AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಅಯೋಧ್ಯೆಯ ರಾಮ ಮಂದಿರದ ದರ್ಶನಕ್ಕೆ ಚಪ್ಪಲಿ ಧರಿಸದೆ 11 ವರ್ಷ ಕಾದ ಭಕ್ತ

ಅಯೋಧ್ಯೆಯ ಭಗವಾನ್ ಶ್ರೀರಾಮನ ದೇವಾಲಯವನ್ನು ನಿರ್ಮಿಸಿದಾಗ ಮಧ್ಯಪ್ರದೇಶದ ಭಕ್ತ ಸೈಕಲ್​ನಲ್ಲಿ ರಾಮನ ದರ್ಶನಕ್ಕೆ ತೆರಳಿದರು. ರಾಮನನ್ನು ಕಣ್ತುಂಬಿಕೊಂಡ ನಂತರ ಇದೀಗ 11 ವರ್ಷಗಳ ಬಳಿಕ ಅವರು ಚಪ್ಪಲಿ ಧರಿಸಲಿದ್ದಾರೆ.

Viral News: ಅಯೋಧ್ಯೆಯ ರಾಮ ಮಂದಿರದ ದರ್ಶನಕ್ಕೆ ಚಪ್ಪಲಿ ಧರಿಸದೆ 11 ವರ್ಷ ಕಾದ ಭಕ್ತ
ಶ್ರೀರಾಮ ಲಲ್ಲಾ
ಸುಷ್ಮಾ ಚಕ್ರೆ
|

Updated on: Aug 17, 2024 | 7:48 PM

Share

ಲಾಹೋರ್: ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯ ಭಕ್ತರೊಬ್ಬರು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ದೊಡ್ಡ ದೇವಾಲಯವನ್ನು ನಿರ್ಮಿಸುವವರೆಗೆ 11 ವರ್ಷಗಳ ಕಾಲ ಚಪ್ಪಲಿಯನ್ನು ಧರಿಸುವುದಿಲ್ಲ ಎಂದು ಶಪಥ ಮಾಡಿದ್ದರು. ಅವರು ಶ್ರೀರಾಮನ ಭಕ್ತರಾಗಿದ್ದಾರೆ. ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ದೇವಾಲಯವನ್ನು ನಿರ್ಮಿಸಿದಾಗ ಅವರು ರಾಮನ ದರ್ಶನಕ್ಕೆ ಸೈಕಲ್​ನಲ್ಲಿ ತೆರಳಿದರು. ಇದೀಗ ರಾಮನ ದರ್ಶನದ ಬಳಿಕ 11 ವರ್ಷಗಳ ನಂತರ ಚಪ್ಪಲಿ ಧರಿಸಲಿದ್ದಾರೆ.

ರಾಮನ ಭಕ್ತ ಗಜಾನನ ಮಧ್ಯಪ್ರದೇಶದ ಲೋಣಿ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. 11 ವರ್ಷಗಳ ಹಿಂದೆ ನಾನು ಅಯೋಧ್ಯೆಯಲ್ಲಿ ಶ್ರೀರಾಮನಿಗೆ ದೊಡ್ಡ ಮಂದಿರವನ್ನು ನಿರ್ಮಿಸಿದ ನಂತರ ಮತ್ತೆ ಬರುವುದಾಗಿ ಪ್ರತಿಜ್ಞೆ ಮಾಡಿದ್ದೆ. ಮಂದಿರ ನಿರ್ಮಾಣ ಆಗುವವರೆಗೂ ನಾನು ಚಪ್ಪಲಿ ಹಾಕುವುದಿಲ್ಲ ಎಂದು ಶಪಥ ಮಾಡಿದ್ದೆ. ಈಗ ಶ್ರೀರಾಮನ ದೊಡ್ಡ ದೇವಾಲಯವನ್ನು ನಿರ್ಮಿಸಲಾಗಿದೆ. ನಾನು ಸೈಕಲ್​ನಲ್ಲಿ ಭಗವಾನ್ ಶ್ರೀರಾಮನ ಪಟ್ಟಣವಾದ ಅಯೋಧ್ಯೆಗೆ ತಲುಪಿ ರಾಮಲಲ್ಲಾನ ದರ್ಶನ ಪಡೆದೆ. ಈಗ 11 ವರ್ಷಗಳ ನಂತರ ಮತ್ತೆ ಚಪ್ಪಲಿ ಹಾಕಲು ಆರಂಭಿಸುತ್ತೇನೆ. ನಾನು 11 ವರ್ಷಗಳ ಕಾಲ ಚಪ್ಪಲಿ ಇಲ್ಲದೆ ಬದುಕಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: Ayodhya: ಅಯೋಧ್ಯೆ ಪ್ರವಾಸದ ವೇಳೆ ರಾಮ ಮಂದಿರದಲ್ಲಿ ಪೂಜೆ ಸಲ್ಲಿಸಿದ ಸಿಎಂ ಯೋಗಿ ಆದಿತ್ಯನಾಥ್

ಸದ್ಯಕ್ಕೆ ಗಜಾನನ ನೀರಿನ ವ್ಯಾಪಾರ ನಡೆಸುತ್ತಿದ್ದಾರೆ. ದೇವರು ತನ್ನ ಭಕ್ತರಿಗೆ ತುಂಬಾ ಸಹಾಯ ಮಾಡುತ್ತಾನೆ. ನನ್ನ ಶ್ರೀರಾಮ ಲಲ್ಲಾ ದೊಡ್ಡ ದೇವಸ್ಥಾನದಲ್ಲಿ ಕುಳಿತಾಗ ಮಾತ್ರ ನಾನು ಚಪ್ಪಲಿಯನ್ನು ಧರಿಸುತ್ತೇನೆ ಎಂದು ಹರಕೆ ಹೊತ್ತು ನಾನು ಚಪ್ಪಲಿಯನ್ನು ಧರಿಸುವುದನ್ನು ನಿಲ್ಲಿಸಿದೆ ಎಂದು ಅವರು ಹೇಳುತ್ತಾರೆ. ನಾನು ಅನೇಕ ಕಷ್ಟಗಳನ್ನು ಎದುರಿಸಬೇಕಾಯಿತು. ಆದರೆ ನಾನು ನನ್ನ ಪ್ರತಿಜ್ಞೆಯನ್ನು ಮುರಿಯಲು ಬಿಡಲಿಲ್ಲ ಎಂದು 40 ವರ್ಷದ ಗಜಾನನ ಹೇಳಿದ್ದಾರೆ.

ನಾನು ಭಗವಾನ್ ಶ್ರೀರಾಮನನ್ನು ಭೇಟಿ ಮಾಡಿದ್ದೇನೆ. ಆದರೆ ತಿಂಗಳ ಕೊನೆಯ ಸೋಮವಾರದಂದು ನನ್ನ ಮನೆಯಲ್ಲಿ ಶ್ರಾವಣ ಪೂಜೆಯನ್ನು ಮಾಡಬೇಕು. ಅದರ ನಂತರ, ನಾನು ಚಪ್ಪಲಿ ಧರಿಸಲು ಪ್ರಾರಂಭಿಸುತ್ತೇನೆ. ಅದಕ್ಕೇ ಈಗಲೂ ಚಪ್ಪಲಿ ಇಲ್ಲದೇ ಓಡಾಡುತ್ತಿದ್ದೇನೆ. ನನ್ನ ಸಂಕಲ್ಪ ನೆರವೇರಲಿದೆ. ಇನ್ನು ನಾನು ಶ್ರೀರಾಮನನ್ನು ಭೇಟಿ ಮಾಡಲು ಪ್ರತಿ ವರ್ಷ ಅಯೋಧ್ಯೆಗೆ ಹೋಗುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ರಾಮಲಲ್ಲಾ ಮೂರ್ತಿ ಶಿಲ್ಪಿ ಅರುಣ್ ಯೋಗಿರಾಜ್​ಗೆ ವೀಸಾ ನಿರಾಕರಿಸಿದ ಅಮೆರಿಕ

ರಾಮಮಂದಿರ ಟ್ರಸ್ಟ್ ಸ್ಥಳೀಯ ಜನರಿಗೆ ಮತ್ತು ಸಂತರಿಗೆ ದೊಡ್ಡ ಉಡುಗೊರೆಯನ್ನು ನೀಡುತ್ತದೆ. ರಾಮ್ ನಗರಿಯಲ್ಲಿ ವಾಸಿಸುವ ಸಂತರು, ಮಹಂತರು ಮತ್ತು ಸ್ಥಳೀಯ ಜನರು ಯಾವುದೇ ಜನಸಂದಣಿಯನ್ನು ಎದುರಿಸದೆ ರಾಮ್ ಲಲ್ಲಾನ ದರ್ಶನವನ್ನು ಪಡೆಯಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್