AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೀದಿಯಲ್ಲೇ ನಿಂತು ವಯಸ್ಸಾದ ಅಪ್ಪನಿಗೆ ಕೋಲಿನಿಂದ ಬಾರಿಸಿದ ಮಗ; ವಿಡಿಯೋ ವೈರಲ್

ಈ ಘಟನೆಯ ಸಿಸಿಟಿವಿ ದೃಶ್ಯಾವಳಿಯಲ್ಲಿ ತಂದೆ ಮತ್ತು ಮಗ ಜಗಳವಾಡುತ್ತಿರುವುದನ್ನು ನೋಡಬಹುದು. ಆಗ ಇದ್ದಕ್ಕಿದ್ದಂತೆ ಮಗ ಬೀದಿಯಲ್ಲಿ ಬಿದ್ದಿದ್ದ ಕೋಲನ್ನು ತೆಗೆದುಕೊಂಡು ಅಪ್ಪನಿಗೆ ಹೊಡೆಯಲು ಪ್ರಾರಂಭಿಸುತ್ತಾನೆ.

Viral Video: ಬೀದಿಯಲ್ಲೇ ನಿಂತು ವಯಸ್ಸಾದ ಅಪ್ಪನಿಗೆ ಕೋಲಿನಿಂದ ಬಾರಿಸಿದ ಮಗ; ವಿಡಿಯೋ ವೈರಲ್
ಅಪ್ಪನನ್ನು ಥಳಿಸುತ್ತಿರುವ ಮಗ
TV9 Web
| Updated By: ಸುಷ್ಮಾ ಚಕ್ರೆ|

Updated on: Sep 20, 2022 | 1:14 PM

Share

ಜೋಧ್​ಪುರ: ಹೆತ್ತವರನ್ನು ಅಮಾನವೀಯವಾಗಿ ನಡೆಸಿಕೊಳ್ಳುವ, ಹಿಂಸೆ ನೀಡುವ, ಮನೆಯಿಂದ ಹೊರಗೆ ಹಾಕುವ, ಕೊಲೆ ಮಾಡುವ ಘಟನೆಗಳು ಆಗಾಗ ಬೆಳಕಿಗೆ ಬರುತ್ತಲೇ ಇರುತ್ತವೆ. ರಾಜಸ್ಥಾನದ ಜೋಧ್​ಪುರದಲ್ಲಿ (Jodhpur) ಒಬ್ಬ ವ್ಯಕ್ತಿ ತನ್ನ ವಯಸ್ಸಾದ ತಂದೆಗೆ ರಸ್ತೆಯ ಫುಟ್​ಪಾತ್ (Footpath) ಮೇಲೆ ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವ ವಿಡಿಯೋವೊಂದು ವೈರಲ್ (Video Viral) ಆಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಈ ಘಟನೆಯ ಸಿಸಿಟಿವಿ ದೃಶ್ಯಾವಳಿಯಲ್ಲಿ ತಂದೆ ಮತ್ತು ಮಗ ಯಾವುದೋ ವಿಷಯದ ಬಗ್ಗೆ ಜಗಳವಾಡುತ್ತಿರುವುದನ್ನು ನೋಡಬಹುದು. ಆಗ ಇದ್ದಕ್ಕಿದ್ದಂತೆ ಬಿಳಿ ಟೀ ಶರ್ಟ್‌ನಲ್ಲಿರುವ ಮಗ ಬೀದಿಯಲ್ಲಿ ಬಿದ್ದಿದ್ದ ಕೋಲನ್ನು ತೆಗೆದುಕೊಂಡು ಅಪ್ಪನಿಗೆ ಹೊಡೆಯಲು ಪ್ರಾರಂಭಿಸುತ್ತಾನೆ. ವಯಸ್ಸಾಗಿರುವ ಅವನ ತಂದೆ ಜೋರಾಗಿ ಕೂಗುತ್ತಿದ್ದರೂ ಆತ ಹೊಡೆಯುವುದನ್ನು ನಿಲ್ಲಿಸುವುದಿಲ್ಲ. ಸ್ವಲ್ಪ ಹೊತ್ತು ಥಳಿಸಿದ ನಂತರ ಆತ ಕೋಪದಿಂದ ಕೋಲನ್ನು ಎಸೆಯುತ್ತಾನೆ.

ಇದನ್ನೂ ಓದಿ: ರಸ್ತೆಯಲ್ಲಿ ಡಿಕ್ಕಿ ಹೊಡೆದು ಬೈಕ್ ಚಾಲಕನನ್ನು ಎಳೆದುಕೊಂಡು ಹೋದ ಫಾರ್ಚುನರ್ ಕಾರು; ಶಾಕಿಂಗ್ ವಿಡಿಯೋ ಇಲ್ಲಿದೆ

ಈ ವಿಡಿಯೋದಲ್ಲಿ ಕಾಣುವ ಕೆಲವು ನೆರೆಹೊರೆಯವರು ದೂರದಿಂದಲೇ ಅವರನ್ನು ತಡೆಯಲು ಪ್ರಯತ್ನಿಸುತ್ತಾರೆ. ಆದರೂ ಅವನು ಅವರ ಮಾತನ್ನು ಕೇಳದೆ ಮತ್ತೆ ತನ್ನ ತಂದೆಯ ಮೇಲೆ ಹಲ್ಲೆ ಮಾಡಲು ಪ್ರಾರಂಭಿಸುತ್ತಾನೆ. ಅವರಿಬ್ಬರ ನಡುವಿನ ವಾಗ್ವಾದ ಮುಂದುವರೆದಾಗ ಅವನು ತನ್ನ ತಂದೆಗೆ ಕಪಾಳಮೋಕ್ಷ ಮಾಡಿ, ಹೊಡೆಯಲು ಪ್ರಾರಂಭಿಸುತ್ತಾನೆ.

ಈ ವಿಡಿಯೋದಲ್ಲಿರುವ ವ್ಯಕ್ತಿ ತನ್ನ ತಂದೆಯ ಮೇಲೆ ಹಲ್ಲೆ ನಡೆಸಿರುವುದು ಇದೇ ಮೊದಲಲ್ಲ. ಈ ಘಟನೆ ನಡೆದ 1 ದಿನದ ಮೊದಲು ಕೂಡ ಆ ವ್ಯಕ್ತಿ ತನ್ನ ತಂದೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?