AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮುಂಬೈ ಹೆದ್ದಾರಿಯಲ್ಲಿ ಬಿದ್ದ 20 ಟನ್​ ಟೊಮ್ಯಾಟೋ ವಿಡಿಯೋ ವೈರಲ್

Mumbai Rains: ಹೈವೇ ತುಂಬ 20 ಟನ್ ಟೊಮ್ಯಾಟೋ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ರಸ್ತೆಯಲ್ಲಿ ಬಿದ್ದಿದ್ದ ಸಾವಿರಾರು ಟನ್ ಟೊಮ್ಯಾಟೋವನ್ನು ಜೆಸಿಬಿ ಮೂಲಕ ತೆಗೆಯಲಾಗಿದೆ.

Viral Video: ಮುಂಬೈ ಹೆದ್ದಾರಿಯಲ್ಲಿ ಬಿದ್ದ 20 ಟನ್​ ಟೊಮ್ಯಾಟೋ ವಿಡಿಯೋ ವೈರಲ್
ಮುಂಬೈ ಹೈವೇಯಲ್ಲಿ ಬಿದ್ದ ಟೊಮ್ಯಾಟೋ ರಾಶಿ
TV9 Web
| Edited By: |

Updated on:Jul 16, 2021 | 3:54 PM

Share

ಮುಂಬೈ: ಮಹಾರಾಷ್ಟ್ರದ ಮುಂಬೈನ ಪೂರ್ವ ಎಕ್ಸ್​ಪ್ರೆಸ್​ ವೇ ಮುಂಬೈನ ಅತ್ಯಂತ ಟ್ರಾಫಿಕ್ ಇರುವ ರಸ್ತೆಗಳಲ್ಲೊಂದು. ಮುಂಬೈನಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ರಸ್ತೆ ಎಲ್ಲಿದೆ, ಚರಂಡಿ ಎಲ್ಲಿದೆ ಎಂಬುದು ಕೂಡ ಕಾಣದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಎಕ್ಸ್​ಪ್ರೆಸ್​ವೇಯಲ್ಲಿ ವೇಗವಾಗಿ ಬಂದ ಟ್ರಕ್ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದೆ. ಟ್ರಕ್​ನಲ್ಲಿದ್ದ 20 ಟನ್ ಟೊಮ್ಯಾಟೋ ರಸ್ತೆಯ ತುಂಬೆಲ್ಲ ರಾಶಿ ಬಿದ್ದಿದ್ದ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಮಳೆಯಿಂದ ಚಾಲಕ ನಿಯಂತ್ರಣ ತಪ್ಪಿ ರಸ್ತೆಯ ಅಡ್ಡಗೋಡೆಗೆ ಗುದ್ದಿದ್ದಾನೆ. ಈ ಘಟನೆಯಲ್ಲಿ ಒಬ್ಬನಿಗೆ ಗಂಭೀರವಾಗಿ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಹೈವೇ ತುಂಬ 20 ಟನ್ ಟೊಮ್ಯಾಟೋ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ವಿಡಿಯೋವನ್ನು ಎಎನ್​ಐ ಶೇರ್ ಮಾಡಿಕೊಂಡಿದೆ. ರಸ್ತೆಯಲ್ಲಿ ಬಿದ್ದಿದ್ದ ಸಾವಿರಾರು ಟನ್ ಟೊಮ್ಯಾಟೋವನ್ನು ಜೆಸಿಬಿ ಮೂಲಕ ತೆಗೆಯಲಾಗಿದೆ.

ಈ ವಿಡಿಯೋ ನೋಡಿದರೆ ಸ್ಪೇನ್​ನಲ್ಲಿ ನಡೆಯುವ ಟೊಮ್ಯಾಟಿನ ಫೆಸ್ಟಿವಲ್ ರೀತಿ ಕಾಣುತ್ತಿದೆ ಎಂದು ಕೆಲವರು ಟ್ವೀಟ್ ಮಾಡಿದ್ದಾರೆ. ಸ್ಪೇನ್​ನಲ್ಲಿ ಟೊಮ್ಯಾಟೋದಿಂದ ಹೊಡೆದುಕೊಳ್ಳುವ ಫೆಸ್ಟಿವಲ್ ಒಂದು ನಡೆಯುತ್ತದೆ. ಅದಾದ ಮೇಲೆ ರಸ್ತೆಗಳ ತುಂಬ ಇದೇ ರೀತಿ ಟೊಮ್ಯಾಟೋ ಹಣ್ಣುಗಳ ರಾಶಿ ಬಿದ್ದಿರುತ್ತದೆ.

ಮಳೆಯಿಂದ ಮುಂಬೈನಲ್ಲಿ ಬಸ್, ರೈಲು ಸಂಚಾರ ಸ್ಥಗಿತಗೊಂಡಿದೆ. ಅಂಧೇರಿಯಲ್ಲಿ ಮಹಿಳೆಯೊಬ್ಬಳು ಮ್ಯಾನ್​ಹೋಲ್​ನಲ್ಲಿ ಕೊಚ್ಚಿಹೋಗಿರುವ ಘಟನೆಯೂ ನಡೆದಿದೆ. ಮುಂಬೈ, ಥಾಣೆ, ನವಿ ಮುಂಬೈ, ಪಲ್ಘಾರ್ ಮುಂತಾದ ಪ್ರದೇಶದಲ್ಲಿ ಮಳೆ ಹೆಚ್ಚಾಗಿದೆ. ಮಹಾರಾಷ್ಟ್ರದ ಬಹುತೇಕ ಕಡೆ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯ ಆರ್ಭಟವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬೈ ಸುತ್ತಮುತ್ತಲಿನ ರಸ್ತೆಗಳೆಲ್ಲ ನದಿಗಳಂತಾಗಿದ್ದು, ಜನರು ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಪರದಾಡುತ್ತಿದ್ದಾರೆ. ಅಂಧೇರಿ, ಚೆಂಬೂರ್, ಸಿಯೋನ್, ಮುಂಬೈನಲ್ಲಿ ರಸ್ತೆಗಳಲ್ಲಿ ನೀರು ತುಂಬಿ ಬಸ್​ ಸಂಚಾರ ವ್ಯತ್ಯಯವಾಗಿದೆ.

ಇದನ್ನೂ ಓದಿ: Viral Video: ಅಚ್ಚರಿಯಾದರೂ ಸತ್ಯ; ವಕೀಲನ ಮೇಲೆ ದಾಳಿ ಮಾಡಿದ 2 ನಾಯಿಗಳಿಗೆ ಮರಣದಂಡನೆ ಶಿಕ್ಷೆ!

ಇದನ್ನೂ ಓದಿ: Mumbai Rains: ಮುಂಬೈನಲ್ಲಿ ಭಾರೀ ಮಳೆಯಿಂದ ಕೆರೆಯಾದ ರಸ್ತೆಗಳು; ಬಸ್, ರೈಲು ಸಂಚಾರ ಅಸ್ಯವ್ಯಸ್ತ

(20 Tonnes of Tomatoes Scattered on Mumbai Highway as Tomato Laden Truck Overturns after Heavy Rain)

Published On - 3:53 pm, Fri, 16 July 21

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್