AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕಚೇರಿಯಲ್ಲಿ ಪಿಸ್ತೂಲ್ ಹಿಡಿದು ಸೆಲ್ಫೀಗೆ ಪೋಸ್ ಕೊಟ್ಟ ಟಿಎಂಸಿ ನಾಯಕಿ; ವಿವಾದಕ್ಕೀಡಾಯ್ತು ವೈರಲ್ ಫೋಟೋ

ಓಲ್ಡ್ ಮಾಲ್ಡಾ ಪಂಚಾಯತ್ ಸಮಿತಿಯ ಅಧ್ಯಕ್ಷೆ ಮೃಣಾಲಿನಿ ಮೊಂಡಲ್ ಮೇಟಿ ತನ್ನ ಆಫೀಸಿನ ಕುರ್ಚಿಯ ಮೇಲೆ ಕುಳಿತು, ಕೈಯಲ್ಲಿ ಗನ್ ಹಿಡಿದುಕೊಂಡು ಸೆಲ್ಫೀಗೆ ಪೋಸ್ ನೀಡುತ್ತಿರುವ ಫೋಟೋವನ್ನು ಬೇರೆಯವರು ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದ್ದಾರೆ.

ಸರ್ಕಾರಿ ಕಚೇರಿಯಲ್ಲಿ ಪಿಸ್ತೂಲ್ ಹಿಡಿದು ಸೆಲ್ಫೀಗೆ ಪೋಸ್ ಕೊಟ್ಟ ಟಿಎಂಸಿ ನಾಯಕಿ; ವಿವಾದಕ್ಕೀಡಾಯ್ತು ವೈರಲ್ ಫೋಟೋ
ಪಿಸ್ತೂಲ್ ಜೊತೆಗೆ ಟಿಎಂಸಿ ನಾಯಕಿಯ ಸೆಲ್ಫೀ
TV9 Web
| Edited By: |

Updated on:Dec 07, 2021 | 7:08 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಸರ್ಕಾರಿ ಕಚೇರಿಯಲ್ಲಿ ಟಿಎಂಸಿ ನಾಯಕಿಯಬ್ಬರು ಪಿಸ್ತೂಲ್ ಹಿಡಿದು ಮೊಬೈಲ್ ಕ್ಯಾಮೆರಾಗೆ ಪೋಸ್ ನೀಡುತ್ತಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಫೋಟೋ ಬಂಗಾಳದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಓಲ್ಡ್ ಮಾಲ್ಡಾ ಪಂಚಾಯತ್ ಸಮಿತಿಯ ಅಧ್ಯಕ್ಷೆ ಮೃಣಾಲಿನಿ ಮೊಂಡಲ್ ಮೇಟಿ ತನ್ನ ಆಫೀಸಿನ ಕುರ್ಚಿಯ ಮೇಲೆ ಕುಳಿತು, ಕೈಯಲ್ಲಿ ಗನ್ ಹಿಡಿದುಕೊಂಡು ಸೆಲ್ಫೀಗೆ ಪೋಸ್ ನೀಡುತ್ತಿರುವ ಫೋಟೋವನ್ನು ಬೇರೆಯವರು ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದ್ದಾರೆ. ಮೃಣಾಲಿನಿ ಮೇಟಿ ಟಿಎಂಸಿ ಮಹಿಳಾ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷೆಯೂ ಆಗಿದ್ದಾರೆ.

ಈ ಹಿನ್ನೆಲೆಯಲ್ಲಿ ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ, ಆಡಳಿತ ಪಕ್ಷವು ರಾಜ್ಯವನ್ನು ಸ್ಫೋಟಕಗಳ ಡಂಪ್ ಯಾರ್ಡ್ ಆಗಿ ಮಾಡಿಕೊಂಡಿದೆ ಎಂದು ಆರೋಪಿಸಿದೆ. ಆಕೆಯ ಮನೆಯನ್ನು ಹುಡುಕಿದರೆ ಪೊಲೀಸರಿಗೆ ಬಾಂಬ್, ರೈಫಲ್ ಕೂಡ ಸಿಗುತ್ತದೆ. ಇದು ಟಿಎಂಸಿ ಸಂಸ್ಕೃತಿ. ಕೆಲಸ ಕಳೆದುಕೊಳ್ಳುವ ಭೀತಿಯಿಂದ ಪೊಲೀಸರು ಏನನ್ನೂ ಮಾಡುತ್ತಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗೋವಿಂದ ಚಂದ್ರ ಮೊಂಡಲ್ ಆರೋಪಿಸಿದ್ದಾರೆ.

ಆದರೆ, ಪೊಲೀಸರು ಈ ಬಗ್ಗೆ ಪರಿಶೀಲಿಸುತ್ತಿದ್ದಾರೆ ಎಂದು ಟಿಎಂಸಿ ಹೇಳಿದೆ. ಸರ್ಕಾರಿ ಕಚೇರಿಯ ಅಫಿಷಿಯಲ್ ಕುರ್ಚಿಯ ಮೇಲೆ ಕುಳಿತುಕೊಂಡು ಬಂದೂಕನ್ನು ಹಿಡಿದು ಅದರೊಂದಿಗೆ ಆಟವಾಡುವುದಕ್ಕೆ ನಾವು ಆಸ್ಪದ ಕೊಡುವುದಿಲ್ಲ. ಇದು ನಿಜವಾದ ಪಿಸ್ತೂಲಾ? ಅಥವಾ ಆಟಿಕೆ ಪಿಸ್ತೂಲಾ? ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಾರೆ. ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಅದು ನಿಜವಾದ ಗನ್ ಆಗಿದ್ದು, ಆಕೆಯ ವರ್ತನೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದೆ ಎಂದು ಟಿಎಂಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೃಷ್ಣೇಂದು ನಾರಾಯಣ ಚೌಧರಿ ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್​ ಸ್ಪರ್ಧಿಸುತ್ತದೆ ಎಂದಾದರೆ ನಾವ್ಯಾಕೆ ಗೋವಾದಲ್ಲಿ ಸ್ಪರ್ಧಿಸಬಾರದು?-ಮಮತಾ ಬ್ಯಾನರ್ಜಿ

ಗೋವಾ ವಿಧಾನಸಭೆ ಚುನಾವಣೆ: ದೀದಿಯ ಟಿಎಂಸಿ ಪಕ್ಷದೊಂದಿಗೆ ಮೈತ್ರಿ ಘೋಷಿಸಿದ ಎಂಜಿಪಿ

Published On - 7:05 pm, Tue, 7 December 21

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್