AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಬ್ರೈನ್ ಟ್ಯೂಮರ್ ಸರ್ಜರಿ ವೇಳೆ ಹನುಮಾನ್ ಚಾಲೀಸಾ ಪಠಿಸಿದ ಮಹಿಳೆ; ಆಮೇಲೆ ನಡೆದಿದ್ದು ಅಚ್ಚರಿ!

Brain Tumor | ಬ್ರೈನ್ ಟ್ಯೂಮರ್​ನಿಂದ ಆಪರೇಷನ್​ಗೆ ಒಳಗಾದ ದೆಹಲಿಯ ರೋಗಿಯೊಬ್ಬರು ಆಪರೇಷನ್ ಶುರುವಾಗಿ ಮುಗಿಯುವವರೆಗೂ ಹನುಮಾನ್ ಚಾಲೀಸಾ ಪಠಿಸುತ್ತಿದ್ದರು.

Viral News: ಬ್ರೈನ್ ಟ್ಯೂಮರ್ ಸರ್ಜರಿ ವೇಳೆ ಹನುಮಾನ್ ಚಾಲೀಸಾ ಪಠಿಸಿದ ಮಹಿಳೆ; ಆಮೇಲೆ ನಡೆದಿದ್ದು ಅಚ್ಚರಿ!
ಮೆದುಳು
TV9 Web
| Edited By: |

Updated on: Jul 24, 2021 | 9:38 PM

Share

ನವದೆಹಲಿ: ದೇವರನ್ನು ನಂಬಿದರೆ ಎಂತಹ ಕಷ್ಟ ಕೂಡ ದೂರವಾಗುತ್ತದ ಎಂಬುದು ಹಲವರ ನಂಬಿಕೆ. ಜನರ ಜೀವ ಉಳಿಸುವ ಆಸ್ಪತ್ರೆಗಳಲ್ಲಿ ಅದೇ ಕಾರಣಕ್ಕೆ ದೇವರ ಮೂರ್ತಿಯನ್ನು ಇರಿಸಲಾಗಿರುತ್ತದೆ. ವೈದ್ಯರ ಪ್ರಯತ್ನವೆಲ್ಲ ಮಾಡಿ ಆದ ಮೇಲೆ ಕೊನೆಗೆ ದೇವರಾದರೂ ಏನಾದರೂ ಪವಾಡ ಮಾಡುತ್ತೇನೆಂಬ ನಂಬಿಕೆ ರೋಗಿಗಳದ್ದು. ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಬಹಳ ಗಂಭೀರವಾದ ಬ್ರೈನ್ ಟ್ಯೂಮರ್​ನಿಂದ ಬಳಲುತ್ತಿದ್ದ ಮಹಿಳೆಗೆ ಆಪರೇಷನ್ ಮಾಡಲು ಸಿದ್ಧತೆ ನಡೆದಿತ್ತು. ಆಪರೇಷನ್ ಥಿಯೇಟರ್​ಗೆ ಬಂದ ರೋಗಿ ಆಪರೇಷನ್ ನಡೆಯುವಾಗಲೂ ಹನುಮಾನ್ ಚಾಲೀಸಾ ಪಠಿಸುತ್ತಿದ್ದರು. ಇದನ್ನು ನೋಡಿ ಆಪರೇಷನ್​ ಮಾಡಲು ಸಿದ್ಧವಾಗಿದ್ದ ವೈದ್ಯರು ಕೂಡ ಒಂದು ಕ್ಷಣ ಬೆರಗಾದರು.

ಆಂಜನೇಯನ ಭಕ್ತೆಯಾಗಿದ್ದ ರೋಗಿ ತನಗೆ ಬ್ರೈನ್ ಟ್ಯೂಮರ್ ಇದೆ ಎಂದು ಗೊತ್ತಾದ ನಂತರ ದೇವರಿಗೆ ಹರಕೆ ಕಟ್ಟಿಕೊಂಡಿದ್ದರು. ಏಮ್ಸ್​ ಆಸ್ಪತ್ರೆಯಲ್ಲಿ ಆಕೆಗೆ ಆಪರೇಷನ್ ಮಾಡಲು ಎಲ್ಲ ಸಿದ್ಧತೆಗಳೂ ನಡೆದಿತ್ತು. ಆಪರೇಷನ್ ಥಿಯೇಟರ್​ನಲ್ಲಿ ಮಲಗಿದ ಆಕೆ ಇಡೀ ಆಪರೇಷನ್ ಮುಗಿಯುವವರೆಗೂ ಎಚ್ಚರವಾಗಿಯೇ ಇದ್ದರು. ಮೂರು ಗಂಟೆಗಳ ಕಾಲ ನಡೆದ ಈ ಶಸ್ತ್ರಚಿಕಿತ್ಸೆ ಮುಗಿಯುವವರೆಗೂ ಹನುಮಾನ್ ಚಾಲೀಸನ್ನು ಪಠಿಸುತ್ತಲೇ ಇದ್ದರು. ಆ ದೈವೀ ಭಾವನೆ ಆಪರೇಷನ್ ಥಿಯೇಟರ್​ನಲ್ಲೆಲ್ಲ ಹರಡಿದಂತೆ, ಬಹಳ ಕಠಿಣವಾದ ಆಪರೇಷನ್ ಕೂಡ ಯಶಸ್ವಿಯಾಗಿ ನೆರವೇರಿತು.

ಆ ಮಹಿಳೆಗೆ ಆಪರೇಷನ್ ಮಾಡಿರುವ ತಂಡದಲ್ಲೊಬ್ಬರಾದ ಡಾ. ದೀಪಕ್ ಗುಪ್ತಾ, ಆಪರೇಷನ್​ಗೆ ಒಳಗಾದ ಮಹಿಳೆಗೆ ಲೋಕಲ್ ಅನಸ್ತೇಷಿಯಾ ಮತ್ತು ಪೈನ್ ಕಿಲ್ಲರ್ ಕೂಡ ನೀಡಲಾಗಿತ್ತು. ಶಾಲಾ ಶಿಕ್ಷಕಿಯಾಗಿರುವ ಆ ಮಹಿಳೆಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರವೇರಿದ್ದು, ಇಂದು ಡಿಸ್ಚಾರ್ಜ್ ಆಗಿದ್ದಾರೆ.

ಇದನ್ನೂ ಓದಿ: Viral News | ಬರೋಬ್ಬರಿ 1 ಕೋಟಿಗೆ ಹರಾಜಾಯ್ತು ವಿಸ್ಕಿ ಬಾಟಲ್; ಇದರ ವಿಶೇಷತೆ ಕೇಳಿದರೆ ಕಿಕ್ ಏರುತ್ತೆ!

Viral Video: ಅಚ್ಚರಿಯಾದರೂ ಸತ್ಯ; ವಕೀಲನ ಮೇಲೆ ದಾಳಿ ಮಾಡಿದ 2 ನಾಯಿಗಳಿಗೆ ಮರಣದಂಡನೆ ಶಿಕ್ಷೆ!

(Viral News Woman Recites Hanuma Chalisa While Undergoing Complex Brain Tumor Surgery in AIIMS)

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ