AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆಯಲ್ಲಿ ಅಜ್ಜಿಯ ಸರ ಕದಿಯಲು ಬಂದ ಕಳ್ಳನಿಗೆ ತಕ್ಕ ಶಾಸ್ತಿ ಮಾಡಿದ 10ರ ದಿಟ್ಟ ಪೋರಿ

ಅಜ್ಜಿಯ ಸರ ಕದಿಯಲು ಬಂದ ಕಳ್ಳನನ್ನು 10 ವರ್ಷದ ಪೋರಿ ಹೊಡೆದು ಓಡಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ರಸ್ತೆಯಲ್ಲಿ ಅಜ್ಜಿಯ ಜತೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್​ನಲ್ಲಿ ಬಂದ ಕಳ್ಳನೊಬ್ಬ ವೃದ್ಧೆಯ ಕುತ್ತಿಗೆಗೆ ಕೈಹಾಕಿದ್ದಾನೆ. ತ

Viral Video: ರಸ್ತೆಯಲ್ಲಿ ಅಜ್ಜಿಯ ಸರ ಕದಿಯಲು ಬಂದ ಕಳ್ಳನಿಗೆ ತಕ್ಕ ಶಾಸ್ತಿ ಮಾಡಿದ 10ರ ದಿಟ್ಟ ಪೋರಿ
ಸರಗಳ್ಳತನ
ನಯನಾ ರಾಜೀವ್
|

Updated on:Mar 10, 2023 | 11:20 AM

Share

ಅಜ್ಜಿಯ ಸರ ಕದಿಯಲು ಬಂದ ಕಳ್ಳನನ್ನು 10 ವರ್ಷದ ಪೋರಿ ಹೊಡೆದು ಓಡಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ರಸ್ತೆಯಲ್ಲಿ ಅಜ್ಜಿಯ ಜತೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್​ನಲ್ಲಿ ಬಂದ ಕಳ್ಳನೊಬ್ಬ ವೃದ್ಧೆಯ ಕುತ್ತಿಗೆಗೆ ಕೈಹಾಕಿದ್ದಾನೆ. ತಕ್ಷಣವೇ ಬಾಲಕಿ ತನ್ನ ಕೈಲಿದ್ದ ಚೀಲದಿಂದ ಕಳ್ಳನಿಗೆ ಥಳಿಸಿದ್ದು, ಕೊನೆಯ ಆತ ಚೈನ್ ಬಿಟ್ಟು ಪರಾರಿಯಾಗಿದ್ದಾನೆ.ಫೆಬ್ರವರಿ 25 ರಂದು ಪುಣೆಯ ಮಾಡೆಲ್ ಕಾಲೋನಿಯಲ್ಲಿ ಘಟನೆ ನಡೆಸಿದ್ದು, 60 ವರ್ಷದ ಲತಾ ಘಾಗ್ ತನ್ನ ಮೊಮ್ಮಗಳು ಋತ್ವಿ ಘಾಗ್ ಮನೆಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ.

ವಿಳಾಸ ಕೇಳುವ ನೆಪದಲ್ಲಿ ಬಂದ ಕಳ್ಳ ವೃದ್ಧೆಯ ಸರ ಕದಿಯಲು ಯತ್ನಿಸಿದ್ದಾನೆ. ಇದನ್ನು ನೋಡಿದ ಬಾಲಕಿ ಬ್ಯಾಗ್​ನಿಂದ ಕಳ್ಳನ ಮುಖಕ್ಕೆ ಹೊಡೆದಿದ್ದು, ಬೈಕ್ ಸವಾರ ತಕ್ಷಣವೇ ಓಡಿ ಹೋಗಿದ್ದಾನೆ. ಈ ಘಟನೆಯು ಫೆಬ್ರವರಿ 25 ರಂದು ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮತ್ತಷ್ಟು ಓದಿ: ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಕಳ್ಳನ ಕೈಚಳಕ: ಏಳು ವೈದ್ಯರ ಬ್ಯಾಗ್ ಎಗರಿಸಿದ ಕಳ್ಳ

ಮಾರ್ಚ್​ 9 ರಂದು ಈ ಕುರಿತು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 393ರ ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಕೂಡ ಇಂಥದ್ದೇ ಪ್ರಕರಣ ನಡೆದಿತ್ತು, ಸರಗಳ್ಳತನ ಮಾಡಿ ತಪ್ಪಿಸಿಕೊಂಡಿದ್ದ ಆರೋಪಿ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಸಿಕ್ಕಿಬಿದ್ದಿದ್ದ. ಈತ 2022ರಲ್ಲಿ ಪೂರ್ಣಪ್ರಜ್ಞಾ ಬಡಾವಣೆಯ ವೃದ್ಧೆಯ ಮಾಂಗಲ್ಯಸರ ಎಗರಿಸಿ ಪರಾರಿಯಾಗಿದ್ದ, ಸಿಸಿಟಿವಿ ವೀಕ್ಷಿಸಿ ಆತನ ಚಲನವಲನದ ಮೇಲೆ ಕಣ್ಣಿರಿಸಿ ಪೊಲೀಸ್ ಠಾಣೆ ಹಿಂಭಾಗವೇ ಬಂಧಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:19 am, Fri, 10 March 23

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?