AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಯುವತಿಯನ್ನು ರಸ್ತೆಯಲ್ಲಿ ಎಳೆದುಕೊಂಡು ಹೋದ ಕಾರು; ಸಿಸಿಟಿವಿಯಲ್ಲಿ ಸಂಪೂರ್ಣ ಘಟನೆ ದಾಖಲು

ಭಾನುವಾರ ಮುಂಜಾನೆ ಕುಡಿದು ವಾಹನ ಚಲಾಯಿಸುತ್ತಿದ್ದ ಐವರ ಕಾರು ಯುವತಿಯ ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಆ ವೇಳೆ ಆಕೆಯ ಬಟ್ಟೆ ಕಾರಿಗೆ ಸಿಕ್ಕಿಹಾಕಿಕೊಂಡ ಹಿನ್ನೆಲೆಯಲ್ಲಿ ಆ ಕಾರು ಆಕೆಯನ್ನು 20 ಕಿ.ಮೀವರೆಗೂ ಎಳೆದುಕೊಂಡು ಹೋಗಿತ್ತು.

ದೆಹಲಿಯ ಯುವತಿಯನ್ನು ರಸ್ತೆಯಲ್ಲಿ ಎಳೆದುಕೊಂಡು ಹೋದ ಕಾರು; ಸಿಸಿಟಿವಿಯಲ್ಲಿ ಸಂಪೂರ್ಣ ಘಟನೆ ದಾಖಲು
ದೆಹಲಿಯಲ್ಲಿ ಯುವತಿಗೆ ಅಪಘಾತ ಮಾಡಿದ ಕಾರುImage Credit source: NDTV
TV9 Web
| Edited By: |

Updated on:Jan 02, 2023 | 12:34 PM

Share

ನವದೆಹಲಿ: ಭಾನುವಾರ ನಸುಕಿನ ಜಾವ 20 ವರ್ಷದ ದೆಹಲಿಯ (Delhi) ಯುವತಿಯ ಸ್ಕೂಟಿಗೆ ಕಾರೊಂದು ಡಿಕ್ಕಿ ಹೊಡೆದು 20 ಕಿ.ಮೀ ದೂರಕ್ಕೆ ಆಕೆಯನ್ನು ಎಳೆದುಕೊಂಡು ಹೋಗಿತ್ತು. ಇದರಿಂದ ಆ ಯುವತಿ ಸಾವನ್ನಪ್ಪಿದ್ದಳು. ಭಾನುವಾರ ಮುಂಜಾನೆ ಸಾವನ್ನಪ್ಪಿದ 20 ವರ್ಷದ ಯುವತಿ ಆರೋಪಿಯ ಕಾರಿನ ಕೆಳಗೆ ಸಿಲುಕಿಕೊಂಡಿದ್ದು, ಆಕೆಯನ್ನು ರಸ್ತೆಯಲ್ಲಿ ಎಳೆದೊಯ್ಯಲಾಗಿತ್ತು. ಬಟ್ಟೆಯೆಲ್ಲ ಹರಿದುಹೋಗಿ, ಮೈಕೈ ಎಲ್ಲ ಗಾಯಗೊಂಡು ಬೆತ್ತಲಾಗಿ ರಸ್ತೆಯಲ್ಲಿ ಬಿದ್ದಿದ್ದ ಆಕೆಯನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಳು. ಈ ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ (CCTV Camera) ಸೆರೆಯಾಗಿದೆ.

ಭಾನುವಾರ ಮುಂಜಾನೆ 3.30ರ ಸುಮಾರಿಗೆ ಹೊಸ ವರ್ಷದ ಸಂಭ್ರಮಾಚರಣೆ ಮುಗಿಸಿ, ಕುಡಿದು ವಾಹನ ಚಲಾಯಿಸುತ್ತಿದ್ದ ಐವರ ಕಾರು ಯುವತಿಯ ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಆ ವೇಳೆ ಆಕೆಯ ಬಟ್ಟೆ ಕಾರಿಗೆ ಸಿಕ್ಕಿಹಾಕಿಕೊಂಡ ಹಿನ್ನೆಲೆಯಲ್ಲಿ ಆ ಕಾರು ಆಕೆಯನ್ನು 20 ಕಿ.ಮೀವರೆಗೂ ಎಳೆದುಕೊಂಡು ಹೋಗಿತ್ತು. ಕಂಠಪೂರ್ತಿ ಕುಡಿದಿದ್ದರಿಂದ ಆಕೆ ತಮ್ಮ ಕಾರಿನಡಿ ಸಿಲುಕಿಕೊಂಡಿದ್ದು ಆ ಐವರಿಗೆ ತಿಳಿದಿಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ: shocking ಹೊಸ ವರ್ಷಾಚರಣೆ ವೇಳೆ ಭೀಕರ ಅಪಘಾತ, ಯುವತಿಯನ್ನು ಎಳೆದೊಯ್ದಿ ಕಾರು: 4ಕಿ.ಮೀ ದೂರದಲ್ಲಿ ಶವ ಪತ್ತೆ

ಪ್ರತ್ಯಕ್ಷದರ್ಶಿ ದೀಪಕ್ ದಹಿಯಾ ಮಿಠಾಯಿ ಅಂಗಡಿಯನ್ನು ನಡೆಸುತ್ತಿರುವ ಲಾಡ್‌ಪುರ ಗ್ರಾಮದ ದೆಹಲಿಯ ಕಂಝವಾಲಾ ರಸ್ತೆಯಲ್ಲಿ ಮಾರುತಿ ಬಲೆನೊ ಕಾರು ಯು-ಟರ್ನ್ ಮಾಡುವುದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ನೋಡಬಹುದು. ಈ ವೇಳೆ ಆ ಕಾರಿನಡಿ ಯುವತಿ ಸಿಲುಕಿರುವುದು ಕೂಡ ಕಾಣುತ್ತದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಈ ಘಟನೆಯನ್ನು ನಾಚಿಕೆಗೇಡಿನ ಸಂಗತಿ ಎಂದು ಕರೆದಿದ್ದಾರೆ. ಅಲ್ಲದೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ. ಆರೋಪಿಗಳು ಯು-ಟರ್ನ್ ತೆಗೆದುಕೊಳ್ಳುವ ಮೂಲಕ ಸುಮಾರು 4ರಿಂದ 5 ಕಿಲೋಮೀಟರ್ ಒಂದೇ ರಸ್ತೆಯಲ್ಲಿ ಪದೇ ಪದೇ ವಾಹನ ಚಲಾಯಿಸುತ್ತಿದ್ದರು ಎಂದು ದಹಿಯಾ ಹೇಳಿದ್ದಾರೆ.

ನಾನು ಹಲವು ಬಾರಿ ಅವರನ್ನು ತಡೆಯಲು ಯತ್ನಿಸಿದರೂ ವಾಹನ ನಿಲ್ಲಿಸದೆ ಸುಮಾರು ಒಂದೂವರೆ ಗಂಟೆಗಳ ಕಾಲ ಯುವತಿಯ ಶವವನ್ನು ಸುಮಾರು 20 ಕಿ.ಮೀ ಹೊತ್ತು ಸಾಗಿಸಿದರು ಎಂದು ಪ್ರತ್ಯಕ್ಷದರ್ಶಿ ದಹಿಯಾ ಹೇಳಿದ್ದಾರೆ. ಆತ ತನ್ನ ಬೈಕ್​ನಲ್ಲಿ ಕಾರನ್ನು ಹಿಂಬಾಲಿಸಿ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದನು. ಸುಮಾರು ಒಂದೂವರೆ ಗಂಟೆಗಳ ನಂತರ ಆ ಯುವತಿಯ ಶವವು ಕಾಂಜ್ವಾಲಾ ರಸ್ತೆಯ ಜ್ಯೋತಿ ಗ್ರಾಮದ ಬಳಿ ಕಾರಿನಿಂದ ಹೊರಗೆ ಬಿದ್ದಿತು. ನಂತರ ಕಾರಿನಲ್ಲಿದ್ದ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ; ದೆಹಲಿ ಯುವತಿಯ ಸಾವಿನ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ಬೇಸರ

ಆ ಯುವತಿಯ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದು ಆಕೆಯ ದೇಹವು ಕಾರಿನ ಕೆಳಗೆ ಸಿಕ್ಕಿಹಾಕಿಕೊಂಡು, ಬಹಳ ದೂರದವರೆಗೆ ಎಳೆದುಕೊಂಡು ಹೋಗಿದ್ದರಿಂದ ಯುವತಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳು ಈ ಅಪಘಾತದ ವೇಳೆ ಕಾರಿನ ಗ್ಲಾಸ್ ಹಾಕಿಕೊಂಡಿದ್ದರು. ಅಲ್ಲದೆ, ಕಾರಿನೊಳಗೆ ಜೋರಾಗಿ ಸಂಗೀತ ಹಾಕಿಕೊಂಡಿದ್ದರು. ಆದ್ದರಿಂದ ಅವರು ತಮ್ಮ ಕಾರಿನಡಿ ಯುವತಿ ಸಿಲುಕಿರುವುದನ್ನು ಗಮನಿಸಲಿಲ್ಲ. ಆಕೆ ಸಿಲುಕಿದ್ದು ಗೊತ್ತಾಗುತ್ತಿದ್ದಂತೆ ಕಾರಿನಿಂದ ಪರಾರಿಯಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:29 pm, Mon, 2 January 23

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ