AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಶಿವನಿಗೆ ನೈವೇದ್ಯವಾಗಿ 10 ಕೆಜಿ ಐಸ್​ ಕ್ರೀಂ ನೀಡಿದ ಭಕ್ತ; ಪ್ರಸಾದಕ್ಕಾಗಿ ಸಾಲುಗಟ್ಟಿ ನಿಂತ ಜನರು

ಪಾಲಕೋಲಿನ ದೇವೆಲ್ಲ ನರಸಿಂಹ ಮೂರ್ತಿ ಎಂಬ ವ್ಯಕ್ತಿ ಶಿವನಿಗೆ ನೈವೇದ್ಯವಾಗಿ 10 ಕೆಜಿ ಐಸ್ ಕ್ರೀಮ್ ಅರ್ಪಿಸಿದ್ದರಿಂದ ಸುತ್ತಮುತ್ತಲೂ ಬಹಳ ಪ್ರಸಿದ್ಧರಾಗಿದ್ದಾರೆ.

Viral News: ಶಿವನಿಗೆ ನೈವೇದ್ಯವಾಗಿ 10 ಕೆಜಿ ಐಸ್​ ಕ್ರೀಂ ನೀಡಿದ ಭಕ್ತ; ಪ್ರಸಾದಕ್ಕಾಗಿ ಸಾಲುಗಟ್ಟಿ ನಿಂತ ಜನರು
ಶಿವಲಿಂಗಕ್ಕೆ ಐಸ್​ ಕ್ರೀಂ ನೈವೇದ್ಯ
TV9 Web
| Edited By: |

Updated on: Dec 10, 2021 | 2:15 PM

Share

ಹೈದರಾಬಾದ್: ಆಂಧ್ರಪ್ರದೇಶದ ಪಾಲಕೋಲ್‌ನ ಭಕ್ತರೊಬ್ಬರು ಪಂಚರಾಮ ಕ್ಷೇತ್ರಗಳಲ್ಲಿ ಒಂದಾದ ಕ್ಷೀರ ರಾಮಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವನಿಗೆ ಐಸ್‌ಕ್ರೀಂ ಅನ್ನು ಜನರಿಗೆ ಪ್ರಸಾದವಾಗಿ ನೀಡಿರುವ ಸುದ್ದಿ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದೆ. ಈ ವಿಭಿನ್ನವಾದ ಪ್ರಸಾದವನ್ನು ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ. ಹಬ್ಬ-ಹರಿದಿನಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವುದು ದೇವಸ್ಥಾನಗಳು ಮತ್ತು ಪೂಜಾ ಸ್ಥಳಗಳಲ್ಲಿ ಸಾಮಾನ್ಯ ಸಂಗತಿಯಾಗಿದ್ದರೂ ಈ ದೇವಸ್ಥಾನದಲ್ಲಿ ನೀಡಲಾಗುವ ರುಚಿಕರವಾದ ಐಸ್​ಕ್ರೀಂ ಪ್ರಸಾದವನ್ನು ತಿನ್ನಲು ಪ್ರವಾಸಿಗರು ಆಗಮಿಸಿದ್ದಾರೆ.

ಭಕ್ತರು ಈ ದೇವರಿಗೆ ಅಭಿಷೇಕವಾಗಿ ಹಾಲು ಅಥವಾ ಮೊಸರನ್ನು ಅರ್ಪಿಸುತ್ತಾರೆ. ಇವುಗಳಲ್ಲದೆ, ಕೆಲವರು ಜೇನುತುಪ್ಪ, ಸಕ್ಕರೆ ಮತ್ತು ವಿವಿಧ ಹಣ್ಣಿನ ರಸವನ್ನು ದೇವರಿಗೆ ಅರ್ಪಿಸಿ ಪ್ರಾರ್ಥನೆ ಸಲ್ಲಿಸುತ್ತಾರೆ. ಕೆಲವರು ಒಂದು ಟಂಬ್ಲರ್ ನೀರನ್ನು ಅಭಿಷೇಕವಾಗಿ ಅರ್ಪಿಸುತ್ತಾರೆ. ಅವರ ಇಷ್ಟಾರ್ಥಗಳನ್ನು ಪೂರೈಸುವ ಮೂಲಕ ಭಗವಂತ ಅವರನ್ನು ಆಶೀರ್ವದಿಸುತ್ತಾನೆ ಎಂದು ನಂಬಲಾಗಿದೆ. ಈ ದೇವರನ್ನು ‘ಭೋಲಾ ಶಂಕರ’ ಎಂದು ಕರೆಯಲಾಗುತ್ತದೆ. ಭಕ್ತರು ಹಣಕಾಸಿನ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಮರೆಡು ಎಲೆಗಳನ್ನು ಬಳಸಿ ವಿಶೇಷ ಪ್ರಾರ್ಥನೆಗಳನ್ನು ಮಾಡುತ್ತಾರೆ.

ಆದರೆ, ಪಾಲಕೋಲಿನ ದೇವೆಲ್ಲ ನರಸಿಂಹ ಮೂರ್ತಿ ಎಂಬ ವ್ಯಕ್ತಿ ಶಿವನಿಗೆ ನೈವೇದ್ಯವಾಗಿ 10 ಕೆಜಿ ಐಸ್ ಕ್ರೀಮ್ ಅರ್ಪಿಸಿದ್ದರಿಂದ ಸುತ್ತಮುತ್ತಲೂ ಬಹಳ ಪ್ರಸಿದ್ಧರಾಗಿದ್ದಾರೆ. ಐಸ್ ಕ್ರೀಮ್ ಅನ್ನು ಶಿವಲಿಂಗದ ಮೇಲೆ ಸುರಿಯಲಾಯಿತು. ಅದು ದೇವರ ಸುತ್ತಲೂ ತುಂಬಿಕೊಂಡಾಗ ಆ ಅದ್ಭುತ ದೃಶ್ಯವನ್ನು ವೀಕ್ಷಿಸಲು ಭಕ್ತರು ದೊಡ್ಡ ಸಂಖ್ಯೆಯಲ್ಲಿ ಸಾಲುಗಟ್ಟಿ ನಿಂತಿದ್ದರು. ದೇವರ ಪ್ರಸಾದವಾಗಿ ತಣ್ಣನೆಯ ಐಸ್ ಕ್ರೀಂ ಅನ್ನು ಪಡೆಯಲು ಭಕ್ತರು ಪ್ರಸಿದ್ಧ ದೇವಾಲಯದಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದರು.

ಶಿವನಿಗೆ ಮಾಂಸದ ಅಡುಗೆಯನ್ನು ನೈವೇದ್ಯವಾಗಿ ನೀಡಿದ ಉದಾಹರಣೆಗಳೂ ಪುರಾಣದಲ್ಲಿದೆ. ಇನ್ನು ಕೆಲವರು ಪಾಯಸ, ಸಕ್ಕರೆ ಪೊಂಗಲ್ ಮತ್ತು ಹೂರಣವನ್ನು ನೈವೇದ್ಯವಾಗಿ ಅರ್ಪಿಸುತ್ತಾರೆ.

ಇದನ್ನೂ ಓದಿ: ಮಂಡ್ಯ, ಮೈಸೂರಿನ ದೇವಸ್ಥಾನಗಳಲ್ಲಿ ದೇವರ ವಿಗ್ರಹ ಧ್ವಂಸ; ಒಂದೇ ದಿನದಲ್ಲಿ ಆರೋಪಿಯ ಬಂಧನ

Viral Video: ಬಾಯಾರಿದ ನಾಯಿಮರಿಗೆ ಬೋರ್​ವೆಲ್​ ಪಂಪ್ ಹೊಡೆದು ನೀರು ಕುಡಿಸಿದ ಬಾಲಕ; ವಿಡಿಯೋ ವೈರಲ್

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್