AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡೇಟು ಬಿದ್ದರೂ ಉಗ್ರರ ಜೊತೆ ಕಾದಾಡಿದ ಭಾರತೀಯ ಸೇನೆಯ ಶ್ವಾನ; ವೈರಲ್ ವಿಡಿಯೋ ಇಲ್ಲಿದೆ

ತನ್ನ ಮೈಮೇಲೆ ಗುಂಡಿನ ದಾಳಿ ನಡೆಸಿದ್ದರೂ ಹೆದರದ ಆ ನಾಯಿ ತನ್ನ ಕಾರ್ಯವನ್ನು ಮುಂದುವರೆಸಿತು. ಅಷ್ಟೇ ಅಲ್ಲದೆ ಇಬ್ಬರು ಭಯೋತ್ಪಾದಕರ ಹತ್ಯೆಗೂ ಕಾರಣವಾಯಿತು.

ಗುಂಡೇಟು ಬಿದ್ದರೂ ಉಗ್ರರ ಜೊತೆ ಕಾದಾಡಿದ ಭಾರತೀಯ ಸೇನೆಯ ಶ್ವಾನ; ವೈರಲ್ ವಿಡಿಯೋ ಇಲ್ಲಿದೆ
ಭಾರತೀಯ ಸೇನೆಯ ನಾಯಿ ಜೂಮ್
TV9 Web
| Edited By: |

Updated on: Oct 11, 2022 | 12:03 PM

Share

ಅನಂತ್​ನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ (Anantnag) ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ಭಯೋತ್ಪಾದಕರ ನಡುವಿನ ಎನ್‌ಕೌಂಟರ್‌ನಲ್ಲಿ (Encounter) ಭಾರತೀಯ ಸೇನೆಯ ನಾಯಿಯೊಂದು ಸೋಮವಾರ ತೀವ್ರವಾಗಿ ಗಾಯಗೊಂಡಿದೆ. ಭಾನುವಾರ ತಡರಾತ್ರಿ ದಕ್ಷಿಣ ಕಾಶ್ಮೀರ ಜಿಲ್ಲೆಯ ತಂಗ್ಪಾವಾ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಬಂದ ನಂತರ ಎನ್​ಕೌಂಟರ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು.

ಉಗ್ರರು ಅಡಗಿರುವ ಮನೆಯಿಂದ ಆ ಉಗ್ರರನ್ನು ಹೊರಗೆ ಕರೆತರುವ ಕೆಲಸವನ್ನು ಜೂಮ್ ಎಂಬ ಭಾರತೀಯ ಸೇನೆಯ ನಾಯಿಗೆ ವಹಿಸಲಾಗಿತ್ತು. ಆ ನಾಯಿ ಮನೆಯೊಳಗೆ ಹೋಗಿ ಉಗ್ರರ ಮೇಲೆ ದಾಳಿ ಮಾಡಿತ್ತು. ಈ ಕಾರ್ಯಾಚರಣೆಯ ಸಮಯದಲ್ಲಿ ಆ ನಾಯಿಯ ಮೇಲೆ 2 ಬಾರಿ ಗುಂಡಿನ ದಾಳಿ ನಡೆಸಿದ್ದರಿಂದ ನಾಯಿಗೆ ಗಂಭೀರವಾದ ಗಾಯಗಳಾಗಿವೆ.

ತನ್ನ ಮೈಮೇಲೆ ಗುಂಡಿನ ದಾಳಿ ನಡೆಸಿದ್ದರೂ ಹೆದರದ ಆ ನಾಯಿ ತನ್ನ ಕಾರ್ಯವನ್ನು ಮುಂದುವರೆಸಿತು. ಅಷ್ಟೇ ಅಲ್ಲದೆ ಇಬ್ಬರು ಭಯೋತ್ಪಾದಕರ ಹತ್ಯೆಗೂ ಕಾರಣವಾಯಿತು. ಜೂಮ್ ಎಂಬ ಆ ನಾಯಿಯನ್ನು ತಕ್ಷಣ ಸೇನೆಯ ಪಶುವೈದ್ಯಕೀಯ ಆಸ್ಪತ್ರೆಗೆ ರವಾನಿಸಲಾಯಿತು. ಅಲ್ಲಿ ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಸೇನೆಯ ಚಿನಾರ್ ಕಾರ್ಪ್ಸ್ ವಿಭಾಗವು ಎನ್​ಕೌಂಟರ್ ಕಾರ್ಯಾಚರಣೆಯಲ್ಲಿ ತನ್ನ ಶ್ವಾನ ಪಡೆಯ ಕೊಡುಗೆಯನ್ನು ಗೌರವಿಸಲು ಬ್ರೇವ್‌ಹಾರ್ಟ್‌ನಲ್ಲಿ ವೀಡಿಯೊವನ್ನು ಬಿಡುಗಡೆ ಮಾಡಿದೆ.

ಇದನ್ನೂ ಓದಿ: Terrorists Encounter: ಕಾಶ್ಮೀರದ ಶೋಪಿಯಾನ್​ನಲ್ಲಿ ಸರಣಿ ಎನ್​ಕೌಂಟರ್; ಭದ್ರತಾ ಪಡೆಯಿಂದ ನಾಲ್ವರು ಉಗ್ರರ ಹತ್ಯೆ

ದಕ್ಷಿಣ ಕಾಶ್ಮೀರದಲ್ಲಿ ಜೂಮ್ ಅನೇಕ ಸಕ್ರಿಯ ಕಾರ್ಯಾಚರಣೆಗಳ ಭಾಗವಾಗಿದೆ ಎಂದು ಸೇನಾ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. “ಜೂಮ್ ಬಹಳ ಅತ್ಯುತ್ತಮ ತರಬೇತಿ ಪಡೆದ, ಉಗ್ರ ಮತ್ತು ಬದ್ಧತೆ ಹೊಂದಿರುವ ಶ್ವಾನ. ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಕೆಳಗುರುಳಿಸಲು ಅವರಿಗೆ ತರಬೇತಿ ನೀಡಲಾಗಿದೆ,” ಎಂದು ಅಧಿಕಾರಿ ಹೇಳಿದ್ದಾರೆ.

ಆ ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ಅನೇಕ ಸೈನಿಕರು ಗಾಯಗೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ