AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಪೊಲೀಸ್​ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರದಲ್ಲಿ ಸನ್ನಿ ಲಿಯೋನ್​ ಫೋಟೊ

ಉತ್ತರ ಪ್ರದೇಶ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರದಲ್ಲಿ ನಟಿ ಸನ್ನಿ ಲಿಯೋನ್ ಅವರ ಹೆಸರಿನೊಂದಿಗೆ ಕಾಣಿಸಿಕೊಂಡಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸನ್ನಿ ಲಿಯೋನ್ ಹೆಸರಿನ ಪ್ರವೇಶ ಪತ್ರ ಮತ್ತು ಆಕೆಯ ಎರಡು ಚಿತ್ರಗಳನ್ನು ಹಂಚಿಕೊಳ್ಳಲಾಗಿದೆ.

ಉತ್ತರ ಪ್ರದೇಶ: ಪೊಲೀಸ್​ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರದಲ್ಲಿ ಸನ್ನಿ ಲಿಯೋನ್​ ಫೋಟೊ
ನಯನಾ ರಾಜೀವ್
|

Updated on:Feb 18, 2024 | 11:08 AM

Share

ಉತ್ತರ ಪ್ರದೇಶದ ಯುಪಿ ಪೊಲೀಸ್ ಕಾನ್ಸ್‌ಟೇಬಲ್(Police Constable) ನೇಮಕಾತಿ ಪರೀಕ್ಷೆಯಂದು ಪ್ರವೇಶಪತ್ರವೊಂದರಲ್ಲಿ ಸನ್ನಿ ಲಿಯೋನ್(Sunny Leone) ಚಿತ್ರ ಇರುವುದು ಕಂಡುಬಂದಿದೆ. ಈ ಪೋಸ್ಟರ್ ಎಲ್ಲೆಡೆ ವೈರಲ್ ಆಗಿದೆ. ಪರೀಕ್ಷೆಯ ಮೊದಲ ದಿನ, ಕನೌಜ್ ಜಿಲ್ಲೆಯಲ್ಲಿ ಪೊಲೀಸ್ ನೇಮಕಾತಿ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಯ ಪ್ರವೇಶ ಪತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಅಡ್ಮಿಟ್ ಕಾರ್ಡ್ ಬಗ್ಗೆ ಅಧಿಕಾರಿಗಳು ತಲೆ ಕೆಡಿಸಿಕೊಂಡಿರುವಾಗಲೇ ಈ ಅಡ್ಮಿಟ್ ಕಾರ್ಡ್ ಇಡೀ ದೇಶದಲ್ಲಿ ಚರ್ಚೆಗೆ ಗ್ರಾಸವಾಯಿತು. ಅಷ್ಟಕ್ಕೂ ಈ ಅಡ್ಮಿಟ್ ಕಾರ್ಡ್ ನಲ್ಲಿ ಏನಿತ್ತು ಇಲ್ಲಿದೆ ಮಾಹಿತಿ.

ಈ ಘಟನೆಯು ಕನೌಜ್ ಜಿಲ್ಲೆಯ ತಿರ್ವಾ ಪಟ್ಟಣ ಪ್ರದೇಶದಲ್ಲಿರುವ ಸೋನಶ್ರೀ ಬಾಲಕಿಯರ ಕಾಲೇಜಿನಲ್ಲಿ ನಡೆದಿದೆ, ಅಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ನಡೆಯುತ್ತಿತ್ತು, ಅದೇ ಪರೀಕ್ಷಾ ಕೇಂದ್ರದಲ್ಲಿ, ಅಭ್ಯರ್ಥಿ ಅಂಕಿತ್‌ನ ಪ್ರವೇಶ ಪತ್ರದಲ್ಲಿ ಸಿನಿ ತಾರೆ ಸನ್ನಿ ಲಿಯೋನ್ ಚಿತ್ರವನ್ನು ಅಂಟಿಸಲಾಗಿತ್ತು. ಮಹೋಬಾ ಜಿಲ್ಲೆಯ ನಿವಾಸಿ, ಅಂಕಿತ್ ಚಿತ್ರದ ಜಾಗದಲ್ಲಿ ಈ ಫೋಟೊವಿತ್ತು. ಈ ಅಡ್ಮಿಟ್ ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ತಕ್ಷಣ ಸುದ್ದಿ ರಾಜ್ಯಾದ್ಯಂತ ಹಬ್ಬಿತ್ತು.

ಅಡ್ಮಿಟ್ ಕಾರ್ಡ್‌ನಲ್ಲಿ ಬರೆದಿರುವ ನಂಬರ್‌ನಲ್ಲಿ ಫೋನ್‌ನಲ್ಲಿ ಮಾಹಿತಿ ತೆಗೆದುಕೊಂಡಾಗ, ವಿದ್ಯಾರ್ಥಿ ಅಂಕಿತ್ ಅವರು ಸಾರ್ವಜನಿಕ ಸೇವಾ ಕೇಂದ್ರದಿಂದ ಅರ್ಜಿಯನ್ನು ಭರ್ತಿ ಮಾಡಿರುವುದಾಗಿ ಹೇಳಿದರು. ಆದರೆ ಫೋಟೋವನ್ನು ಹೇಗೆ ಬದಲಾಯಿಸಲಾಗಿದೆ ಎಂಬುದು ತಿಳಿದಿಲ್ಲ.

ಮತ್ತಷ್ಟು ಓದಿ: Sunny Leone: ಸನ್ನಿ ಲಿಯೋನ್ ಹೆಸರು ಬಂದಿದ್ದು ಹೇಗೆ? ಹಳೆ ಘಟನೆ ನೆನೆದ ನಟಿ

ಈ ಫೋಟೋವನ್ನು ಬದಲಾಯಿಸಿದ್ದರಿಂದ, ಅವರು ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಲಿಲ್ಲ. ಈ ಪ್ರವೇಶ ಪತ್ರದಲ್ಲಿ ನಮೂದಿಸಿರುವ ವಿಳಾಸ ಮುಂಬೈ. ಆದರೆ ನೋಂದಣಿ ಸಮಯದಲ್ಲಿ ತವರು ಜಿಲ್ಲೆಯನ್ನು ಕನ್ನೌಜ್ ಎಂದು ಉಲ್ಲೇಖಿಸಲಾಗಿದೆ. ಕಾಲೇಜು ಆಡಳಿತ ಮಂಡಳಿ ಪ್ರಕಾರ, ಈ ಪ್ರವೇಶ ಪತ್ರದಲ್ಲಿ ಯಾವುದೇ ಅಭ್ಯರ್ಥಿ ಪರೀಕ್ಷೆಗೆ ಹಾಜರಾಗಲಿಲ್ಲ.

ವಿಷಯ ಸ್ಥಳೀಯ ಅಧಿಕಾರಿಗಳಿಗೆ ತಲುಪಿದಾಗ ಅವರು ಪ್ರವೇಶ ಪತ್ರದಲ್ಲಿ ತಿದ್ದುಪಡಿ ಮಾಡಲಾಗಿದೆ ಎಂದು ಹೇಳಿದರು. ಉಳಿದ ವಿಷಯಗಳ ಬಗ್ಗೆ ಗಂಭೀರವಾಗಿ ತನಿಖೆ ನಡೆಸಲಾಗುತ್ತಿದೆ. ಅಂತಹ ಕೃತ್ಯಗಳನ್ನು ಎಸಗಿರುವ ಯಾರನ್ನೂ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಕನೌಜ್ ಜಿಲ್ಲೆಯಲ್ಲಿ ಫೆಬ್ರವರಿ 17 ಮತ್ತು 18 ರಂದು ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ನಡೆಯಲಿದೆ. ಮೊದಲ ದಿನ 9464 ಅಭ್ಯರ್ಥಿಗಳು 10 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:07 am, Sun, 18 February 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ