Viral News: ಹೆಂಡತಿ ಟೀ ಮಾಡೋದಿಲ್ಲ ಎಂದು ವಿಚ್ಛೇದನ ಕೇಳಿದ ಗಂಡ; ಕೋರ್ಟ್ ನೀಡಿದ ತೀರ್ಪು ಏನು?

ಚಿತ್ರರಂಗದ ಸೆಲಬ್ರಿಟಿಗಳ ಡೈವೋರ್ಸ್ ಪ್ರಕರಣಗಳು ಹೆಚ್ಚಾಗಿರುವ ಬೆನ್ನಲ್ಲೇ ಚಂಡೀಗಢದಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನಗೆ ಹೆಂಡತಿ ಟೀ ಮಾಡಿಕೊಡುವುದಿಲ್ಲವೆಂದು ಗಂಡ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೆ ಕೋರ್ಟ್ ನೀಡಿದ ತೀರ್ಪು ಏನೆಂದು ಗೊತ್ತಾ?

Viral News: ಹೆಂಡತಿ ಟೀ ಮಾಡೋದಿಲ್ಲ ಎಂದು ವಿಚ್ಛೇದನ ಕೇಳಿದ ಗಂಡ; ಕೋರ್ಟ್ ನೀಡಿದ ತೀರ್ಪು ಏನು?
ಚಹಾ
Follow us
|

Updated on: Jun 11, 2024 | 6:42 PM

ಹರಿಯಾಣ: ಪ್ರೇಮ ವಿವಾಹವೇ ಆಗಿರಲಿ (Love Marriage) ಅಥವಾ ಅರೇಂಜ್ ಮದುವೆಯೇ (Arrange Marriage) ಆಗಿರಲಿ, ಮದುವೆಯಾದ ನಂತರ ಪತಿ-ಪತ್ನಿಯರ ನಡುವೆ ಸಣ್ಣಪುಟ್ಟ ಜಗಳ ನಡೆಯುವುದು ಸಾಮಾನ್ಯ. ಕೆಲವೊಮ್ಮೆ ಈ ಜಗಳಗಳು ಬೇಗ ಬಗೆಹರಿಯುತ್ತವೆ ಮತ್ತು ಕೆಲವೊಮ್ಮೆ ಜಗಳಗಳು ವಿಚ್ಛೇದನಕ್ಕೆ (Divorce)  ಕಾರಣವಾಗುವ ಮಟ್ಟಿಗೆ ಉಲ್ಬಣಗೊಳ್ಳುತ್ತವೆ. ಈ ಜಗಳಗಳನ್ನು ಕೊನೆಗೊಳಿಸುವುದು ಮತ್ತು ಸಂಬಂಧಗಳನ್ನು ಸುಧಾರಿಸುವುದು ಉತ್ತಮ ದಾಂಪತ್ಯದ ಸಂಕೇತವಾಗಿದೆ. ಆದರೆ ಪಂಜಾಬ್​ನ ಚಂಡೀಗಢದಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಗಂಡ ತನ್ನ ಹೆಂಡತಿಯಿಂದ ವಿಚ್ಛೇದನ ಬಯಸಿದ್ದಾನೆ. ಆದರೆ ಹೆಂಡತಿಗೆ ಅವನನ್ನು ಬಿಡಲು ಇಷ್ಟವಿರಲಿಲ್ಲ. ಅವರ ಜಗಳಕ್ಕೆ ಕಾರಣ ಚಹಾ. ಈ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದಾಗ ಪತಿಯ ಅರ್ಜಿ ತಿರಸ್ಕೃತವಾಯಿತು.

ಪಂಜಾಬ್-ಹರಿಯಾಣ ಹೈಕೋರ್ಟ್ ಮುಂದೆ ವಿಚ್ಛೇದನದ ವಿಶಿಷ್ಟ ಪ್ರಕರಣವೊಂದು ಬಂದಿದೆ. ತನ್ನ ಹೆಂಡತಿ ಟೀ ಮಾಡುವುದಿಲ್ಲ ಎಂದು ಪತಿ ವಿಚ್ಛೇದನ ಕೋರಿದ್ದಾರೆ. ಈ ಕುರಿತು ಪತ್ನಿಯ ಮಾತನ್ನೂ ಹೈಕೋರ್ಟ್ ಆಲಿಸಿದೆ. ಆಗ ಗಂಡನಿಗೆ ಶಾಕ್ ಆಗುವಂಥ ತೀರ್ಪನ್ನು ಹೈಕೋರ್ಟ್ ಕೊಟ್ಟಿದೆ.

ಅವರ ಮನೆಗೆ ಸಂಬಂಧಿಕರು ಅಥವಾ ಸ್ನೇಹಿತರು ಬಂದಾಗಲೆಲ್ಲಾ ಅವರ ಹೆಂಡತಿ ಅವರನ್ನು ಚೆನ್ನಾಗಿ ನೋಡಿಕೊಳ್ಳುವುದಿಲ್ಲ ಎಂದು ಪತಿ ಹೇಳಿದ್ದಾರೆ. ಅವರಿಗೆ ತಿಂಡಿ ಮಾಡಿಕೊಡುವುದನ್ನು ಮರೆತುಬಿಡಿ, ಚಹಾವನ್ನು ಸಹ ಕೇಳುವುದಿಲ್ಲ. ಈ ಕಾರಣದಿಂದಾಗಿ, ಅವರ ಸ್ನೇಹಿತರು ಮತ್ತು ಸಂಬಂಧಿಕರೊಂದಿಗಿನ ಸಂಬಂಧವು ಹದಗೆಟ್ಟಿದೆ. ನಮ್ಮ ಮನೆಗೆ ಯಾರೂ ಬರುವುದಿಲ್ಲ ಎಂದಿದ್ದಾರೆ. ಮೊದಲಿಗೆ ಪತಿ ಕೌಟುಂಬಿಕ ನ್ಯಾಯಾಲಯದಲ್ಲಿ ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಈ ವಿಷಯ ಕೈಗೂಡದೇ ಇದ್ದಾಗ ಅವರು ಪಂಜಾಬ್ ಹರ್ಯಾಣ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: ಖ್ಯಾತ ನಟಿ ಜೊತೆ ಹೆಚ್ಚಿತಾ ಆಪ್ತತೆ? ಯುವ ರಾಜ್​ಕುಮಾರ್​ ವಿಚ್ಛೇದನಕ್ಕೆ ಇದೇ ಕಾರಣ ಆಯ್ತಾ?

ಇಲ್ಲಿಯೂ ಆತನಿಗೆ ನಿರಾಸೆಯಾಯಿತು. ಇಂತಹ ಸಣ್ಣ ವಿಚಾರಕ್ಕೆ ನಾವು ವಿಚ್ಛೇದನ ಅರ್ಜಿಯನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಪತಿ ಮಾಡುವ ಎಲ್ಲ ಆರೋಪಗಳು ಸುಳ್ಳು ಎಂದು ಪತ್ನಿ ಹೇಳಿದ್ದಾರೆ. ನಾನು ಆ ರೀತಿಯಾಗಿ ಎಂದೂ ನಡೆದುಕೊಂಡಿಲ್ಲ. ಇತ್ತೀಚೆಗೆ ಗಂಡನ ವರ್ತನೆ ಬದಲಾಗಿದೆ. ಸಣ್ಣಪುಟ್ಟ ವಿಷಯಗಳಿಗೂ ಜಗಳವಾಡುತ್ತಲೇ ಇರುತ್ತಾನೆ. ಆದರೂ ನನಗೆ ಅವನನ್ನು ಬಿಡಲು ಇಷ್ಟವಿಲ್ಲ. ಗಂಡನ ಈ ವರ್ತನೆಯಿಂದ ನಾನು ಖಿನ್ನತೆಗೆ ಒಳಗಾಗಿದ್ದೇನೆ ಎಂದು ಆಕೆ ಹೇಳಿದ್ದಾರೆ.

ಇನ್ನು ಮುಂದೆ ಒಂದೇ ಸೂರಿನಡಿ ಪತ್ನಿಯೊಂದಿಗೆ ಇರಲು ಸಾಧ್ಯವಿಲ್ಲ ಎಂದು ಪತಿ ಅರ್ಜಿಯಲ್ಲಿ ತಿಳಿಸಿದ್ದರು. ಆದರೆ, ಪತಿಯ ವಾದಗಳನ್ನು ಹೈಕೋರ್ಟ್ ಒಪ್ಪಿಲ್ಲ. ಇಂತಹ ಸಣ್ಣ ವಿಚಾರಕ್ಕೆ ನಾವು ಈ ವಿಚ್ಛೇದನವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ನ್ಯಾಯಾಲಯದ ತೀರ್ಪನ್ನು ಕೇಳಿ ಪತಿಗೆ ಆಘಾತವಾಯಿತು.

ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ವಿರುದ್ಧ ಪೊಲೀಸರಿಗೆ ಸಿಕ್ಕಿವೆ ಈ ಸಾಕ್ಷಿಗಳು

ಹೈಕೋರ್ಟ್ ತೀರ್ಪಿನಲ್ಲಿ ಏನಿದೆ?:

ಪತಿ-ಪತ್ನಿಯರ ನಡುವಿನ ಸಣ್ಣ ಜಗಳ ವಿಚ್ಛೇದನಕ್ಕೆ ಆಧಾರವಾಗುವುದಿಲ್ಲ ಎಂದು ಪಂಜಾಬ್ ಹರ್ಯಾಣ ಹೈಕೋರ್ಟ್ ಹೇಳಿದೆ. ಹೈಕೋರ್ಟ್ ಪ್ರಕಾರ, ಪತ್ನಿ ಪತಿಯ ಸಂಬಂಧಿಕರು ಅಥವಾ ಸ್ನೇಹಿತರಿಗೆ ಚಹಾ ನೀಡದಿದ್ದರೆ ಅದನ್ನು ಕ್ರೌರ್ಯ ಎಂದು ಕರೆಯಲಾಗುವುದಿಲ್ಲ. ಇಂತಹ ವಿಷಯಗಳು ದಾಂಪತ್ಯದ ಭಾಗವಾಗಿದ್ದು, ಇದಕ್ಕಾಗಿ ಪತಿ-ಪತ್ನಿ ಸಿದ್ಧರಾಗಿರಬೇಕು ಎಂದು ಪೀಠ ಹೇಳಿದೆ. ಪತಿಯ ವಿಚ್ಛೇದನದ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ