AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಭಿಕ್ಷುಕನಂತೆ ಮನೆಗೆ ಬಂದು ಟಿಡಿಪಿ ನಾಯಕನ ಮೇಲೆ ಮಚ್ಚು ಬೀಸಿ ಪರಾರಿ; ವಿಡಿಯೋ ವೈರಲ್

ಭಿಕ್ಷೆ ನೀಡಲು ಹೊರಗೆ ಬಂದ ಶೇಷಗಿರಿ ರಾವ್​ ಮೇಲೆ ತನ್ನ ಬ್ಯಾಗ್​ನಲ್ಲಿದ್ದ ಮಚ್ಚಿನಿಂದ ಅಪರಿಚಿತ ವ್ಯಕ್ತಿ ಹಲ್ಲೆ ಮಾಡಿದ್ದಾನೆ. ಈ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Viral Video: ಭಿಕ್ಷುಕನಂತೆ ಮನೆಗೆ ಬಂದು ಟಿಡಿಪಿ ನಾಯಕನ ಮೇಲೆ ಮಚ್ಚು ಬೀಸಿ ಪರಾರಿ; ವಿಡಿಯೋ ವೈರಲ್
ಟಿಡಿಪಿ ನಾಯಕನ ಮೇಲೆ ಕೊಲೆ ಯತ್ನ
TV9 Web
| Updated By: ಸುಷ್ಮಾ ಚಕ್ರೆ|

Updated on: Nov 17, 2022 | 3:52 PM

Share

ಹೈದರಾಬಾದ್: ಆಂಧ್ರಪ್ರದೇಶದ ಕಾಕಿನಾಡದಲ್ಲಿ ತೆಲುಗು ದೇಶಂ ಪಕ್ಷದ (TDP) ನಾಯಕ ಪೊಲ್ನಾಟಿ ಶೇಷಗಿರಿ ರಾವ್ ಅವರ ಮನೆಗೆ ಭಿಕ್ಷೆ ಬೇಡುವವನ ವೇಷದಲ್ಲಿ ಬಂದ ವ್ಯಕ್ತಿಯೊಬ್ಬ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಇದರಿಂದ ಟಿಡಿಪಿ ನಾಯಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಭಿಕ್ಷುಕನ ವೇಷದಲ್ಲಿ ಇಂದು ಬೆಳಗ್ಗೆ ಶೇಷಗಿರಿ ರಾವ್ ಅವರ ಮನೆಗೆ ಬಂದ ವ್ಯಕ್ತಿಗೆ ಹಣ ನೀಡಲು ಶೇಷಗಿರಿ ರಾವ್ ಹೊರಗೆ ಬರುತ್ತಿದ್ದಂತೆ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಈ ದೃಶ್ಯ ಮನೆಯ ಸಿಸಿಟಿವಿಯಲ್ಲಿ (CCTV) ಸೆರೆಯಾಗಿದೆ.

ಭಿಕ್ಷೆ ನೀಡಲು ಹೊರಗೆ ಬಂದ ಶೇಷಗಿರಿ ರಾವ್​ ಮೇಲೆ ತನ್ನ ಬ್ಯಾಗ್​ನಲ್ಲಿದ್ದ ಮಚ್ಚಿನಿಂದ ಅಪರಿಚಿತ ವ್ಯಕ್ತಿ ಹಲ್ಲೆ ಮಾಡಿದ್ದಾನೆ. ಹಲ್ಲೆ ನಡೆಸಿದಾಗ ಟಿಡಿಪಿ ನಾಯಕ ತನ್ನ ಮನೆಯ ಬಾಗಿಲಿನಲ್ಲಿ ನಿಂತುಕೊಂಡು ಹಣ ಮತ್ತು ಧಾನ್ಯಗಳನ್ನು ಭಿಕ್ಷೆಯಾಗಿ ನೀಡುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ನೋಡಬಹುದು. ಆಗ ತಕ್ಷಣ ಆರೋಪಿಯು ಟಿಡಿಪಿ ನಾಯಕರನ್ನು ಗಾಯಗೊಳಿಸಿ ಓಡಿಹೋಗುತ್ತಿರುವುದನ್ನು ಕಾಣಬಹುದು. ಆಗ ಒಬ್ಬರು ಮಹಿಳೆ ಮನೆಯಿಂದ ಹೊರಬಂದು ಜೋರಾಗಿ ಕೂಗುತ್ತಾ ಅವನ ಹಿಂದೆ ಓಡುತ್ತಾರೆ.

ಇದನ್ನೂ ಓದಿ: Crime News: ಕೌಟುಂಬಿಕ ಕಲಹ, ಮೈ ಮೇಲೆ ಬಿಸಿನೀರು, ಕಾರದ ಪುಡಿ ಎರಚಿ ಒನಕೆಯಿಂದ ಹಲ್ಲೆ ನಡೆಸಿ ಮಾವನನ್ನು ಕೊಂದ ಸೊಸೆ

ಈ ದಾಳಿಯಲ್ಲಿ ಶೇಷಗಿರಿ ರಾವ್ ಅವರ ತಲೆ ಮತ್ತು ಕೈಗೆ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವ ಕಾರಣಕ್ಕೆ ಈ ಹಲ್ಲೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಹಲ್ಲೆ ಮಾಡಿದ ಬಳಿಕ ಬೈಕ್‌ನಲ್ಲಿ ಮನೆಯ ಹೊರಗೆ ತನಗಾಗಿ ಕಾಯುತ್ತಿದ್ದ ಇನ್ನೊಬ್ಬ ವ್ಯಕ್ತಿಯೊಂದಿಗೆ ಆರೋಪಿ ಪರಾರಿಯಾಗಿದ್ದಾನೆ. ಆರೋಪಿಯ ಪತ್ತೆಗೆ 4 ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಕಾಕಿನಾಡ ಪೊಲೀಸ್ ವರಿಷ್ಠಾಧಿಕಾರಿ ಎಂ. ರವೀಂದ್ರನಾಥ ಬಾಬು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ