AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೋಡನೋಡುತ್ತಿದ್ದಂತೆ ಪ್ರವಾಹದ ನೀರಿನಲ್ಲಿ ಕೊಚ್ಚಿಹೋದ ಶಾಲಾ ಬಸ್; ಶಾಕಿಂಗ್ ವಿಡಿಯೋ ವೈರಲ್

ಅದೃಷ್ಟವಶಾತ್ ಬಸ್ಸಿನಲ್ಲಿ ಶಾಲಾ ಮಕ್ಕಳಿರಲಿಲ್ಲ. ಇದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಶಾಲಾ ಬಸ್ ಅನ್ನು ಜೆಸಿಬಿ ಸಹಾಯದಿಂದ ನದಿಯಿಂದ ಹೊರತೆಗೆಯಲಾಯಿತು.

Viral Video: ನೋಡನೋಡುತ್ತಿದ್ದಂತೆ ಪ್ರವಾಹದ ನೀರಿನಲ್ಲಿ ಕೊಚ್ಚಿಹೋದ ಶಾಲಾ ಬಸ್; ಶಾಕಿಂಗ್ ವಿಡಿಯೋ ವೈರಲ್
ಚರಂಡಿಗೆ ಬಿದ್ದ ಶಾಲಾ ಬಸ್
TV9 Web
| Edited By: |

Updated on: Jul 19, 2022 | 1:01 PM

Share

ನವದೆಹಲಿ: ಉತ್ತರಾಖಂಡದ ಚಂಪಾವತ್‌ನಲ್ಲಿ (Champawat) ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಮಂಗಳವಾರ ಬೆಳಗ್ಗೆ ಶಾಲಾ ಮಕ್ಕಳನ್ನು (School Bus) ಹತ್ತಿಸಿಕೊಳ್ಳಲು ಹೋಗುತ್ತಿದ್ದ ಶಾಲಾ ಬಸ್ ಇಲ್ಲಿನ ಪೂರ್ಣಗಿರಿ ರಸ್ತೆಯ ಕಿರೋಡ ಚರಂಡಿಯಲ್ಲಿ ಪ್ರವಾಹದ (Flood) ನೀರಿನಲ್ಲಿ ಕೊಚ್ಚಿಹೋಗಿದೆ. ನೀರಿನ ಹೊಡೆತಕ್ಕೆ ಸಿಲುಕಿ ಉರುಳಿ ನದಿಗೆ ಬಿದ್ದಿದೆ. ಈ ಘಟನೆಯಲ್ಲಿ ಶಾಲಾ ಬಸ್​ ಚಾಲಕ ಕಮಲೇಶ್ ಕರ್ಕಿ ಹಾಗೂ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅದೃಷ್ಟವಶಾತ್ ಬಸ್ಸಿನಲ್ಲಿ ಶಾಲಾ ಮಕ್ಕಳಿರಲಿಲ್ಲ. ಇದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಗ್ರಾಮಸ್ಥರ ಪ್ರಕಾರ, ನೀರಿನ ಹರಿವು ಹೆಚ್ಚಿರುವುದರಿಂದ ಶಾಲಾ ಬಸ್ ಚಾಲಕನಿಗೆ ಸ್ವಲ್ಪ ಸಮಯ ಕಾಯಲು ಹೇಳಲಾಗಿತ್ತು. ಆದರೂ ಆತ ತುಂಬಿ ಹರಿಯುತ್ತಿದ್ದ ನದಿಯ ರಸ್ತೆಯಲ್ಲಿ ಬಸ್ ಚಲಾಯಿಸಿದ್ದ. ಈ ವೇಳೆ ನೀರಿನ ರಭಸಕ್ಕೆ ಬಸ್ ಮಗುಚಿ ಬಿದ್ದಿದ್ದು, ನದಿಯಲ್ಲಿ ಸ್ವಲ್ಪ ದೂರ ಕೊಚ್ಚಿಕೊಂಡು ಹೋಗಿದೆ. ಶಾಲಾ ಬಸ್​ನ ಒಂದು ಭಾಗ ಅಪಘಾತದಲ್ಲಿ ಜಖಂಗೊಂಡಿದೆ.

ಇದನ್ನೂ ಓದಿ: Viral Video: ಸೈನಿಕರ ಕಾಲಿಗೆ ಬಿದ್ದು ನಮಸ್ಕರಿಸಿದ ಕಂದಮ್ಮ; ಮುದ್ದಾದ ವಿಡಿಯೋಗೆ ನೆಟ್ಟಿಗರು ಫಿದಾ

ಶಾಲಾ ಬಸ್ ಅನ್ನು ಜೆಸಿಬಿ ಸಹಾಯದಿಂದ ನದಿಯಿಂದ ಹೊರತೆಗೆಯಲಾಯಿತು. ನದಿ ತುಂಬಿ ಹರಿಯುತ್ತಿರುವುದರಿಂದ ಪೂರ್ಣಗಿರಿ ರಸ್ತೆಯ ಸಂಚಾರವನ್ನು ಸದ್ಯಕ್ಕೆ ಬಂದ್ ಮಾಡಲಾಗಿದೆ. ಭದ್ರತೆಯ ದೃಷ್ಟಿಯಿಂದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ನದಿಗಳು ಮತ್ತು ಚರಂಡಿಗಳು ಉಕ್ಕಿ ಹರಿಯುತ್ತಿವೆ. ಚಂಪಾವತ್ ಜಿಲ್ಲೆಯಲ್ಲಿ ಮಳೆಯ ಹಿನ್ನೆಲೆಯಲ್ಲಿ ಭೂಕುಸಿತದಿಂದ ರಸ್ತೆಗಳು ಸಹ ಮುಚ್ಚಿಹೋಗಿವೆ. ಇದರಿಂದಾಗಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ