AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತಮ್ಮ 600 ಕೋಟಿ ರೂ. ಆಸ್ತಿಯನ್ನು ಸರ್ಕಾರದ ಹೆಸರಿಗೆ ಬರೆದ ವೈದ್ಯ; ಯಾರಿವರು?

ಅರವಿಂದ್ ಗೋಯಲ್ ಉತ್ತರ ಪ್ರದೇಶದ ಅತ್ಯಂತ ಯಶಸ್ವಿ ವೈದ್ಯರಲ್ಲಿ ಒಬ್ಬರು. ಅವರು ಕಳೆದ 50 ವರ್ಷಗಳಿಂದ ವೈದ್ಯರಾಗಿ ಕೆಲಸ ಮಾಡುತ್ತಿದ್ದು, ತಮ್ಮ ಕಠಿಣ ಪರಿಶ್ರಮದಿಂದ ನೂರಾರು ಕೋಟಿ ರೂ. ಹಣವನ್ನು ಸಂಪಾದಿಸಿದ್ದಾರೆ.

Viral News: ತಮ್ಮ 600 ಕೋಟಿ ರೂ. ಆಸ್ತಿಯನ್ನು ಸರ್ಕಾರದ ಹೆಸರಿಗೆ ಬರೆದ ವೈದ್ಯ; ಯಾರಿವರು?
ಅರವಿಂದ್ ಗೋಯಲ್
TV9 Web
| Edited By: |

Updated on:Jul 22, 2022 | 10:01 AM

Share

ನವದೆಹಲಿ: ಅರವಿಂದ್ ಗೋಯಲ್ ಎಂಬ ವ್ಯಕ್ತಿ ತನ್ನ 600 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ (Uttar Pradesh Government) ದಾನ ಮಾಡುವ ಮೂಲಕ ಭಾರೀ ಸುದ್ದಿಯಲ್ಲಿದ್ದಾರೆ. ಭಾರತದ ಬಡ ಜನರಿಗೆ ಸಹಾಯ ಮಾಡಲು ಅರವಿಂದ್ ಗೋಯಲ್ (Arvind Goyal) ಈ ರೀತಿ ತಮ್ಮ ಆಸ್ತಿಯನ್ನು ಸರ್ಕಾರದ ಹೆಸರಿಗೆ ವರ್ಗಾಯಿಸಿದ್ದಾರೆ. ಇಷ್ಟು ಭಾರೀ ಮೊತ್ತದ ಆಸ್ತಿಯನ್ನು ಸರ್ಕಾರಕ್ಕೆ ಬರೆದುಕೊಟ್ಟಿರುವ ಅರವಿಂದ್ ಗೋಯಲ್ ಯಾರು? ಇಲ್ಲಿದೆ ಮಾಹಿತಿ.

ಅರವಿಂದ್ ಗೋಯಲ್ ಉತ್ತರ ಪ್ರದೇಶದ ಅತ್ಯಂತ ಯಶಸ್ವಿ ವೈದ್ಯರಲ್ಲಿ ಒಬ್ಬರು. ಅವರು ಕಳೆದ 50 ವರ್ಷಗಳಿಂದ ವೈದ್ಯರಾಗಿ ಕೆಲಸ ಮಾಡುತ್ತಿದ್ದು, ತಮ್ಮ ಕಠಿಣ ಪರಿಶ್ರಮದಿಂದ ನೂರಾರು ಕೋಟಿ ರೂ. ಹಣವನ್ನು ಸಂಪಾದಿಸಿದ್ದಾರೆ. ಸುಮಾರು 25 ವರ್ಷಗಳ ಹಿಂದೆಯೇ ಅವರು ತಮ್ಮ ಸಂಪೂರ್ಣ ಆಸ್ತಿಯನ್ನು ದಾನ ಮಾಡುವ ನಿರ್ಧಾರವನ್ನು ತೆಗೆದುಕೊಂಡಿದ್ದರು.

ಅರವಿಂದ್ ಗೋಯಲ್ ಹಲವು ವರ್ಷಗಳಿಂದ ದತ್ತಿ ಕೆಲಸ ಮಾಡುತ್ತಿದ್ದಾರೆ. ಕೊವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ಅವರು ಮೊರಾದಾಬಾದ್ ಸುತ್ತಮುತ್ತಲಿನ 50 ಹಳ್ಳಿಗಳಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸಿದ್ದರು. ಬಡವರಿಗಾಗಿ ಶಿಕ್ಷಣ ನೀಡುವ ಕ್ಷೇತ್ರದಲ್ಲೂ ಅವರು ದುಡಿದಿದ್ದಾರೆ.

ಇದನ್ನೂ ಓದಿ: Gautam Adani: ವಿಶ್ವದ ಟಾಪ್-5 ಶ್ರೀಮಂತರ ಪಟ್ಟಿಯಲ್ಲಿ ಒಂದು ಸ್ಥಾನ ಮೇಲೇರಿದ ಅದಾನಿ

ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ರಾಷ್ಟ್ರಪತಿ ಪ್ರತಿಭಾ ದೇವಿ ಪಾಟೀಲ್ ಮತ್ತು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಸೇರಿದಂತೆ ಅರವಿಂದ್ ಗೋಯಲ್ ಅವರನ್ನು ನಾಲ್ಕು ಬಾರಿ ರಾಷ್ಟ್ರಪತಿಗಳು ಗೌರವಿಸಿದ್ದಾರೆ.

ಅರವಿಂದ್ ಗೋಯಲ್ ಅವರು ರೇಣು ಗೋಯಲ್ ಎಂಬುವವರನ್ನು ವಿವಾಹವಾಗಿದ್ದಾರೆ. ಅವರಿಗೆ ಮೂವರು ಮಕ್ಕಳಿದ್ದಾರೆ. ತಮ್ಮ ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ಮೂವರು ಮಕ್ಕಳ ಹೆಸರಿಗೆ ಮಾಡದೆ ಸರ್ಕಾರಕ್ಕೆ ಬರೆದುಕೊಟ್ಟಿರುವ ಅವರ ನಡೆ ಇದೀಗ ಭಾರೀ ಚರ್ಚೆಯಾಗುತ್ತಿದೆ.

Published On - 9:58 am, Fri, 22 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ