AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೋಡನೋಡುತ್ತಿದ್ದಂತೆ ಪ್ರವಾಹದ ನೀರಿನಲ್ಲಿ ಕೊಚ್ಚಿಹೋದ ಶಾಲಾ ಬಸ್; ಶಾಕಿಂಗ್ ವಿಡಿಯೋ ವೈರಲ್

ಅದೃಷ್ಟವಶಾತ್ ಬಸ್ಸಿನಲ್ಲಿ ಶಾಲಾ ಮಕ್ಕಳಿರಲಿಲ್ಲ. ಇದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಶಾಲಾ ಬಸ್ ಅನ್ನು ಜೆಸಿಬಿ ಸಹಾಯದಿಂದ ನದಿಯಿಂದ ಹೊರತೆಗೆಯಲಾಯಿತು.

Viral Video: ನೋಡನೋಡುತ್ತಿದ್ದಂತೆ ಪ್ರವಾಹದ ನೀರಿನಲ್ಲಿ ಕೊಚ್ಚಿಹೋದ ಶಾಲಾ ಬಸ್; ಶಾಕಿಂಗ್ ವಿಡಿಯೋ ವೈರಲ್
ಚರಂಡಿಗೆ ಬಿದ್ದ ಶಾಲಾ ಬಸ್
TV9 Web
| Edited By: |

Updated on: Jul 19, 2022 | 1:01 PM

Share

ನವದೆಹಲಿ: ಉತ್ತರಾಖಂಡದ ಚಂಪಾವತ್‌ನಲ್ಲಿ (Champawat) ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಮಂಗಳವಾರ ಬೆಳಗ್ಗೆ ಶಾಲಾ ಮಕ್ಕಳನ್ನು (School Bus) ಹತ್ತಿಸಿಕೊಳ್ಳಲು ಹೋಗುತ್ತಿದ್ದ ಶಾಲಾ ಬಸ್ ಇಲ್ಲಿನ ಪೂರ್ಣಗಿರಿ ರಸ್ತೆಯ ಕಿರೋಡ ಚರಂಡಿಯಲ್ಲಿ ಪ್ರವಾಹದ (Flood) ನೀರಿನಲ್ಲಿ ಕೊಚ್ಚಿಹೋಗಿದೆ. ನೀರಿನ ಹೊಡೆತಕ್ಕೆ ಸಿಲುಕಿ ಉರುಳಿ ನದಿಗೆ ಬಿದ್ದಿದೆ. ಈ ಘಟನೆಯಲ್ಲಿ ಶಾಲಾ ಬಸ್​ ಚಾಲಕ ಕಮಲೇಶ್ ಕರ್ಕಿ ಹಾಗೂ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅದೃಷ್ಟವಶಾತ್ ಬಸ್ಸಿನಲ್ಲಿ ಶಾಲಾ ಮಕ್ಕಳಿರಲಿಲ್ಲ. ಇದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಗ್ರಾಮಸ್ಥರ ಪ್ರಕಾರ, ನೀರಿನ ಹರಿವು ಹೆಚ್ಚಿರುವುದರಿಂದ ಶಾಲಾ ಬಸ್ ಚಾಲಕನಿಗೆ ಸ್ವಲ್ಪ ಸಮಯ ಕಾಯಲು ಹೇಳಲಾಗಿತ್ತು. ಆದರೂ ಆತ ತುಂಬಿ ಹರಿಯುತ್ತಿದ್ದ ನದಿಯ ರಸ್ತೆಯಲ್ಲಿ ಬಸ್ ಚಲಾಯಿಸಿದ್ದ. ಈ ವೇಳೆ ನೀರಿನ ರಭಸಕ್ಕೆ ಬಸ್ ಮಗುಚಿ ಬಿದ್ದಿದ್ದು, ನದಿಯಲ್ಲಿ ಸ್ವಲ್ಪ ದೂರ ಕೊಚ್ಚಿಕೊಂಡು ಹೋಗಿದೆ. ಶಾಲಾ ಬಸ್​ನ ಒಂದು ಭಾಗ ಅಪಘಾತದಲ್ಲಿ ಜಖಂಗೊಂಡಿದೆ.

ಇದನ್ನೂ ಓದಿ: Viral Video: ಸೈನಿಕರ ಕಾಲಿಗೆ ಬಿದ್ದು ನಮಸ್ಕರಿಸಿದ ಕಂದಮ್ಮ; ಮುದ್ದಾದ ವಿಡಿಯೋಗೆ ನೆಟ್ಟಿಗರು ಫಿದಾ

ಶಾಲಾ ಬಸ್ ಅನ್ನು ಜೆಸಿಬಿ ಸಹಾಯದಿಂದ ನದಿಯಿಂದ ಹೊರತೆಗೆಯಲಾಯಿತು. ನದಿ ತುಂಬಿ ಹರಿಯುತ್ತಿರುವುದರಿಂದ ಪೂರ್ಣಗಿರಿ ರಸ್ತೆಯ ಸಂಚಾರವನ್ನು ಸದ್ಯಕ್ಕೆ ಬಂದ್ ಮಾಡಲಾಗಿದೆ. ಭದ್ರತೆಯ ದೃಷ್ಟಿಯಿಂದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ನದಿಗಳು ಮತ್ತು ಚರಂಡಿಗಳು ಉಕ್ಕಿ ಹರಿಯುತ್ತಿವೆ. ಚಂಪಾವತ್ ಜಿಲ್ಲೆಯಲ್ಲಿ ಮಳೆಯ ಹಿನ್ನೆಲೆಯಲ್ಲಿ ಭೂಕುಸಿತದಿಂದ ರಸ್ತೆಗಳು ಸಹ ಮುಚ್ಚಿಹೋಗಿವೆ. ಇದರಿಂದಾಗಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ