AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವೇದಿಕೆಯಲ್ಲೇ ಬಿಜೆಪಿ ಶಾಸಕನ ಕೆನ್ನೆಗೆ ಹೊಡೆದ ರೈತ; ವಿಡಿಯೋ ವೈರಲ್ ಆಗುತ್ತಿದ್ದಂತೆ ತೇಪೆ ಹಚ್ಚಿದ ಎಂಎಲ್​ಎ

ರೈತರೊಬ್ಬರು ಬಿಜೆಪಿ ಶಾಸಕರಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ಪಷ್ಟನೆ ನೀಡಿರುವ ಶಾಸಕ ಪಂಕಜ್ ಗುಪ್ತಾ ಅವರು ನನ್ನ ಕೆನ್ನೆ ತಟ್ಟಿದರಷ್ಟೇ ಎಂದು ಸಮಜಾಯಿಷಿ ಕೊಟ್ಟಿದ್ದಾರೆ.

Viral Video: ವೇದಿಕೆಯಲ್ಲೇ ಬಿಜೆಪಿ ಶಾಸಕನ ಕೆನ್ನೆಗೆ ಹೊಡೆದ ರೈತ; ವಿಡಿಯೋ ವೈರಲ್ ಆಗುತ್ತಿದ್ದಂತೆ ತೇಪೆ ಹಚ್ಚಿದ ಎಂಎಲ್​ಎ
ಶಾಸಕರ ಕೆನ್ನೆಗೆ ಹೊಡೆದ ರೈತ
TV9 Web
| Updated By: ಸುಷ್ಮಾ ಚಕ್ರೆ|

Updated on: Jan 08, 2022 | 5:56 PM

Share

ಉನ್ನಾವೋ: ಉತ್ತರ ಪ್ರದೇಶದ ಸಮಾರಂಭವೊಂದರಲ್ಲಿ ಬಿಜೆಪಿ ಶಾಸಕ ಪಂಕಜ್ ಗುಪ್ತಾ ಅವರಿಗೆ ರೈತರೊಬ್ಬರು ಕಪಾಳಮೋಕ್ಷ ಮಾಡಿರುವ ವಿಡಿಯೋ ವೈರಲ್ ಆಗಿದೆ. ಆದರೆ, ಆ ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ಪಷ್ಟನೆ ನೀಡಿರುವ ಶಾಸಕ ಪಂಕಜ್ ಗುಪ್ತಾ ಅವರು ನನ್ನ ಕೆನ್ನೆ ತಟ್ಟಿದರಷ್ಟೇ ಎಂದಿದ್ದಾರೆ. ಆದರೆ, ಆ ವೃದ್ಧ ರೈತ ಶಾಸಕರ ಕಪಾಳಕ್ಕೆ ಹೊಡೆಯುತ್ತಿದ್ದಂತೆ ಪೊಲೀಸರು ಅವರನ್ನು ಗದರಿಸಿ, ವೇದಿಕೆಯಿಂದ ಕೆಳಗೆ ಇಳಿಸಿರುವುದು ಹಾಗೂ ಶಾಸಕ ಆಘಾತದಿಂದ ಅವರತ್ತಲೇ ನೋಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ರೈತರೊಬ್ಬರು ಬಿಜೆಪಿ ಶಾಸಕರಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಪಕ್ಷದ ನಾಯಕರು ಭಾರೀ ಮುಜುಗರಕ್ಕೀಡಾಗಿದ್ದಾರೆ. ಅಲ್ಲದೆ, ಸಮಾಜವಾದಿ ಪಕ್ಷ ಸೇರಿದಂತೆ ಅನೇಕ ವಿಪಕ್ಷಗಳು ಈ ವಿಡಿಯೋವನ್ನು ಶೇರ್ ಮಾಡಿಕೊಂಡು ಬಿಜೆಪಿ ಸರ್ಕಾರದ ವಿರುದ್ಧ ಟೀಕೆ ಮಾಡಿವೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಶಾಸಕ ಪಂಕಜ್ ಗುಪ್ತಾ, ಆ ವಿಡಿಯೋದಲ್ಲಿರುವ ವ್ಯಕ್ತಿ ನನ್ನ ‘ಚಾಚಾ (ಚಿಕ್ಕಪ್ಪ)’. ಅವರು ಯಾವಾಗಲೂ ಮಾಡುವಂತೆ ಪ್ರೀತಿಯಿಂದಲೇ ನನ್ನ ಕೆನ್ನೆಯನ್ನು ತಟ್ಟಿದರು” ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ. ಆ ರೈತನನ್ನು ಕೂರಿಸಿಕೊಂಡೇ ಗುಪ್ತಾ ಸುದ್ದಿಗೋಷ್ಠಿ ನಡೆಸಿದ್ದಾರೆ.

ಶಾಸಕರಿಗೆ ಕಪಾಳಮೋಕ್ಷ ಮಾಡಿದ ರೈತನನ್ನು ಛತ್ರಪಾಲ್ ಎಂದು ಗುರುತಿಸಲಾಗಿದೆ. ವೇದಿಕೆಯ ಮೇಲೆ ಶಾಸಕನಿಗೆ ಹೊಡೆದ ನಂತರ ಪೊಲೀಸರು ಅವನನ್ನು ಕರೆದುಕೊಂಡು ಹೋಗುವುದನ್ನು ವೀಡಿಯೊ ತುಣುಕಿನಲ್ಲಿ ತೋರಿಸಲಾಗಿದೆ. ಮೂಲಗಳ ಪ್ರಕಾರ, ಆ ರೈತ ಕೆಲವು ದಿನಗಳ ಹಿಂದೆ ತಮ್ಮ ಹಸುಗಳು ಕಾಣೆಯಾಗಿವೆ ಎಂದು ಪೊಲೀಸರಿಗೆ ದೂರು ನೀಡಿದ್ದರು. ಶಾಸಕರ ಕಚೇರಿಗೂ ದೂರು ನೀಡಿದ್ದರು. ಆದರೆ, ಆ ಬಗ್ಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದರಿಂದ ಕೋಪಗೊಂಡಿದ್ದ ಆ ವೃದ್ಧ ಶಾಸಕರು ಕುಳಿತಿದ್ದ ಸಮಾರಂಭದ ವೇದಿಕೆಯೇರಿ ಕಪಾಳಕ್ಕೆ ಹೊಡೆದಿದ್ದಾರೆ ಎನ್ನಲಾಗಿದೆ.

ಜನವರಿ 5ರಂದು ಹಿರಿಯ ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ಅವರ ಜನ್ಮದಿನದ ಸಂದರ್ಭದಲ್ಲಿ ಎರಬಡಿಯಭರ್ ವೃತ್ತದಲ್ಲಿ ಗುಲಾಬ್ ಸಿಂಗ್ ಲೋಧಿ ಅವರ ಪ್ರತಿಮೆಯನ್ನು ಅನಾವರಣಗೊಳಿಸುವ ಸಮಾರಂಭದಲ್ಲಿ ಈ ಘಟನೆ ನಡೆದಿದೆ ಎಂದು ಗುಪ್ತಾ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದೊಂದು ಸಾಮಾನ್ಯ ಸಂಗತಿಯಾಗಿದ್ದು, ವಿರೋಧ ಪಕ್ಷದವರು ಇದಕ್ಕೆ ಬಣ್ಣ ಬಳಿದು ತಮಗೆ ಅನುಕೂಲವಾಗುವಂತೆ ಬಳಸಿಕೊಳ್ಳುತ್ತಿದ್ದಾರೆ ಎಂದು ಅವರು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: Viral Video: ಬೀದಿ ಪಾಲಾಗಿ ಫುಟ್​ಪಾತ್​ನಲ್ಲಿ ಕುಳಿತಿದ್ದ ವ್ಯಕ್ತಿಯನ್ನು ತಬ್ಬಿಕೊಂಡ ನಾಯಿ; ವಿಡಿಯೋ ವೈರಲ್

Viral Video: ಕೂದಲಿಂದಲೇ 12 ಸಾವಿರ ಕೆಜಿ ತೂಕದ ಬಸ್ ಎಳೆದು ಗಿನ್ನೆಸ್ ರೆಕಾರ್ಡ್ ಮಾಡಿದ ಮಹಿಳೆ!

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?