AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 5 ರೂ.ಗಾಗಿ ಹಣ್ಣಿನ ವ್ಯಾಪಾರಿಗೆ ಥಳಿಸಿದ ಯುವಕರು; ವಿಡಿಯೋ ವೈರಲ್

ಅಮಿತ್ ಎಂಬ ಯುವಕ ಅಜಯನ ಹಣ್ಣಿನ ಅಂಗಡಿಗೆ ಬಂದು ಸೇಬಿನ ಬೆಲೆಯನ್ನು ಕೇಳಿದರು. ಅಜಯ್ 1 ಕೆಜಿಗೆ 90 ರೂ. ಎಂದು ಹೇಳಿದರು. ಆದರೆ, ಅಮಿತ್ ಕೆಜಿಗೆ 85 ರೂ. ನೀಡುವುದಾಗಿ ಹೇಳಿದರು. ಇದೇ ವಿಷಯಕ್ಕೆ ಇಬ್ಬರ ನಡುವೆ ಜಗಳ ಶುರುವಾಯಿತು.

Viral Video: 5 ರೂ.ಗಾಗಿ ಹಣ್ಣಿನ ವ್ಯಾಪಾರಿಗೆ ಥಳಿಸಿದ ಯುವಕರು; ವಿಡಿಯೋ ವೈರಲ್
ಹಣ್ಣಿನ ವ್ಯಾಪಾರಿಗೆ ಥಳಿಸುತ್ತಿರುವ ಯುವಕರುImage Credit source: India.com
TV9 Web
| Edited By: |

Updated on: Jan 19, 2023 | 12:30 PM

Share

ನೊಯ್ಡಾ: ನೊಯ್ಡಾದಲ್ಲಿ (Noida) ಕೇವಲ 5 ರೂ. ಹಣಕ್ಕಾಗಿ ನಡೆದ ಗಲಾಟೆ ದೊಡ್ಡದಾಗಿ ಯುವಕರೆಲ್ಲ ಸೇರಿ ಹಣ್ಣಿನ ವ್ಯಾಪಾರಿಯ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಯುವಕರು ಹಣ್ಣಿನ ವ್ಯಾಪಾರಿಯನ್ನು ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ. ಜನವರಿ 16ರ ಸಂಜೆ ನಡೆದ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸೇಬು ಹಣ್ಣು ಖರೀದಿಸಲು ಬಂದ ಯುವಕರು ಸೇಬಿನ ಬೆಲೆಗೆ ಸಂಬಂಧಿಸಿದಂತೆ ಹಣ್ಣು ವ್ಯಾಪಾರಿಯ ಜೊತೆ ಜಗಳವಾಡಿದ್ದಾರೆ.

ಅಜಯ್ ಎಂಬಾತ ಹಣ್ಣು ಮಾರಾಟಗಾರನಾಗಿದ್ದು, ಹರೌಲಾ ಮಂಡಿಯಲ್ಲಿ ಅಂಗಡಿ ನಡೆಸುತ್ತಿದ್ದಾನೆ. ಸೋಮವಾರ ಅಮಿತ್ ಎಂಬ ಯುವಕ ಅವರ ಅಂಗಡಿಗೆ ಬಂದು ಸೇಬಿನ ಬೆಲೆಯನ್ನು ಕೇಳಿದರು. ಅಜಯ್ 1 ಕೆಜಿಗೆ 90 ರೂ. ಎಂದು ಹೇಳಿದರು. ಆದರೆ, ಅಮಿತ್ ಕೆಜಿಗೆ 85 ರೂ. ನೀಡುವುದಾಗಿ ಹೇಳಿದರು. ಬಳಿಕ ಇಬ್ಬರ ನಡುವೆ ಇದೇ ವಿಷಯಕ್ಕೆ ವಾಗ್ವಾದ ನಡೆದಿದೆ. 5 ರೂ. ಕಡಿಮೆ ಮಾಡಲು ಒಪ್ಪದ ಅಜಯ್ ಮೇಲೆ ಕೋಪಗೊಂಡ ಅಮಿತ್ ತನ್ನ ಸ್ನೇಹಿತನ ಜೊತೆ ಸೇರಿ ಅಜಯ್​ಗೆ ಥಳಿಸಿದ್ದಾನೆ.

ಇದನ್ನೂ ಓದಿ: ಹೆಂಡತಿಯನ್ನು ಕೊಲ್ಲಲು ಆಕೆಯ ಮನೆಗೆ ಟ್ರಕ್​ ನುಗ್ಗಿಸಿದ ಗಂಡ; ವೈರಲ್ ಆದ ವಿಡಿಯೋ

ಅಲ್ಲಿದ್ದ ಕೆಲವು ಹುಡುಗರು ಈ ಗಲಾಟೆಯನ್ನು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಮಧ್ಯಪ್ರವೇಶಿಸಲು ಬಂದ ವ್ಯಕ್ತಿಗೂ ಅಮಿತ್ ಬೆದರಿಕೆ ಹಾಕಿದ್ದಾನೆ. ಈ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪರಾಧಕ್ಕೆ ಸಂಬಂಧಿಸಿದಂತೆ ವ್ಯಕ್ತಿಗಳನ್ನು ಬಂಧಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?