Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೈದಾನಕ್ಕಿಳಿದು ವಾಲಿಬಾಲ್ ಆಡಿದ ಪಂಜಾಬ್ ಸಿಎಂ ಭಗವಂತ್ ಮಾನ್; ವೈರಲ್ ವಿಡಿಯೋ ಇಲ್ಲಿದೆ

ಕ್ರೀಡಾಕೂಟವನ್ನು ಉದ್ಘಾಟಿಸಿದ ನಂತರ ಪಂಜಾಬ್ ಸಿಎಂ ಭಗವಂತ್ ಮಾನ್ ಹಳದಿ ಪಟ್ಟೆಗಳಿರುವ ಕಪ್ಪು ಟ್ರ್ಯಾಕ್‌ಸೂಟ್‌ ಹಾಕಿಕೊಂಡು, ತಲೆಗೆ ಕ್ಯಾಪ್ ತೊಟ್ಟುಕೊಂಡು ವಾಲಿಬಾಲ್ ಆಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

Viral Video: ಮೈದಾನಕ್ಕಿಳಿದು ವಾಲಿಬಾಲ್ ಆಡಿದ ಪಂಜಾಬ್ ಸಿಎಂ ಭಗವಂತ್ ಮಾನ್; ವೈರಲ್ ವಿಡಿಯೋ ಇಲ್ಲಿದೆ
ವಾಲಿಬಾಲ್ ಆಡಿದ ಪಂಜಾಬ್ ಸಿಎಂ ಭಗವಂತ್ ಮಾನ್Image Credit source: NDTV
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 30, 2022 | 11:24 AM

ಪಂಜಾಬ್: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (CM Bhagwant Mann) ಮೈದಾನಕ್ಕಿಳಿದು ಆಟಗಾರರ ಗುಂಪಿನೊಂದಿಗೆ ವಾಲಿಬಾಲ್ ಪಂದ್ಯವನ್ನು (volleyball match) ಆಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸೋಮವಾರ ಜಲಂಧರ್‌ನ ಗುರು ಗೋವಿಂದ್ ಸಿಂಗ್ ಸ್ಟೇಡಿಯಂನಲ್ಲಿ ‘ಖೇದನ್ ವತನ್ ಪಂಜಾಬ್ ಡಯಾನ್’ ಕ್ರೀಡಾಕೂಟವನ್ನು ಉದ್ಘಾಟಿಸಿದ ನಂತರ ಭಗವಂತ್ ಮಾನ್ ಹಳದಿ ಪಟ್ಟೆಗಳಿರುವ ಕಪ್ಪು ಟ್ರ್ಯಾಕ್‌ಸೂಟ್‌ ಹಾಕಿಕೊಂಡು, ತಲೆಗೆ ಕ್ಯಾಪ್ ತೊಟ್ಟುಕೊಂಡು ವಾಲಿಬಾಲ್ ಆಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಖೇತನ್ ವತನ್ ಪಂಜಾಬ್ ಡಯಾನ್ 2 ತಿಂಗಳ ಅವಧಿಯ ಕ್ರೀಡಾಕೂಟವಾಗಿದ್ದು, ಇದರಲ್ಲಿ ವಿವಿಧ ವಯೋಮಾನದ 4 ಲಕ್ಷಕ್ಕೂ ಹೆಚ್ಚು ಆಟಗಾರರು 28 ಕ್ರೀಡಾ ವಿಭಾಗಗಳಲ್ಲಿ ಬ್ಲಾಕ್‌ನಿಂದ ರಾಜ್ಯ ಮಟ್ಟದವರೆಗಿನ ಸ್ಪರ್ಧೆಗಳಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ರಾಜ್ಯ ಮಟ್ಟದ ವಿಜೇತರಿಗೆ 6 ಕೋಟಿ ರೂ. ನಗದು ಬಹುಮಾನ ನೀಡಲಾಗುವುದು.

ಇದನ್ನೂ ಓದಿ: Bhagwant Mann: ಪಂಜಾಬ್ ಸಿಎಂ ಭಗವಂತ್ ಮಾನ್ ನಿವಾಸಕ್ಕೆ 10 ಸಾವಿರ ರೂ. ದಂಡ

2 ತಿಂಗಳ ಕಾಲ ನಡೆಯುವ ಕ್ರೀಡಾಕೂಟವನ್ನು ಉದ್ಘಾಟಿಸಿದ ನಂತರ, ಸಿಎಂ ಭಗವಂತ್ ಮಾನ್ ಗುರು ಗೋವಿಂದ್ ಸಿಂಗ್ ಕ್ರೀಡಾಂಗಣದಲ್ಲಿ ಸುಮಾರು 10ರಿಂದ 15 ನಿಮಿಷಗಳ ಕಾಲ ವಾಲಿಬಾಲ್ ಆಟವನ್ನು ಆಡಿದರು. ಅಲ್ಲಿದ್ದ ಆಟಗಾರರು ಮೈದಾನದಲ್ಲಿ ವಾಲಿಬಾಲ್ ಆಡಿದ ಭಗವಂತ್ ಮಾನ್ ಅವರನ್ನು ನೋಡಿ ಆಶ್ಚರ್ಯಚಕಿತರಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್