AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈ ಊಟವನ್ನು ಪ್ರಾಣಿಗಳೂ ತಿನ್ನೋದಿಲ್ಲ; ಪೊಲೀಸ್ ಮೆಸ್​ ಊಟವನ್ನು ಹಿಡಿದು ಅಳುತ್ತಾ ನಿಂತ ಕಾನ್​ಸ್ಟೆಬಲ್

ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಪೊಲೀಸ್ ಕಾನ್​ಸ್ಟೆಬಲ್ ಮೆಸ್‌ನಲ್ಲಿ ನೀಡಲಾದ ಆಹಾರದ ಗುಣಮಟ್ಟದ ಬಗ್ಗೆ ರಸ್ತೆಯ ಮೇಲೆ ನಿಂತು ಅಳುತ್ತಾ ಹೇಳುತ್ತಿರುವುದು ವಿಡಿಯೋದಲ್ಲಿ ರೆಕಾರ್ಡ್ ಆಗಿದೆ.

Viral Video: ಈ ಊಟವನ್ನು ಪ್ರಾಣಿಗಳೂ ತಿನ್ನೋದಿಲ್ಲ; ಪೊಲೀಸ್ ಮೆಸ್​ ಊಟವನ್ನು ಹಿಡಿದು ಅಳುತ್ತಾ ನಿಂತ ಕಾನ್​ಸ್ಟೆಬಲ್
ಪೊಲೀಸ್ ಮೆಸ್​ ಊಟವನ್ನು ಹಿಡಿದು ಅಳುತ್ತಾ ನಿಂತ ಕಾನ್​ಸ್ಟೆಬಲ್
TV9 Web
| Edited By: |

Updated on:Aug 11, 2022 | 12:18 PM

Share

ಫಿರೋಜಾಬಾದ್: ಈ ರೀತಿಯ ಊಟವನ್ನು ಪ್ರಾಣಿಗಳು ಕೂಡ ತಿನ್ನಲು ಸಾಧ್ಯವಿಲ್ಲ. ಈ ವಿಷಯದ ಬಗ್ಗೆ ಗಲಾಟೆ ಮಾಡಿದರೆ ನನ್ನನ್ನು ಕೆಲಸದಿಂದ ತೆಗೆದುಹಾಕುವುದಾಗಿ ಬೆದರಿಕೆ ಹಾಕಿದ್ದಾರೆ. ನಮಗೆ ಸರಿಯಾದ ಊಟ ಸಿಗದಿದ್ದರೆ ನಾವು ಹೇಗೆ ಕೆಲಸ ಮಾಡಲು ಸಾಧ್ಯ? ಎಂದು ಉತ್ತರ ಪ್ರದೇಶದ (Uttar Pradesh) ಪೊಲೀಸ್ ರಸ್ತೆಯಲ್ಲಿ ನಿಂತು ಜೋರಾಗಿ ಅಳುತ್ತಾ, ತನಗೆ ನೀಡಲಾದ ಊಟವನ್ನು ಎಲ್ಲರಿಗೂ ತೋರಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ. ಪೊಲೀಸ್ ಮೆಸ್‌ನಲ್ಲಿ ನೀಡಲಾದ ಆಹಾರದ ಗುಣಮಟ್ಟದ ಬಗ್ಗೆ ರಸ್ತೆಯ ಮೇಲೆ ನಿಂತು ಪೊಲೀಸ್ ಒಬ್ಬರು ಅಳುತ್ತಾ ಹೇಳುತ್ತಿರುವುದು ವಿಡಿಯೋದಲ್ಲಿ ರೆಕಾರ್ಡ್ ಆಗಿದೆ.

ಇದನ್ನೂ ಓದಿ
Image
Viral Video: ಬಾವಿಯಲ್ಲಿ ಬಿದ್ದ ಹಾವನ್ನು ರಕ್ಷಿಸಿದ ಈ ಮಹಿಳೆ
Image
Viral Video: ನೈಟ್ ಕ್ಲಬ್​ಗೆ ಬಂದಿದ್ದ ಮಹಿಳೆಯ ಮೈ ಮುಟ್ಟಿದ ಬೌನ್ಸರ್​​ನ ಪ್ರಶ್ನಿಸಿದ್ದಕ್ಕೆ ಹಿಗ್ಗಾಮುಗ್ಗ ಥಳಿತ; ವಿಡಿಯೋ ವೈರಲ್
Image
ಬಿಹಾರದ ಮಧುಬನಿಯ ವಿಶೇಷ ಮಾರುಕಟ್ಟೆಯಲ್ಲಿ ವರನೂ ಲಭ್ಯ, ಮದುವೆಗೆ ಗಂಡು ಹುಡುಕುವುದು ಇಲ್ಲಿ ಸುಲಭ!

ಪೊಲೀಸ್ ಕಾನ್‌ಸ್ಟೇಬಲ್ ಮನೋಜ್ ಕುಮಾರ್ ತಮಗೆ ಪೊಲೀಸ್ ಮೆಸ್​​ನಲ್ಲಿ ಪ್ರತಿದಿನ ನೀಡಲಾಗುವ ರೊಟ್ಟಿ, ದಾಲ್ ಮತ್ತು ಅನ್ನದ ತಟ್ಟೆಯನ್ನು ಕೈಯಲ್ಲಿ ಹಿಡಿದು ರಸ್ತೆಯಲ್ಲಿ ಅಳುತ್ತಾ ನಿಂತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರನ್ನು ಮತ್ತೆ ಪೊಲೀಸ್ ಠಾಣೆಯೊಳಗೆ ಕರೆದೊಯ್ಯುವ ಪ್ರಯತ್ನ ಮಾಡಿ, ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: Viral Video: ಶಾಸಕರೆದುರೇ ರಸ್ತೆ ಗುಂಡಿಯಲ್ಲಿ ಕುಳಿತು ಯೋಗ, ಸ್ನಾನ ಮಾಡಿದ ವ್ಯಕ್ತಿಯ ವಿಡಿಯೋ ವೈರಲ್

ಅಷ್ಟರಲ್ಲಿ ರಸ್ತೆಯಲ್ಲಿ ಹೋಗುತ್ತಿರುವವರೆಲ್ಲ ಮನೋಜ್ ಕುಮಾರ್ ಕೈಯಲ್ಲಿದ್ದ ಆಹಾರದ ತಟ್ಟೆಯನ್ನು ನೋಡುತ್ತಾ ಅಲ್ಲೇ ನಿಂತಿದ್ದಾರೆ. ನಮಗೆ ತೀರಾ ಕಳಪೆ ಗುಣಮಟ್ಟದ ಊಟ ಕೊಡಲಾಗುತ್ತಿದೆ. ಈ ಬಗ್ಗೆ ನಮ್ಮ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮನೋಜ್ ಹೇಳಿದ್ದಾರೆ. ಒಳ್ಳೆಯ ಊಟ ಕೊಡಿ ಎಂದಿದ್ದಕ್ಕೆ ನನ್ನನ್ನು ಕೆಲಸದಿಂದ ವಜಾ ಮಾಡುವುದಾಗಿ ಬೆದರಿಕೆ ಹಾಕಲಾಗುತ್ತಿದೆ. ಪೊಲೀಸ್ ಅಧಿಕಾರಿಗಳಿಗೆ ಪೌಷ್ಠಿಕ ಆಹಾರ ನೀಡಲು ರಾಜ್ಯ ಸರ್ಕಾರ ಭತ್ಯೆ ನೀಡುವುದಾಗಿ ಮುಖ್ಯಮಂತ್ರಿಗಳು ಈ ಹಿಂದೆಯೇ ಘೋಷಿಸಿದ್ದರು. ಆದರೆ, ಸುದೀರ್ಘ ಅವಧಿಯ ಕರ್ತವ್ಯ ನಿರ್ವಹಿಸಿದರೂ ನಮಗೆ ಸಿಗುವ ಊಟ ಈ ರೀತಿಯದ್ದು. ಇದನ್ನು ಪ್ರಾಣಿಗಳು ಕೂಡ ತಿನ್ನುವುದಿಲ್ಲ ಎಂದು ಮನೋಜ್ ಕುಮಾರ್ ಆರೋಪಿಸಿದ್ದಾರೆ.

ನಮಗೆ ಸರಿಯಾದ ಆಹಾರ ಸಿಗದಿದ್ದರೆ ಪೊಲೀಸರು ಹೇಗೆ ಕೆಲಸ ಮಾಡಲು ಸಾಧ್ಯ? ಎಂದು ಮನೋಜ್ ಕುಮಾರ್ ಪ್ರಶ್ನಿಸಿದ್ದಾರೆ. ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ಫಿರೋಜಾಬಾದ್ ಪೊಲೀಸರು, ಕಾನ್​ಸ್ಟೆಬಲ್ ಮನೋಜ್ ಕುಮಾರ್ ಅವರಿಗೆ ಶಿಸ್ತಿಲ್ಲ. ಈಗಾಗಲೇ ಅವರು ಶಿಸ್ತಿನ ಕೊರತೆಯಿಂದ ಈ ಹಿಂದೆ 15 ಬಾರಿ ಶಿಕ್ಷೆಗೆ ಒಳಗಾಗಿದ್ದಾರೆ ಎಂದು ಹೇಳಿದ್ದಾರೆ. ಈ ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:13 pm, Thu, 11 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ