಯನ್ನು ಧರಿಸುತ್ತೇನೆ ಎಂದು ಹರಕೆ ಹೊತ್ತು ನಾನು ಚಪ್ಪಲಿಯನ್ನು ಧರಿಸುವುದನ್ನು ನಿಲ್ಲಿಸಿದೆ ಎಂದು ಅವರು ಹೇಳುತ್ತಾರೆ. ನಾನು ಅನೇಕ ಕಷ್ಟಗಳನ್ನು ಎದುರಿಸಬೇಕಾಯಿತು. ಆದರೆ ನಾನು ನನ್ನ ಪ್ರತಿಜ್ಞೆಯನ್ನು ಮುರಿಯಲು ಬಿಡಲಿಲ್ಲ ಎಂದು 40 ವರ್ಷದ ಗಜಾನನ ಹೇಳಿದ್ದಾರೆ.

ನಾನು ಭಗವಾನ್ ಶ್ರೀರಾಮನನ್ನು ಭೇಟಿ ಮಾಡಿದ್ದೇನೆ. ಆದರೆ ತಿಂಗಳ ಕೊನೆಯ ಸೋಮವಾರದಂದು ನನ್ನ ಮನೆಯಲ್ಲಿ ಶ್ರಾವಣ ಪೂಜೆಯನ್ನು ಮಾಡಬೇಕು. ಅದರ ನಂತರ, ನಾನು ಚಪ್ಪಲಿ ಧರಿಸಲು ಪ್ರಾರಂಭಿಸುತ್ತೇನೆ. ಅದಕ್ಕೇ ಈಗಲೂ ಚಪ್ಪಲಿ ಇಲ್ಲದೇ ಓಡಾಡುತ್ತಿದ್ದೇನೆ. ನನ್ನ ಸಂಕಲ್ಪ ನೆರವೇರಲಿದೆ. ಇನ್ನು ನಾನು ಶ್ರೀರಾಮನನ್ನು ಭೇಟಿ ಮಾಡಲು ಪ್ರತಿ ವರ್ಷ ಅಯೋಧ್ಯೆಗೆ ಹೋಗುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ರಾಮಲಲ್ಲಾ ಮೂರ್ತಿ ಶಿಲ್ಪಿ ಅರುಣ್ ಯೋಗಿರಾಜ್​ಗೆ ವೀಸಾ ನಿರಾಕರಿಸಿದ ಅಮೆರಿಕ

ರಾಮಮಂದಿರ ಟ್ರಸ್ಟ್ ಸ್ಥಳೀಯ ಜನರಿಗೆ ಮತ್ತು ಸಂತರಿಗೆ ದೊಡ್ಡ ಉಡುಗೊರೆಯನ್ನು ನೀಡುತ್ತದೆ. ರಾಮ್ ನಗರಿಯಲ್ಲಿ ವಾಸಿಸುವ ಸಂತರು, ಮಹಂತರು ಮತ್ತು ಸ್ಥಳೀಯ ಜನರು ಯಾವುದೇ ಜನಸಂದಣಿಯನ್ನು ಎದುರಿಸದೆ ರಾಮ್ ಲಲ್ಲಾನ ದರ್ಶನವನ್ನು ಪಡೆಯಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!