Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊಲ್ಕತ್ತಾದಲ್ಲಿ ಡೋಲು ಬಾರಿಸಿ ದುರ್ಗಾ ಪೂಜೆಗೆ ಚಾಲನೆ ನೀಡಿದ ಸಿಎಂ ಮಮತಾ ಬ್ಯಾನರ್ಜಿ; ವಿಡಿಯೋ ವೈರಲ್

ಸಿಎಂ ಮಮತಾ ಬ್ಯಾನರ್ಜಿ ಡೋಲು ಬಾರಿಸಿ ನವರಾತ್ರಿ ಉತ್ಸವದಲ್ಲಿ ಪಾಲ್ಗೊಂಡಿದ್ದು, ಅವರ ಉತ್ಸಾಹ ಕಂಡು ನೆಟ್ಟಿಗರು ಅಚ್ಚರಿಗೊಂಡಿದ್ದಾರೆ.

Viral Video: ಕೊಲ್ಕತ್ತಾದಲ್ಲಿ ಡೋಲು ಬಾರಿಸಿ ದುರ್ಗಾ ಪೂಜೆಗೆ ಚಾಲನೆ ನೀಡಿದ ಸಿಎಂ ಮಮತಾ ಬ್ಯಾನರ್ಜಿ; ವಿಡಿಯೋ ವೈರಲ್
ಡೋಲು ಬಾರಿಸಿ ನವರಾತ್ರಿ ಉತ್ಸವದಲ್ಲಿ ಪಾಲ್ಗೊಂಡ ಸಿಎಂ ಮಮತಾ ಬ್ಯಾನರ್ಜಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 29, 2022 | 12:29 PM

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನವರಾತ್ರಿ ಹಬ್ಬವನ್ನು (Navaratri Festival) ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಕೊಲ್ಕತ್ತಾದ ದುರ್ಗಾ ಪೂಜೆ (Durga Puja) ದೇಶಾದ್ಯಂತ ಪ್ರಸಿದ್ಧಿ ಪಡೆದಿದೆ. ಈಗಾಗಲೇ ನವರಾತ್ರಿ ಉತ್ಸವ ಶುರುವಾಗಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಕೊಲ್ಕತ್ತಾದಲ್ಲಿ ದುರ್ಗಾ ಪೂಜೆ ಉತ್ಸವಕ್ಕೆ ಚಾಲನೆ ನೀಡಿದ್ದಾರೆ. ಸಂಭ್ರಮದಿಂದ ಡೋಲು ಬಾರಿಸಿ (ಪಶ್ಚಿಮ ಬಂಗಾಳದಲ್ಲಿ ಧಾಕ್ ಎನ್ನುತ್ತಾರೆ) ಉತ್ಸವದಲ್ಲಿ ಪಾಲ್ಗೊಂಡಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಸಿಎಂ ಮಮತಾ ಬ್ಯಾನರ್ಜಿ ಡೋಲು ಬಾರಿಸಿ, ನವರಾತ್ರಿ ಉತ್ಸವದಲ್ಲಿ ಪಾಲ್ಗೊಂಡಿದ್ದು, ಅವರ ಉತ್ಸಾಹ ಕಂಡು ನೆಟ್ಟಿಗರು ಅಚ್ಚರಿಗೊಂಡಿದ್ದಾರೆ. ಭವಾನಿಪೋರ್‌ನಲ್ಲಿ ಟಿಎಂಸಿ ಕೌನ್ಸಿಲರ್ ಆಶಿಮ್ ಬೋಸ್ ಆಯೋಜಿಸಿದ್ದ ದುರ್ಗಾ ಪೂಜೆಯನ್ನು ಉದ್ಘಾಟಿಸುವ ವೇಳೆ ಟಿಎಂಸಿ ಮುಖ್ಯಸ್ಥೆ ಹಾಗೂ ಸಿಎಂ ಮಮತಾ ಬ್ಯಾನರ್ಜಿ ಬುಧವಾರ ದಾಂಡಿಯಾದಲ್ಲೂ ಪಾಲ್ಗೊಂಡಿದ್ದಾರೆ. ಮಮತಾ ಬ್ಯಾನರ್ಜಿ ಅವರು ಅಲಿಪೋರ್‌ನಲ್ಲಿ ಸುರುಚಿ ಸಂಘದ ಪೂಜಾ ಪಂಡಲ್‌ನ ಉದ್ಘಾಟನೆಯಲ್ಲಿ ಸಾಂಪ್ರದಾಯಿಕವಾದ ಡೋಲಿನಂತಹ ವಾದ್ಯವಾದ ಧಾಕ್ ಅನ್ನು ಸಹ ನುಡಿಸಿದ್ದಾರೆ.

ಇದನ್ನೂ ಓದಿ: Mamata Banerjee: ನಾನು ಅವರ ಸೇವಕನಂತೆ ನನಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ, ಮಮತಾ ಬ್ಯಾನರ್ಜಿ ಆರೋಪ

ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ರಿಬ್ಬನ್ ಕತ್ತರಿಸುವುದನ್ನು ಮತ್ತು ತಮ್ಮ ಭುಜದ ಮೇಲೆ ಧಾಕ್ ಅನ್ನು ತೂಗುಹಾಕಿಕೊಂಡು ಅದನ್ನು ನುಡಿಸುವುದನ್ನು ನೋಡಬಹುದು. ಮಮತಾ ಬ್ಯಾನರ್ಜಿ ನೆಲದ ಮೇಲೆ ಇಟ್ಟುಕೊಂಡು ಧಾಕ್ ನುಡಿಸುತ್ತಿದ್ದಂತೆ, ಇತರೆ ಸಚಿವರು ಕೂಡ ಅವರಿಗೆ ಜೊತೆಯಾದರು.

ಧಾಕ್ ಅನ್ನು ಭುಜಕ್ಕೆ ತೂಗು ಹಾಕಿಕೊಂಡು, ಮಮತಾ ಬ್ಯಾನರ್ಜಿ ರಿಬ್ಬನ್ ಕಟ್ ಮಾಡಿ ಪೂಜಾ ಮಂಟಪವನ್ನು ಉದ್ಘಾಟಿಸಿದರು. ಆ ಭಾರವಾದ ವಾದ್ಯವನ್ನು ನುಡಿಸುತ್ತಾ ಮುಂದಕ್ಕೆ ನಡೆದರು. ನಂತರ ಅವರು ಧಾಕ್ ಅನ್ನು ನೆಲದ ಮೇಲೆ ಇರಿಸಿ ಅದನ್ನು ಬಾರಿಸುವುದನ್ನು ಮುಂದುವರೆಸಿದರು. ನವರಾತ್ರಿಯ ಆರನೇ ದಿನದಿಂದ ಪ್ರಾರಂಭವಾಗುವ ದುರ್ಗಾಪೂಜೆಯ ಹಬ್ಬವನ್ನು ದುರ್ಗೋತ್ಸವ ಎಂದೂ ಕರೆಯುತ್ತಾರೆ. ಇದು ಹಿಂದೂ ದೇವತೆ ದುರ್ಗಾ ಮಾತೆಯನ್ನು ಗೌರವಿಸುವ ಮತ್ತು ಮಹಿಷಾಸುರನ ಮೇಲೆ ಆಕೆಯ ವಿಜಯವನ್ನು ಸ್ಮರಿಸುವ ವಾರ್ಷಿಕ ಆಚರಣೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್