AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 5 ರೂ.ಗಾಗಿ ಹಣ್ಣಿನ ವ್ಯಾಪಾರಿಗೆ ಥಳಿಸಿದ ಯುವಕರು; ವಿಡಿಯೋ ವೈರಲ್

ಅಮಿತ್ ಎಂಬ ಯುವಕ ಅಜಯನ ಹಣ್ಣಿನ ಅಂಗಡಿಗೆ ಬಂದು ಸೇಬಿನ ಬೆಲೆಯನ್ನು ಕೇಳಿದರು. ಅಜಯ್ 1 ಕೆಜಿಗೆ 90 ರೂ. ಎಂದು ಹೇಳಿದರು. ಆದರೆ, ಅಮಿತ್ ಕೆಜಿಗೆ 85 ರೂ. ನೀಡುವುದಾಗಿ ಹೇಳಿದರು. ಇದೇ ವಿಷಯಕ್ಕೆ ಇಬ್ಬರ ನಡುವೆ ಜಗಳ ಶುರುವಾಯಿತು.

Viral Video: 5 ರೂ.ಗಾಗಿ ಹಣ್ಣಿನ ವ್ಯಾಪಾರಿಗೆ ಥಳಿಸಿದ ಯುವಕರು; ವಿಡಿಯೋ ವೈರಲ್
ಹಣ್ಣಿನ ವ್ಯಾಪಾರಿಗೆ ಥಳಿಸುತ್ತಿರುವ ಯುವಕರುImage Credit source: India.com
TV9 Web
| Edited By: |

Updated on: Jan 19, 2023 | 12:30 PM

Share

ನೊಯ್ಡಾ: ನೊಯ್ಡಾದಲ್ಲಿ (Noida) ಕೇವಲ 5 ರೂ. ಹಣಕ್ಕಾಗಿ ನಡೆದ ಗಲಾಟೆ ದೊಡ್ಡದಾಗಿ ಯುವಕರೆಲ್ಲ ಸೇರಿ ಹಣ್ಣಿನ ವ್ಯಾಪಾರಿಯ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಯುವಕರು ಹಣ್ಣಿನ ವ್ಯಾಪಾರಿಯನ್ನು ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ. ಜನವರಿ 16ರ ಸಂಜೆ ನಡೆದ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸೇಬು ಹಣ್ಣು ಖರೀದಿಸಲು ಬಂದ ಯುವಕರು ಸೇಬಿನ ಬೆಲೆಗೆ ಸಂಬಂಧಿಸಿದಂತೆ ಹಣ್ಣು ವ್ಯಾಪಾರಿಯ ಜೊತೆ ಜಗಳವಾಡಿದ್ದಾರೆ.

ಅಜಯ್ ಎಂಬಾತ ಹಣ್ಣು ಮಾರಾಟಗಾರನಾಗಿದ್ದು, ಹರೌಲಾ ಮಂಡಿಯಲ್ಲಿ ಅಂಗಡಿ ನಡೆಸುತ್ತಿದ್ದಾನೆ. ಸೋಮವಾರ ಅಮಿತ್ ಎಂಬ ಯುವಕ ಅವರ ಅಂಗಡಿಗೆ ಬಂದು ಸೇಬಿನ ಬೆಲೆಯನ್ನು ಕೇಳಿದರು. ಅಜಯ್ 1 ಕೆಜಿಗೆ 90 ರೂ. ಎಂದು ಹೇಳಿದರು. ಆದರೆ, ಅಮಿತ್ ಕೆಜಿಗೆ 85 ರೂ. ನೀಡುವುದಾಗಿ ಹೇಳಿದರು. ಬಳಿಕ ಇಬ್ಬರ ನಡುವೆ ಇದೇ ವಿಷಯಕ್ಕೆ ವಾಗ್ವಾದ ನಡೆದಿದೆ. 5 ರೂ. ಕಡಿಮೆ ಮಾಡಲು ಒಪ್ಪದ ಅಜಯ್ ಮೇಲೆ ಕೋಪಗೊಂಡ ಅಮಿತ್ ತನ್ನ ಸ್ನೇಹಿತನ ಜೊತೆ ಸೇರಿ ಅಜಯ್​ಗೆ ಥಳಿಸಿದ್ದಾನೆ.

ಇದನ್ನೂ ಓದಿ: ಹೆಂಡತಿಯನ್ನು ಕೊಲ್ಲಲು ಆಕೆಯ ಮನೆಗೆ ಟ್ರಕ್​ ನುಗ್ಗಿಸಿದ ಗಂಡ; ವೈರಲ್ ಆದ ವಿಡಿಯೋ

ಅಲ್ಲಿದ್ದ ಕೆಲವು ಹುಡುಗರು ಈ ಗಲಾಟೆಯನ್ನು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಮಧ್ಯಪ್ರವೇಶಿಸಲು ಬಂದ ವ್ಯಕ್ತಿಗೂ ಅಮಿತ್ ಬೆದರಿಕೆ ಹಾಕಿದ್ದಾನೆ. ಈ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪರಾಧಕ್ಕೆ ಸಂಬಂಧಿಸಿದಂತೆ ವ್ಯಕ್ತಿಗಳನ್ನು ಬಂಧಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ