AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಕಾನ್​ಸ್ಟೆಬಲ್​ ಮೇಲೆ ಹಲ್ಲೆ ನಡೆಸಿ, ಕಾರಿನ ಬಾನೆಟ್ ಮೇಲೆ ಎಳೆದೊಯ್ದ ಗುಜರಾತ್​ನ ಆಪ್ ನಾಯಕ; ವಿಡಿಯೋ ವೈರಲ್

ಕೆಲವು ಬಿಸಿಬಿಸಿ ಚರ್ಚೆ ನಡೆದ ಬಳಿಕ ಆಪ್ ನಾಯಕ ಯುವರಾಜ್ ಸಿನ್ಹ ಜಡೇಜಾ ಕೆಲವು ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಹೆಚ್ಚಿನ ಪೊಲೀಸರು ಸ್ಥಳಕ್ಕೆ ಬಂದಿದ್ದರಿಂದ ಅವರು ಕಾರಿನ ಕಡೆಗೆ ಓಡಿಹೋಗಿ, ಬಾನೆಟ್ ಮೇಲೆ ಎಳೆದೊಯ್ದರು.

ಪೊಲೀಸ್ ಕಾನ್​ಸ್ಟೆಬಲ್​ ಮೇಲೆ ಹಲ್ಲೆ ನಡೆಸಿ, ಕಾರಿನ ಬಾನೆಟ್ ಮೇಲೆ ಎಳೆದೊಯ್ದ ಗುಜರಾತ್​ನ ಆಪ್ ನಾಯಕ; ವಿಡಿಯೋ ವೈರಲ್
ಕಾರಿನ ಬಾನೆಟ್ ಮೇಲೆ ಬಿದ್ದ ಕಾನ್​ಸ್ಟೆಬಲ್
TV9 Web
| Edited By: |

Updated on: Apr 09, 2022 | 6:40 PM

Share

ನವದೆಹಲಿ: ಗುಜರಾತ್ ರಾಜ್ಯದ ಆಪ್ (ಆಮ್ ಆದ್ಮಿ ಪಕ್ಷ) ಯುವ ಘಟಕದ ನಾಯಕ ಯುವರಾಜ್‌ ಸಿನ್ಹ ಜಡೇಜಾ ಅವರು ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ನಡೆಸಿ, ಕಾನ್​ಸ್ಟೆಬಲ್‌ನನ್ನು ಕಾರಿನ ಬಾನೆಟ್‌ ಮೇಲೆ ಎಳೆದೊಯ್ದ ಆಘಾತಕಾರಿ ಘಟನೆ (Shocking News) ನಡೆದಿದೆ. ಈ ಹಿನ್ನೆಲೆಯಲ್ಲಿ ಯುವರಾಜ್‌ ಸಿನ್ಹ ಜಡೇಜಾ ಅವರನ್ನು ಗಾಂಧಿನಗರದ ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ. ಹೀಗಾಗಿ, ಐಪಿಸಿಯ ಸೆಕ್ಷನ್ 307ರ ಅಡಿಯಲ್ಲಿ “ಕೊಲೆ ಯತ್ನ” ಪ್ರಕರಣವನ್ನು ದಾಖಲಿಸಲಾಗಿದೆ.

ಕೆಲವು ಬಿಸಿಬಿಸಿ ಚರ್ಚೆ ನಡೆದ ಬಳಿಕ ಆಪ್ ನಾಯಕ ಯುವರಾಜ್ ಸಿನ್ಹ ಜಡೇಜಾ ಕೆಲವು ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಹೆಚ್ಚಿನ ಪೊಲೀಸರು ಸ್ಥಳದಲ್ಲಿ ಜಮಾಯಿಸಿದ ನಂತರ ಅವರು ಕಾರಿನ ಕಡೆಗೆ ಓಡಿಹೋದರು. ನಂತರ ಅವರು ತಮ್ಮ ಕಾರಿನಲ್ಲಿ ಕುಳಿತು ಆ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದರು. ಕಾನ್​ಸ್ಟೆಬಲ್ ಅವರಿಗೆ ಸೂಚಿಸಿದಾಗ ಅವರು ತಮ್ಮ ಕಾರನ್ನು ನಿಲ್ಲಿಸಲಿಲ್ಲ. ಬದಲಾಗಿ ಕಾನ್​​ಸ್ಟೆಬಲ್ ಅನ್ನು ಕಾರಿನ ಬಾನೆಟ್ ಮೇಲೆ ಎಳೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ವೇಗವಾಗಿ ಬಂದ ಕಾರಿನಿಂದ ತನ್ನನ್ನು ರಕ್ಷಿಸಿಕೊಳ್ಳಲು ಕಾನ್‌ಸ್ಟೆಬಲ್ ಲಕ್ಷ್ಮಣ ವಾಸವ ಬಾನೆಟ್ ಮೇಲೆ ಹಾರಿದ್ದಾನೆ. ಆಗ ಸ್ವಲ್ಪ ದೂರವನ್ನು ಕ್ರಮಿಸಿದ ನಂತರ ಜಡೇಜಾ ತನ್ನ ಕಾರನ್ನು ನಿಲ್ಲಿಸಿದ. ಅಲ್ಲೇ ಬಾನೆಟ್ ಮೇಲಿಂದ ಕಾನ್​ಸ್ಟೆಬಲ್​ನನ್ನು ಬೀಳಿಸಿ ಮುಂದೆ ಸಾಗಿದ್ದಾರೆ. “ಈ ಇಡೀ ಘಟನೆಯು ಜಡೇಜಾ ಅವರ ಕಾರಿನ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ ದಾಖಲಾಗಿದೆ. ಈ ಘಟನೆಯಲ್ಲಿ ಕಾನ್‌ಸ್ಟೆಬಲ್ ಸಾವನ್ನಪ್ಪಿರಬಹುದು. ನಾವು ಕ್ಯಾಮೆರಾ ಮತ್ತು ಜಡೇಜಾ ಅವರ ಮೊಬೈಲ್ ಫೋನ್‌ಗಳನ್ನು ಫೋರೆನ್ಸಿಕ್ ವಿಶ್ಲೇಷಣೆಗಾಗಿ ಕಳುಹಿಸಿದ್ದೇವೆ” ಎಂದು ಇನ್ಸ್‌ಪೆಕ್ಟರ್ ಜನರಲ್ ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಪೊಲೀಸರು ಆತನನ್ನು ಕಸ್ಟಡಿಗೆ ಕೋರದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದ ಅಡಿಯಲ್ಲಿ ಜೈಲಿಗೆ ಕಳುಹಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಎಂ.ಕೆ ರಾಣಾ ಹೇಳಿದ್ದಾರೆ.

ಇದನ್ನೂ ಓದಿ: Murder: ತಾನು ಕೊಡಿಸಿದ್ದ ಮೊಬೈಲ್ ವಾಪಾಸ್​ ಕೊಡದ ಪ್ರೇಯಸಿಯ ಕತ್ತು ಸೀಳಿ ಕೊಂದ ಪ್ರೇಮಿ!

Murder: ಹುಡುಗರ ಜೊತೆ ಸುತ್ತಾಡಿದ್ದಕ್ಕೆ ಬೈದ ಅಮ್ಮನನ್ನೇ ಕೊಂದ 17 ವರ್ಷದ ಮಗಳು!

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್