AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೇವಸ್ಥಾನದಲ್ಲಿ ‘ಮುನ್ನಿ ಬದ್ನಾಂ’ ಹಾಡಿಗೆ ರೀಲ್ಸ್ ಮಾಡಿದ ಯುವತಿಯ ಮೇಲೆ ಎಫ್‌ಐಆರ್

ರಾಜ್ಯದ ಛತ್ತರ್‌ಪುರ ಜಿಲ್ಲೆಯ ದೇವಸ್ಥಾನವೊಂದರ ಆವರಣದಲ್ಲಿ ನೃತ್ಯದ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಯುವತಿಯ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗುವುದು ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ಮಂಗಳವಾರ ಹೇಳಿದ್ದಾರೆ.

Viral Video: ದೇವಸ್ಥಾನದಲ್ಲಿ 'ಮುನ್ನಿ ಬದ್ನಾಂ' ಹಾಡಿಗೆ  ರೀಲ್ಸ್  ಮಾಡಿದ ಯುವತಿಯ ಮೇಲೆ ಎಫ್‌ಐಆರ್
TV9 Web
| Edited By: |

Updated on:Oct 04, 2022 | 4:49 PM

Share

ಮಧ್ಯಪ್ರದೇಶ: ರಾಜ್ಯದ ಛತ್ತರ್‌ಪುರ ಜಿಲ್ಲೆಯ ದೇವಸ್ಥಾನವೊಂದರ ಆವರಣದಲ್ಲಿ ನೃತ್ಯದ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಯುವತಿಯ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗುವುದು ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ಮಂಗಳವಾರ ಹೇಳಿದ್ದಾರೆ.

ಅಕ್ಟೋಬರ್ 1 ರಂದು ಇನ್ಸ್ಟಾಗ್ರಾಮ್ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ ಯುವತಿ ನೇಹಾ, ಕೆಲವು ಬಜರಂಗದಳ ಸದಸ್ಯರು ಆಕ್ಷೇಪಣೆಯನ್ನು ವ್ಯಕ್ತಪಡಿಸಿದ್ದಾರೆ. ನಂತರ ಅದನ್ನು ಆಕೆ ಅಳಿಸಿ ಕ್ಷಮೆಯಾಚಿಸಿದ್ದಾರೆ.

ಬಾಲಿವುಡ್‌ನ ಹಿಟ್ ಹಾಡು “ಮುನ್ನಿ ಬದ್ನಾಮ್ ಹುಯಿ” ಟ್ಯೂನ್‌ಗೆ ದೇವಸ್ಥಾನದ ಮೆಟ್ಟಿಲುಗಳ ಮೇಲೆ ರೀಲ್ ಚಿತ್ರೀಕರಿಸಲಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಮಹಿಳೆಗೆ ನಾಲ್ಕು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಇದ್ದಾರೆ.

ನೇಹಾ ಡ್ರೆಸ್ ಮಾಡಿಕೊಂಡ ರೀತಿ ಮತ್ತು ವಿಡಿಯೋ ಚಿತ್ರೀಕರಣ ಆಕ್ಷೇಪಾರ್ಹವಾಗಿತ್ತು. ನಾನು ಈ ಹಿಂದೆ ಇಂತಹ ಘಟನೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದೆ ಮತ್ತು ಅಂತಹ ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸಲಾಗುವುದು ಎಂದು ಹೇಳಿದರು. ಎಚ್ಚರಿಕೆಯ ಹೊರತಾಗಿಯೂ ಅವರು ಇದನ್ನು ಮಾಡಿದ್ದಾರೆ ಎಂದು ಮಿಶ್ರಾ ಸುದ್ದಿಗಾರರಿಗೆ ತಿಳಿಸಿದರು.

ಅವಳ ವಿರುದ್ಧ ಎಫ್‌ಐಆರ್ ದಾಖಲಿಸಲು ನಾನು ಛತ್ತರ್‌ಪುರದ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದ್ದೇನೆ ಎಂದು ರಾಜ್ಯ ಸರ್ಕಾರದ ಗೃಹ ಸಚಿವರು ಹೇಳಿದರು. ಬಜರಂಗದಳದ ಕಾರ್ಯಕರ್ತರ ಆಕ್ಷೇಪದ ನಂತರ, ಮಹಿಳೆ ಡ್ಯಾನ್ಸ್ ರೀಲ್ ಅನ್ನು ಅಳಿಸಿ ಹೊಸ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಕ್ಕಾಗಿ ಕ್ಷಮೆ ಕೇಳುವೇ ಎಂದು ಹೇಳಿದ್ದಾರೆ.

Published On - 4:27 pm, Tue, 4 October 22

Follow Us
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು