AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡೇಟು ಬಿದ್ದರೂ ಉಗ್ರರ ಜೊತೆ ಕಾದಾಡಿದ ಭಾರತೀಯ ಸೇನೆಯ ಶ್ವಾನ; ವೈರಲ್ ವಿಡಿಯೋ ಇಲ್ಲಿದೆ

ತನ್ನ ಮೈಮೇಲೆ ಗುಂಡಿನ ದಾಳಿ ನಡೆಸಿದ್ದರೂ ಹೆದರದ ಆ ನಾಯಿ ತನ್ನ ಕಾರ್ಯವನ್ನು ಮುಂದುವರೆಸಿತು. ಅಷ್ಟೇ ಅಲ್ಲದೆ ಇಬ್ಬರು ಭಯೋತ್ಪಾದಕರ ಹತ್ಯೆಗೂ ಕಾರಣವಾಯಿತು.

ಗುಂಡೇಟು ಬಿದ್ದರೂ ಉಗ್ರರ ಜೊತೆ ಕಾದಾಡಿದ ಭಾರತೀಯ ಸೇನೆಯ ಶ್ವಾನ; ವೈರಲ್ ವಿಡಿಯೋ ಇಲ್ಲಿದೆ
ಭಾರತೀಯ ಸೇನೆಯ ನಾಯಿ ಜೂಮ್
TV9 Web
| Edited By: |

Updated on: Oct 11, 2022 | 12:03 PM

Share

ಅನಂತ್​ನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ (Anantnag) ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ಭಯೋತ್ಪಾದಕರ ನಡುವಿನ ಎನ್‌ಕೌಂಟರ್‌ನಲ್ಲಿ (Encounter) ಭಾರತೀಯ ಸೇನೆಯ ನಾಯಿಯೊಂದು ಸೋಮವಾರ ತೀವ್ರವಾಗಿ ಗಾಯಗೊಂಡಿದೆ. ಭಾನುವಾರ ತಡರಾತ್ರಿ ದಕ್ಷಿಣ ಕಾಶ್ಮೀರ ಜಿಲ್ಲೆಯ ತಂಗ್ಪಾವಾ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಬಂದ ನಂತರ ಎನ್​ಕೌಂಟರ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು.

ಉಗ್ರರು ಅಡಗಿರುವ ಮನೆಯಿಂದ ಆ ಉಗ್ರರನ್ನು ಹೊರಗೆ ಕರೆತರುವ ಕೆಲಸವನ್ನು ಜೂಮ್ ಎಂಬ ಭಾರತೀಯ ಸೇನೆಯ ನಾಯಿಗೆ ವಹಿಸಲಾಗಿತ್ತು. ಆ ನಾಯಿ ಮನೆಯೊಳಗೆ ಹೋಗಿ ಉಗ್ರರ ಮೇಲೆ ದಾಳಿ ಮಾಡಿತ್ತು. ಈ ಕಾರ್ಯಾಚರಣೆಯ ಸಮಯದಲ್ಲಿ ಆ ನಾಯಿಯ ಮೇಲೆ 2 ಬಾರಿ ಗುಂಡಿನ ದಾಳಿ ನಡೆಸಿದ್ದರಿಂದ ನಾಯಿಗೆ ಗಂಭೀರವಾದ ಗಾಯಗಳಾಗಿವೆ.

ತನ್ನ ಮೈಮೇಲೆ ಗುಂಡಿನ ದಾಳಿ ನಡೆಸಿದ್ದರೂ ಹೆದರದ ಆ ನಾಯಿ ತನ್ನ ಕಾರ್ಯವನ್ನು ಮುಂದುವರೆಸಿತು. ಅಷ್ಟೇ ಅಲ್ಲದೆ ಇಬ್ಬರು ಭಯೋತ್ಪಾದಕರ ಹತ್ಯೆಗೂ ಕಾರಣವಾಯಿತು. ಜೂಮ್ ಎಂಬ ಆ ನಾಯಿಯನ್ನು ತಕ್ಷಣ ಸೇನೆಯ ಪಶುವೈದ್ಯಕೀಯ ಆಸ್ಪತ್ರೆಗೆ ರವಾನಿಸಲಾಯಿತು. ಅಲ್ಲಿ ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಸೇನೆಯ ಚಿನಾರ್ ಕಾರ್ಪ್ಸ್ ವಿಭಾಗವು ಎನ್​ಕೌಂಟರ್ ಕಾರ್ಯಾಚರಣೆಯಲ್ಲಿ ತನ್ನ ಶ್ವಾನ ಪಡೆಯ ಕೊಡುಗೆಯನ್ನು ಗೌರವಿಸಲು ಬ್ರೇವ್‌ಹಾರ್ಟ್‌ನಲ್ಲಿ ವೀಡಿಯೊವನ್ನು ಬಿಡುಗಡೆ ಮಾಡಿದೆ.

ಇದನ್ನೂ ಓದಿ: Terrorists Encounter: ಕಾಶ್ಮೀರದ ಶೋಪಿಯಾನ್​ನಲ್ಲಿ ಸರಣಿ ಎನ್​ಕೌಂಟರ್; ಭದ್ರತಾ ಪಡೆಯಿಂದ ನಾಲ್ವರು ಉಗ್ರರ ಹತ್ಯೆ

ದಕ್ಷಿಣ ಕಾಶ್ಮೀರದಲ್ಲಿ ಜೂಮ್ ಅನೇಕ ಸಕ್ರಿಯ ಕಾರ್ಯಾಚರಣೆಗಳ ಭಾಗವಾಗಿದೆ ಎಂದು ಸೇನಾ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. “ಜೂಮ್ ಬಹಳ ಅತ್ಯುತ್ತಮ ತರಬೇತಿ ಪಡೆದ, ಉಗ್ರ ಮತ್ತು ಬದ್ಧತೆ ಹೊಂದಿರುವ ಶ್ವಾನ. ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಕೆಳಗುರುಳಿಸಲು ಅವರಿಗೆ ತರಬೇತಿ ನೀಡಲಾಗಿದೆ,” ಎಂದು ಅಧಿಕಾರಿ ಹೇಳಿದ್ದಾರೆ.

ಆ ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ಅನೇಕ ಸೈನಿಕರು ಗಾಯಗೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ