AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆಯಲ್ಲಿ ಅಜ್ಜಿಯ ಸರ ಕದಿಯಲು ಬಂದ ಕಳ್ಳನಿಗೆ ತಕ್ಕ ಶಾಸ್ತಿ ಮಾಡಿದ 10ರ ದಿಟ್ಟ ಪೋರಿ

ಅಜ್ಜಿಯ ಸರ ಕದಿಯಲು ಬಂದ ಕಳ್ಳನನ್ನು 10 ವರ್ಷದ ಪೋರಿ ಹೊಡೆದು ಓಡಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ರಸ್ತೆಯಲ್ಲಿ ಅಜ್ಜಿಯ ಜತೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್​ನಲ್ಲಿ ಬಂದ ಕಳ್ಳನೊಬ್ಬ ವೃದ್ಧೆಯ ಕುತ್ತಿಗೆಗೆ ಕೈಹಾಕಿದ್ದಾನೆ. ತ

Viral Video: ರಸ್ತೆಯಲ್ಲಿ ಅಜ್ಜಿಯ ಸರ ಕದಿಯಲು ಬಂದ ಕಳ್ಳನಿಗೆ ತಕ್ಕ ಶಾಸ್ತಿ ಮಾಡಿದ 10ರ ದಿಟ್ಟ ಪೋರಿ
ಸರಗಳ್ಳತನ
ನಯನಾ ರಾಜೀವ್
|

Updated on:Mar 10, 2023 | 11:20 AM

Share

ಅಜ್ಜಿಯ ಸರ ಕದಿಯಲು ಬಂದ ಕಳ್ಳನನ್ನು 10 ವರ್ಷದ ಪೋರಿ ಹೊಡೆದು ಓಡಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ರಸ್ತೆಯಲ್ಲಿ ಅಜ್ಜಿಯ ಜತೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್​ನಲ್ಲಿ ಬಂದ ಕಳ್ಳನೊಬ್ಬ ವೃದ್ಧೆಯ ಕುತ್ತಿಗೆಗೆ ಕೈಹಾಕಿದ್ದಾನೆ. ತಕ್ಷಣವೇ ಬಾಲಕಿ ತನ್ನ ಕೈಲಿದ್ದ ಚೀಲದಿಂದ ಕಳ್ಳನಿಗೆ ಥಳಿಸಿದ್ದು, ಕೊನೆಯ ಆತ ಚೈನ್ ಬಿಟ್ಟು ಪರಾರಿಯಾಗಿದ್ದಾನೆ.ಫೆಬ್ರವರಿ 25 ರಂದು ಪುಣೆಯ ಮಾಡೆಲ್ ಕಾಲೋನಿಯಲ್ಲಿ ಘಟನೆ ನಡೆಸಿದ್ದು, 60 ವರ್ಷದ ಲತಾ ಘಾಗ್ ತನ್ನ ಮೊಮ್ಮಗಳು ಋತ್ವಿ ಘಾಗ್ ಮನೆಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ.

ವಿಳಾಸ ಕೇಳುವ ನೆಪದಲ್ಲಿ ಬಂದ ಕಳ್ಳ ವೃದ್ಧೆಯ ಸರ ಕದಿಯಲು ಯತ್ನಿಸಿದ್ದಾನೆ. ಇದನ್ನು ನೋಡಿದ ಬಾಲಕಿ ಬ್ಯಾಗ್​ನಿಂದ ಕಳ್ಳನ ಮುಖಕ್ಕೆ ಹೊಡೆದಿದ್ದು, ಬೈಕ್ ಸವಾರ ತಕ್ಷಣವೇ ಓಡಿ ಹೋಗಿದ್ದಾನೆ. ಈ ಘಟನೆಯು ಫೆಬ್ರವರಿ 25 ರಂದು ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮತ್ತಷ್ಟು ಓದಿ: ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಕಳ್ಳನ ಕೈಚಳಕ: ಏಳು ವೈದ್ಯರ ಬ್ಯಾಗ್ ಎಗರಿಸಿದ ಕಳ್ಳ

ಮಾರ್ಚ್​ 9 ರಂದು ಈ ಕುರಿತು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 393ರ ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಕೂಡ ಇಂಥದ್ದೇ ಪ್ರಕರಣ ನಡೆದಿತ್ತು, ಸರಗಳ್ಳತನ ಮಾಡಿ ತಪ್ಪಿಸಿಕೊಂಡಿದ್ದ ಆರೋಪಿ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಸಿಕ್ಕಿಬಿದ್ದಿದ್ದ. ಈತ 2022ರಲ್ಲಿ ಪೂರ್ಣಪ್ರಜ್ಞಾ ಬಡಾವಣೆಯ ವೃದ್ಧೆಯ ಮಾಂಗಲ್ಯಸರ ಎಗರಿಸಿ ಪರಾರಿಯಾಗಿದ್ದ, ಸಿಸಿಟಿವಿ ವೀಕ್ಷಿಸಿ ಆತನ ಚಲನವಲನದ ಮೇಲೆ ಕಣ್ಣಿರಿಸಿ ಪೊಲೀಸ್ ಠಾಣೆ ಹಿಂಭಾಗವೇ ಬಂಧಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:19 am, Fri, 10 March 23

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ