AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 5 ರೂ.ಗಾಗಿ ಹಣ್ಣಿನ ವ್ಯಾಪಾರಿಗೆ ಥಳಿಸಿದ ಯುವಕರು; ವಿಡಿಯೋ ವೈರಲ್

ಅಮಿತ್ ಎಂಬ ಯುವಕ ಅಜಯನ ಹಣ್ಣಿನ ಅಂಗಡಿಗೆ ಬಂದು ಸೇಬಿನ ಬೆಲೆಯನ್ನು ಕೇಳಿದರು. ಅಜಯ್ 1 ಕೆಜಿಗೆ 90 ರೂ. ಎಂದು ಹೇಳಿದರು. ಆದರೆ, ಅಮಿತ್ ಕೆಜಿಗೆ 85 ರೂ. ನೀಡುವುದಾಗಿ ಹೇಳಿದರು. ಇದೇ ವಿಷಯಕ್ಕೆ ಇಬ್ಬರ ನಡುವೆ ಜಗಳ ಶುರುವಾಯಿತು.

Viral Video: 5 ರೂ.ಗಾಗಿ ಹಣ್ಣಿನ ವ್ಯಾಪಾರಿಗೆ ಥಳಿಸಿದ ಯುವಕರು; ವಿಡಿಯೋ ವೈರಲ್
ಹಣ್ಣಿನ ವ್ಯಾಪಾರಿಗೆ ಥಳಿಸುತ್ತಿರುವ ಯುವಕರುImage Credit source: India.com
TV9 Web
| Edited By: |

Updated on: Jan 19, 2023 | 12:30 PM

Share

ನೊಯ್ಡಾ: ನೊಯ್ಡಾದಲ್ಲಿ (Noida) ಕೇವಲ 5 ರೂ. ಹಣಕ್ಕಾಗಿ ನಡೆದ ಗಲಾಟೆ ದೊಡ್ಡದಾಗಿ ಯುವಕರೆಲ್ಲ ಸೇರಿ ಹಣ್ಣಿನ ವ್ಯಾಪಾರಿಯ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಯುವಕರು ಹಣ್ಣಿನ ವ್ಯಾಪಾರಿಯನ್ನು ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ. ಜನವರಿ 16ರ ಸಂಜೆ ನಡೆದ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸೇಬು ಹಣ್ಣು ಖರೀದಿಸಲು ಬಂದ ಯುವಕರು ಸೇಬಿನ ಬೆಲೆಗೆ ಸಂಬಂಧಿಸಿದಂತೆ ಹಣ್ಣು ವ್ಯಾಪಾರಿಯ ಜೊತೆ ಜಗಳವಾಡಿದ್ದಾರೆ.

ಅಜಯ್ ಎಂಬಾತ ಹಣ್ಣು ಮಾರಾಟಗಾರನಾಗಿದ್ದು, ಹರೌಲಾ ಮಂಡಿಯಲ್ಲಿ ಅಂಗಡಿ ನಡೆಸುತ್ತಿದ್ದಾನೆ. ಸೋಮವಾರ ಅಮಿತ್ ಎಂಬ ಯುವಕ ಅವರ ಅಂಗಡಿಗೆ ಬಂದು ಸೇಬಿನ ಬೆಲೆಯನ್ನು ಕೇಳಿದರು. ಅಜಯ್ 1 ಕೆಜಿಗೆ 90 ರೂ. ಎಂದು ಹೇಳಿದರು. ಆದರೆ, ಅಮಿತ್ ಕೆಜಿಗೆ 85 ರೂ. ನೀಡುವುದಾಗಿ ಹೇಳಿದರು. ಬಳಿಕ ಇಬ್ಬರ ನಡುವೆ ಇದೇ ವಿಷಯಕ್ಕೆ ವಾಗ್ವಾದ ನಡೆದಿದೆ. 5 ರೂ. ಕಡಿಮೆ ಮಾಡಲು ಒಪ್ಪದ ಅಜಯ್ ಮೇಲೆ ಕೋಪಗೊಂಡ ಅಮಿತ್ ತನ್ನ ಸ್ನೇಹಿತನ ಜೊತೆ ಸೇರಿ ಅಜಯ್​ಗೆ ಥಳಿಸಿದ್ದಾನೆ.

ಇದನ್ನೂ ಓದಿ: ಹೆಂಡತಿಯನ್ನು ಕೊಲ್ಲಲು ಆಕೆಯ ಮನೆಗೆ ಟ್ರಕ್​ ನುಗ್ಗಿಸಿದ ಗಂಡ; ವೈರಲ್ ಆದ ವಿಡಿಯೋ

ಅಲ್ಲಿದ್ದ ಕೆಲವು ಹುಡುಗರು ಈ ಗಲಾಟೆಯನ್ನು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಮಧ್ಯಪ್ರವೇಶಿಸಲು ಬಂದ ವ್ಯಕ್ತಿಗೂ ಅಮಿತ್ ಬೆದರಿಕೆ ಹಾಕಿದ್ದಾನೆ. ಈ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪರಾಧಕ್ಕೆ ಸಂಬಂಧಿಸಿದಂತೆ ವ್ಯಕ್ತಿಗಳನ್ನು ಬಂಧಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​