Viral Video: ರಸ್ತೆಯಲ್ಲಿ ಅಜ್ಜಿಯ ಸರ ಕದಿಯಲು ಬಂದ ಕಳ್ಳನಿಗೆ ತಕ್ಕ ಶಾಸ್ತಿ ಮಾಡಿದ 10ರ ದಿಟ್ಟ ಪೋರಿ

ಅಜ್ಜಿಯ ಸರ ಕದಿಯಲು ಬಂದ ಕಳ್ಳನನ್ನು 10 ವರ್ಷದ ಪೋರಿ ಹೊಡೆದು ಓಡಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ರಸ್ತೆಯಲ್ಲಿ ಅಜ್ಜಿಯ ಜತೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್​ನಲ್ಲಿ ಬಂದ ಕಳ್ಳನೊಬ್ಬ ವೃದ್ಧೆಯ ಕುತ್ತಿಗೆಗೆ ಕೈಹಾಕಿದ್ದಾನೆ. ತ

Viral Video: ರಸ್ತೆಯಲ್ಲಿ ಅಜ್ಜಿಯ ಸರ ಕದಿಯಲು ಬಂದ ಕಳ್ಳನಿಗೆ ತಕ್ಕ ಶಾಸ್ತಿ ಮಾಡಿದ 10ರ ದಿಟ್ಟ ಪೋರಿ
ಸರಗಳ್ಳತನ
Follow us
|

Updated on:Mar 10, 2023 | 11:20 AM

ಅಜ್ಜಿಯ ಸರ ಕದಿಯಲು ಬಂದ ಕಳ್ಳನನ್ನು 10 ವರ್ಷದ ಪೋರಿ ಹೊಡೆದು ಓಡಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ರಸ್ತೆಯಲ್ಲಿ ಅಜ್ಜಿಯ ಜತೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್​ನಲ್ಲಿ ಬಂದ ಕಳ್ಳನೊಬ್ಬ ವೃದ್ಧೆಯ ಕುತ್ತಿಗೆಗೆ ಕೈಹಾಕಿದ್ದಾನೆ. ತಕ್ಷಣವೇ ಬಾಲಕಿ ತನ್ನ ಕೈಲಿದ್ದ ಚೀಲದಿಂದ ಕಳ್ಳನಿಗೆ ಥಳಿಸಿದ್ದು, ಕೊನೆಯ ಆತ ಚೈನ್ ಬಿಟ್ಟು ಪರಾರಿಯಾಗಿದ್ದಾನೆ.ಫೆಬ್ರವರಿ 25 ರಂದು ಪುಣೆಯ ಮಾಡೆಲ್ ಕಾಲೋನಿಯಲ್ಲಿ ಘಟನೆ ನಡೆಸಿದ್ದು, 60 ವರ್ಷದ ಲತಾ ಘಾಗ್ ತನ್ನ ಮೊಮ್ಮಗಳು ಋತ್ವಿ ಘಾಗ್ ಮನೆಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ.

ವಿಳಾಸ ಕೇಳುವ ನೆಪದಲ್ಲಿ ಬಂದ ಕಳ್ಳ ವೃದ್ಧೆಯ ಸರ ಕದಿಯಲು ಯತ್ನಿಸಿದ್ದಾನೆ. ಇದನ್ನು ನೋಡಿದ ಬಾಲಕಿ ಬ್ಯಾಗ್​ನಿಂದ ಕಳ್ಳನ ಮುಖಕ್ಕೆ ಹೊಡೆದಿದ್ದು, ಬೈಕ್ ಸವಾರ ತಕ್ಷಣವೇ ಓಡಿ ಹೋಗಿದ್ದಾನೆ. ಈ ಘಟನೆಯು ಫೆಬ್ರವರಿ 25 ರಂದು ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮತ್ತಷ್ಟು ಓದಿ: ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಕಳ್ಳನ ಕೈಚಳಕ: ಏಳು ವೈದ್ಯರ ಬ್ಯಾಗ್ ಎಗರಿಸಿದ ಕಳ್ಳ

ಮಾರ್ಚ್​ 9 ರಂದು ಈ ಕುರಿತು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 393ರ ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಕೂಡ ಇಂಥದ್ದೇ ಪ್ರಕರಣ ನಡೆದಿತ್ತು, ಸರಗಳ್ಳತನ ಮಾಡಿ ತಪ್ಪಿಸಿಕೊಂಡಿದ್ದ ಆರೋಪಿ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಸಿಕ್ಕಿಬಿದ್ದಿದ್ದ. ಈತ 2022ರಲ್ಲಿ ಪೂರ್ಣಪ್ರಜ್ಞಾ ಬಡಾವಣೆಯ ವೃದ್ಧೆಯ ಮಾಂಗಲ್ಯಸರ ಎಗರಿಸಿ ಪರಾರಿಯಾಗಿದ್ದ, ಸಿಸಿಟಿವಿ ವೀಕ್ಷಿಸಿ ಆತನ ಚಲನವಲನದ ಮೇಲೆ ಕಣ್ಣಿರಿಸಿ ಪೊಲೀಸ್ ಠಾಣೆ ಹಿಂಭಾಗವೇ ಬಂಧಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:19 am, Fri, 10 March 23

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?