AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮುಂಬೈ ಹೆದ್ದಾರಿಯಲ್ಲಿ ಬಿದ್ದ 20 ಟನ್​ ಟೊಮ್ಯಾಟೋ ವಿಡಿಯೋ ವೈರಲ್

Mumbai Rains: ಹೈವೇ ತುಂಬ 20 ಟನ್ ಟೊಮ್ಯಾಟೋ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ರಸ್ತೆಯಲ್ಲಿ ಬಿದ್ದಿದ್ದ ಸಾವಿರಾರು ಟನ್ ಟೊಮ್ಯಾಟೋವನ್ನು ಜೆಸಿಬಿ ಮೂಲಕ ತೆಗೆಯಲಾಗಿದೆ.

Viral Video: ಮುಂಬೈ ಹೆದ್ದಾರಿಯಲ್ಲಿ ಬಿದ್ದ 20 ಟನ್​ ಟೊಮ್ಯಾಟೋ ವಿಡಿಯೋ ವೈರಲ್
ಮುಂಬೈ ಹೈವೇಯಲ್ಲಿ ಬಿದ್ದ ಟೊಮ್ಯಾಟೋ ರಾಶಿ
TV9 Web
| Edited By: |

Updated on:Jul 16, 2021 | 3:54 PM

Share

ಮುಂಬೈ: ಮಹಾರಾಷ್ಟ್ರದ ಮುಂಬೈನ ಪೂರ್ವ ಎಕ್ಸ್​ಪ್ರೆಸ್​ ವೇ ಮುಂಬೈನ ಅತ್ಯಂತ ಟ್ರಾಫಿಕ್ ಇರುವ ರಸ್ತೆಗಳಲ್ಲೊಂದು. ಮುಂಬೈನಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ರಸ್ತೆ ಎಲ್ಲಿದೆ, ಚರಂಡಿ ಎಲ್ಲಿದೆ ಎಂಬುದು ಕೂಡ ಕಾಣದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಎಕ್ಸ್​ಪ್ರೆಸ್​ವೇಯಲ್ಲಿ ವೇಗವಾಗಿ ಬಂದ ಟ್ರಕ್ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದೆ. ಟ್ರಕ್​ನಲ್ಲಿದ್ದ 20 ಟನ್ ಟೊಮ್ಯಾಟೋ ರಸ್ತೆಯ ತುಂಬೆಲ್ಲ ರಾಶಿ ಬಿದ್ದಿದ್ದ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಮಳೆಯಿಂದ ಚಾಲಕ ನಿಯಂತ್ರಣ ತಪ್ಪಿ ರಸ್ತೆಯ ಅಡ್ಡಗೋಡೆಗೆ ಗುದ್ದಿದ್ದಾನೆ. ಈ ಘಟನೆಯಲ್ಲಿ ಒಬ್ಬನಿಗೆ ಗಂಭೀರವಾಗಿ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಹೈವೇ ತುಂಬ 20 ಟನ್ ಟೊಮ್ಯಾಟೋ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ವಿಡಿಯೋವನ್ನು ಎಎನ್​ಐ ಶೇರ್ ಮಾಡಿಕೊಂಡಿದೆ. ರಸ್ತೆಯಲ್ಲಿ ಬಿದ್ದಿದ್ದ ಸಾವಿರಾರು ಟನ್ ಟೊಮ್ಯಾಟೋವನ್ನು ಜೆಸಿಬಿ ಮೂಲಕ ತೆಗೆಯಲಾಗಿದೆ.

ಈ ವಿಡಿಯೋ ನೋಡಿದರೆ ಸ್ಪೇನ್​ನಲ್ಲಿ ನಡೆಯುವ ಟೊಮ್ಯಾಟಿನ ಫೆಸ್ಟಿವಲ್ ರೀತಿ ಕಾಣುತ್ತಿದೆ ಎಂದು ಕೆಲವರು ಟ್ವೀಟ್ ಮಾಡಿದ್ದಾರೆ. ಸ್ಪೇನ್​ನಲ್ಲಿ ಟೊಮ್ಯಾಟೋದಿಂದ ಹೊಡೆದುಕೊಳ್ಳುವ ಫೆಸ್ಟಿವಲ್ ಒಂದು ನಡೆಯುತ್ತದೆ. ಅದಾದ ಮೇಲೆ ರಸ್ತೆಗಳ ತುಂಬ ಇದೇ ರೀತಿ ಟೊಮ್ಯಾಟೋ ಹಣ್ಣುಗಳ ರಾಶಿ ಬಿದ್ದಿರುತ್ತದೆ.

ಮಳೆಯಿಂದ ಮುಂಬೈನಲ್ಲಿ ಬಸ್, ರೈಲು ಸಂಚಾರ ಸ್ಥಗಿತಗೊಂಡಿದೆ. ಅಂಧೇರಿಯಲ್ಲಿ ಮಹಿಳೆಯೊಬ್ಬಳು ಮ್ಯಾನ್​ಹೋಲ್​ನಲ್ಲಿ ಕೊಚ್ಚಿಹೋಗಿರುವ ಘಟನೆಯೂ ನಡೆದಿದೆ. ಮುಂಬೈ, ಥಾಣೆ, ನವಿ ಮುಂಬೈ, ಪಲ್ಘಾರ್ ಮುಂತಾದ ಪ್ರದೇಶದಲ್ಲಿ ಮಳೆ ಹೆಚ್ಚಾಗಿದೆ. ಮಹಾರಾಷ್ಟ್ರದ ಬಹುತೇಕ ಕಡೆ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯ ಆರ್ಭಟವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬೈ ಸುತ್ತಮುತ್ತಲಿನ ರಸ್ತೆಗಳೆಲ್ಲ ನದಿಗಳಂತಾಗಿದ್ದು, ಜನರು ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಪರದಾಡುತ್ತಿದ್ದಾರೆ. ಅಂಧೇರಿ, ಚೆಂಬೂರ್, ಸಿಯೋನ್, ಮುಂಬೈನಲ್ಲಿ ರಸ್ತೆಗಳಲ್ಲಿ ನೀರು ತುಂಬಿ ಬಸ್​ ಸಂಚಾರ ವ್ಯತ್ಯಯವಾಗಿದೆ.

ಇದನ್ನೂ ಓದಿ: Viral Video: ಅಚ್ಚರಿಯಾದರೂ ಸತ್ಯ; ವಕೀಲನ ಮೇಲೆ ದಾಳಿ ಮಾಡಿದ 2 ನಾಯಿಗಳಿಗೆ ಮರಣದಂಡನೆ ಶಿಕ್ಷೆ!

ಇದನ್ನೂ ಓದಿ: Mumbai Rains: ಮುಂಬೈನಲ್ಲಿ ಭಾರೀ ಮಳೆಯಿಂದ ಕೆರೆಯಾದ ರಸ್ತೆಗಳು; ಬಸ್, ರೈಲು ಸಂಚಾರ ಅಸ್ಯವ್ಯಸ್ತ

(20 Tonnes of Tomatoes Scattered on Mumbai Highway as Tomato Laden Truck Overturns after Heavy Rain)

Published On - 3:53 pm, Fri, 16 July 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್