Viral Video: ಭಾರೀ ಮಳೆಯಿಂದ ಕೊಚ್ಚಿ ಹೋಯ್ತು ಡೆಹ್ರಾಡೂನ್- ಹೃಷಿಕೇಶದ ರಸ್ತೆ; ವಿಡಿಯೋ ವೈರಲ್

Uttarakhand Flood: ಡೆಹ್ರಾಡೂನ್ ಮತ್ತು ಹೃಷಿಕೇಶದ ಹೆದ್ದಾರಿಗೆ ಪರ್ಯಾಯ ರಸ್ತೆ ಮಾರ್ಗವನ್ನು ನಿರ್ಮಿಸಲಾಗಿದೆ.  ಆ ಪರ್ಯಾಯ ಮಾರ್ಗ ಕೂಡ ಮಳೆಯಿಂದ ಕೊಚ್ಚಿಕೊಂಡು ಹೋಗಿದೆ.

Viral Video: ಭಾರೀ ಮಳೆಯಿಂದ ಕೊಚ್ಚಿ ಹೋಯ್ತು ಡೆಹ್ರಾಡೂನ್- ಹೃಷಿಕೇಶದ ರಸ್ತೆ; ವಿಡಿಯೋ ವೈರಲ್
ಉತ್ತರಾಖಂಡ ಪ್ರವಾಹ
Follow us
| Updated By: ಸುಷ್ಮಾ ಚಕ್ರೆ

Updated on: Sep 07, 2021 | 4:41 PM

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹದ ಭೀತಿ ಎದುರಾಗಿದೆ. ಡೆಹ್ರಾಡೂನ್ ಮತ್ತು ಹೃಷಿಕೇಶದ ಹೆದ್ದಾರಿಗೆ ಪರ್ಯಾಯ ರಸ್ತೆ ಮಾರ್ಗವನ್ನು ನಿರ್ಮಿಸಲಾಗಿದೆ.  ಆ ಪರ್ಯಾಯ ಮಾರ್ಗ ಕೂಡ ಮಳೆಯಿಂದ ಕೊಚ್ಚಿಕೊಂಡು ಹೋಗಿದೆ. ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಉತ್ತರಾಖಂಡದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದ ಡೆಹ್ರಾಡೂನ್ ಮತ್ತು ಹೃಷಿಕೇಶಕ್ಕೆ ಸಂಪರ್ಕ ಕಲ್ಪಿಸುತ್ತಿದ್ದ ರಾಣಿಪೋಖರಿ ಫ್ಲೈಓವರ್​ನ ಭಾಗ ಮುರಿದು ಬಿದ್ದ ಹಿನ್ನೆಲೆಯಲ್ಲಿ ಪರ್ಯಾಯವಾಗಿ ಈ ಮಾರ್ಗವನ್ನು ನಿರ್ಮಿಸಲಾಗಿತ್ತು.

ಪ್ರವಾಹದಲ್ಲಿ ರಸ್ತೆ ಕೊಚ್ಚಿಕೊಂಡು ಹೋಗುವ ವಿಡಿಯೋ ಭಾರೀ ವೈರಲ್ ಆಗಿದೆ. ರಸ್ತೆಯ ಜೊತೆಗೆ ಕೆಲವು ವಾಹನಗಳು ಕೂಡ ಮಳೆ ನೀರಿನಲ್ಲಿ ಕೊಚ್ಚಿ ಹೋಗಿರುವು ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮುರಿದು ಬಿದ್ದ ಸೇತುವೆಯ ಕೆಳಭಾಗದಲ್ಲಿ ನುಗ್ಗಿದ ಪ್ರವಾಹದ ನೀರು ಅಲ್ಲಿ ನಿಲ್ಲಿಸಿದ್ದ ವಾಹನಗಳನ್ನು ತಳ್ಳಿಕೊಂಡು ಹೋಗಿದೆ.

ಉತ್ತರಾಖಂಡದಲ್ಲಿ ಪ್ರವಾಹದಿಂದ 5 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಇಬ್ಬರು ನಾಪತ್ತೆಯಾಗಿದ್ದಾರೆ. ಜುಮ್ಮಾ ಎಂಬ ಹಳ್ಳಿಯಲ್ಲಿ ಎರಡು ಮನೆಗಳು ಕುಸಿದು ಬಿದ್ದಿದೆ. ಜುಮ್ಮಾ ಮತ್ತು ಅದರ ಸುತ್ತಮುತ್ತಲಿನ ಕನಿಷ್ಠ 22 ಕುಟುಂಬಗಳು ಅಪಾಯದ ಅಂಚಿನಲ್ಲಿವೆ. ಪ್ರವಾಹದಿಂದ ಮನೆಗಳ ತುಂಬ ನೀರು ತುಂಬಿ, ಬಿರುಕು ಬಿಟ್ಟಿವೆ. ಯಾವಾಗ ಬೇಕಾದರೂ ಮನೆಗಳು ಕುಸಿದು ಬೀಳುವ ಆತಂಕ ಎದುರಾಗಿದೆ.

ಕಳೆದ ಕೆಲವು ದಿನಗಳಿಂದ ಉತ್ತರಾಖಂಡ, ಕಾಶ್ಮೀರ, ದೆಹಲಿ ಸುತ್ತಮುತ್ತಲಿನ ರಾಜ್ಯಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಇದರಿಂದ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದ್ದು, ಹಲವು ಗ್ರಾಮಗಳು ಜಲಾವೃತವಾಗಿವೆ. ಇನ್ನು ಮೂರು ದಿನ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಕೊಂಕಣ, ಗುಜರಾತ್, ರಾಜಸ್ಥಾನದಲ್ಲಿ ಸೆ. 10ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ದಕ್ಷಿಣ ಒಡಿಶಾ, ಕರಾವಳಿ ಆಂಧ್ರ ಪ್ರದೇಶ, ತೆಲಂಗಾಣ, ಹರಿಯಾಣ, ವಿದರ್ಭ ಮತ್ತು ದಕ್ಷಿಣ ಛತ್ತೀಸ್‌ಗಢದ ಕಡಿಮೆ ಒತ್ತಡದ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದಲ್ಲಿ ಸೆ. 9ರವರೆಗೂ ಮಳೆ; ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ

Flood Alert: ಭೀಮಾ ನದಿಪಾತ್ರದ ಜನರೇ ಎಚ್ಚರ: ಉಂಟಾಗಿದೆ ಪ್ರವಾಹ ಭೀತಿ

(Alternate road on Dehradun-Rishikesh highway Wash away amid heavy rain and Uttarakhand Flood)

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ