AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Caught on Camera: ದೇವಸ್ಥಾನದ ಆನೆಗೆ ಮನಬಂದಂತೆ ಥಳಿಸಿದ ಮಾವುತರು, ಮನಕಲಕುವ ವಿಡಿಯೋ ವೈರಲ್

Viral Video: ವಿಡಿಯೋದಲ್ಲಿ ಹಿಂಸೆಯ ದೃಶ್ಯ ಸ್ಪಷ್ಟವಾಗಿ ಸೆರೆಯಾಗಿದ್ದು, ಮರದ ಹಿಂಬಾಗದಲ್ಲಿ ಕಟ್ಟಿ ಹಾಕಿದ ಆನೆಯ ಆಚೀಚೆಗೆ ನಿಂತ ಮಾವುತರು ದೊಣ್ಣೆಯಿಂದ ಮುಂಗಾಲುಗಳಿಗೆ ಬಡಿದಿದ್ದಾರೆ. ಹೊಡೆತವನ್ನು ತಾಳಲಾರದೇ ಆನೆ ನೋವಿನಿಂದ ಘೀಳಿಡುವ ದೃಶ್ಯ ಮನಕಲಕುವಂತಿದೆ.

Caught on Camera: ದೇವಸ್ಥಾನದ ಆನೆಗೆ ಮನಬಂದಂತೆ ಥಳಿಸಿದ ಮಾವುತರು, ಮನಕಲಕುವ ವಿಡಿಯೋ ವೈರಲ್
ಆನೆಗೆ ಥಳಿಸುತ್ತಿರುವ ಮಾವುತರು
Skanda
| Edited By: |

Updated on:Feb 22, 2021 | 1:07 PM

Share

ಚೆನ್ನೈ: ತಮಿಳುನಾಡಿನ ಕೊಯಮತ್ತೂರು ಪ್ರದೇಶದ ಆನೆ ಶಿಬಿರದಲ್ಲಿ ಇಬ್ಬರು ಮಾವುತರು ಆನೆಯೊಂದಕ್ಕೆ ಮನಸೋ ಇಚ್ಛೆ ಥಳಿಸಿ ಹಿಂಸೆ ನೀಡಿದ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆನೆ ತಮ್ಮ ಅಣತಿಯಂತೆ ವರ್ತಿಸುತ್ತಿಲ್ಲ ಎಂಬ ಕಾರಣಕ್ಕೆ ಕುಪಿತಗೊಂಡ ಮಾವುತರು ಆನೆಯ ಮೇಲೆ ತಮ್ಮ ಸಿಟ್ಟು ತೋರಿಸಿದ್ದು, ಬೇಕಾಬಿಟ್ಟಿ ಹೊಡೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದ್ದಂತೆಯೇ ಅನೇಕರು ಮಾವುತರ ಕ್ರೌರ್ಯವನ್ನು ತೀವ್ರವಾಗಿ ಖಂಡಿಸಿದ್ದು, ಸದ್ಯ ಅವರಿಬ್ಬರನ್ನೂ ಕೆಲಸದಿಂದ ವಜಾಗೊಳಿಸಲಾಗಿದೆ.

ವಿಡಿಯೋದಲ್ಲಿ ಹಿಂಸೆಯ ದೃಶ್ಯ ಸ್ಪಷ್ಟವಾಗಿ ಸೆರೆಯಾಗಿದ್ದು, ಮರದ ಹಿಂಬಾಗದಲ್ಲಿ ಕಟ್ಟಿ ಹಾಕಿದ ಆನೆಯ ಆಚೀಚೆಗೆ ನಿಂತ ಮಾವುತರು ದೊಣ್ಣೆಯಿಂದ ಮುಂಗಾಲುಗಳಿಗೆ ಬಡಿದಿದ್ದಾರೆ. ಹೊಡೆತವನ್ನು ತಾಳಲಾರದೇ ಆನೆ ನೋವಿನಿಂದ ಘೀಳಿಡುವ ದೃಶ್ಯ ಮನಕಲಕುವಂತಿದ್ದು, ದೈತ್ಯ ಪ್ರಾಣಿಯನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಬೇಕೆಂಬ ಕಾರಣಕ್ಕೆ ಮನುಷ್ಯ ಮಿತಿಮೀರಿದಂತೆ ವರ್ತಿಸುವುದು ಬೇಸರ ಮೂಡಿಸುತ್ತದೆ.

ಪ್ರತಿವರ್ಷವೂ ಇಲ್ಲಿ ಆನೆ ಶಿಬಿರವನ್ನು ಆಯೋಜಿಸಲಾಗುತ್ತಿದ್ದು, ಈ ಬಾರಿಯ ಶಿಬಿರದಕ್ಕೆ 28 ಆನೆಗಳನ್ನು ತೆಗೆದುಕೊಳ್ಳಲಾಗಿದೆ. ಶ್ರೀವಿಲ್ಲಿಪುತ್ತೂರ್ ದೇಗುಲದ ಆನೆ ಮಾವುತರ ಮಾತನ್ನು ಸರಿಯಾಗಿ ಕೇಳುತ್ತಿಲ್ಲ ಎಂಬ ಕಾರಣಕ್ಕೆ ತರಬೇತಿ ನೀಡಲು ಇಲ್ಲಿಗೆ ತಂದುಬಿಡಲಾಗಿತ್ತು. ಆದರೆ, ತರಬೇತಿಯ ನೆಪದಲ್ಲಿ ಅತಿ ಕ್ರೂರವಾಗಿ ನಡೆದುಕೊಂಡಿರುವುದು ಎಲ್ಲರನ್ನೂ ಬೆಚ್ಚಿಬೀಳಿಸಿದೆ.

ಈ ವಿಡಿಯೋ ವೈರಲ್​ ಆದ ತಕ್ಷಣ ಸಾಕಷ್ಟು ಜನರು ಹಾಗೂ ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಾಣಿಗಳನ್ನು ಈ ತೆರನಾಗಿ ಹಿಂಸಿಸುವ ಘಟನೆ ವರ್ಷಂಪ್ರತಿ ಮರುಕಳಿಸುತ್ತಲೇ ಇದ್ದು, ಇದಕ್ಕೊಂದು ಕಡಿವಾಣ ಹಾಕಬೇಕೆಂದು ಆಗ್ರಹಿಸಿದ್ದಾರೆ. ಜನರ ಆಕ್ರೋಶದ ನಂತರ ಮಾವುತ ವಿನಿಲ್ ಕುಮಾರ್ ಹಾಗೂ ಆತನ ಸಹಾಯಕ ಶಿವಪ್ರಸಾದ್ ಇಬ್ಬರನ್ನೂ ವಜಾಗೊಳಿಸಿ ವನ್ಯಜೀವಿ ರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕೆಲದಿನಗಳ ಹಿಂದೆಯಷ್ಟೇ ತಮಿಳುನಾಡಿನಲ್ಲಿ ಆನೆಯನ್ನು ಹೆದರಿಸಲು ರೆಸಾರ್ಟ್​ ಮಾಲೀಕ ಬೆಂಕಿ ಹಚ್ಚಿ ಅದರ ಮೇಲೆ ಎಸೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಆನೆ ನೋವು ತಾಳಲಾರದೇ ಸಾವನಪ್ಪಿದ ಘಟನೆ ಎಲ್ಲರ ಮನಕಲುಕಿತ್ತು. ಇದೀಗ ಆ ನೆನಪು ಮಾಸುವ ಮುನ್ನವೇ ಈ ಘಟನೆ ನಡೆದಿದೆ.

ಇದನ್ನೂ ಓದಿ: ಹಾಸನ ಕಾಡಾನೆ ದಾಳಿ: ಚಿಕಿತ್ಸೆ ಫಲಿಸದೆ ಕಾರ್ಮಿಕ ಬಲಿ

ಕಾಫಿ ತೋಟದ ರಸ್ತೆಯಲ್ಲಿ ಧುತ್ತನೆ ಎದುರಾದ ಕಾಡಾನೆ; ಬೈಕ್ ಸವಾರ ಬಚಾವ್!

Published On - 1:07 pm, Mon, 22 February 21

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?