AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಯುವತಿಯನ್ನು ರಸ್ತೆಯಲ್ಲಿ ಎಳೆದುಕೊಂಡು ಹೋದ ಕಾರು; ಸಿಸಿಟಿವಿಯಲ್ಲಿ ಸಂಪೂರ್ಣ ಘಟನೆ ದಾಖಲು

ಭಾನುವಾರ ಮುಂಜಾನೆ ಕುಡಿದು ವಾಹನ ಚಲಾಯಿಸುತ್ತಿದ್ದ ಐವರ ಕಾರು ಯುವತಿಯ ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಆ ವೇಳೆ ಆಕೆಯ ಬಟ್ಟೆ ಕಾರಿಗೆ ಸಿಕ್ಕಿಹಾಕಿಕೊಂಡ ಹಿನ್ನೆಲೆಯಲ್ಲಿ ಆ ಕಾರು ಆಕೆಯನ್ನು 20 ಕಿ.ಮೀವರೆಗೂ ಎಳೆದುಕೊಂಡು ಹೋಗಿತ್ತು.

ದೆಹಲಿಯ ಯುವತಿಯನ್ನು ರಸ್ತೆಯಲ್ಲಿ ಎಳೆದುಕೊಂಡು ಹೋದ ಕಾರು; ಸಿಸಿಟಿವಿಯಲ್ಲಿ ಸಂಪೂರ್ಣ ಘಟನೆ ದಾಖಲು
ದೆಹಲಿಯಲ್ಲಿ ಯುವತಿಗೆ ಅಪಘಾತ ಮಾಡಿದ ಕಾರುImage Credit source: NDTV
TV9 Web
| Edited By: |

Updated on:Jan 02, 2023 | 12:34 PM

Share

ನವದೆಹಲಿ: ಭಾನುವಾರ ನಸುಕಿನ ಜಾವ 20 ವರ್ಷದ ದೆಹಲಿಯ (Delhi) ಯುವತಿಯ ಸ್ಕೂಟಿಗೆ ಕಾರೊಂದು ಡಿಕ್ಕಿ ಹೊಡೆದು 20 ಕಿ.ಮೀ ದೂರಕ್ಕೆ ಆಕೆಯನ್ನು ಎಳೆದುಕೊಂಡು ಹೋಗಿತ್ತು. ಇದರಿಂದ ಆ ಯುವತಿ ಸಾವನ್ನಪ್ಪಿದ್ದಳು. ಭಾನುವಾರ ಮುಂಜಾನೆ ಸಾವನ್ನಪ್ಪಿದ 20 ವರ್ಷದ ಯುವತಿ ಆರೋಪಿಯ ಕಾರಿನ ಕೆಳಗೆ ಸಿಲುಕಿಕೊಂಡಿದ್ದು, ಆಕೆಯನ್ನು ರಸ್ತೆಯಲ್ಲಿ ಎಳೆದೊಯ್ಯಲಾಗಿತ್ತು. ಬಟ್ಟೆಯೆಲ್ಲ ಹರಿದುಹೋಗಿ, ಮೈಕೈ ಎಲ್ಲ ಗಾಯಗೊಂಡು ಬೆತ್ತಲಾಗಿ ರಸ್ತೆಯಲ್ಲಿ ಬಿದ್ದಿದ್ದ ಆಕೆಯನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಳು. ಈ ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ (CCTV Camera) ಸೆರೆಯಾಗಿದೆ.

ಭಾನುವಾರ ಮುಂಜಾನೆ 3.30ರ ಸುಮಾರಿಗೆ ಹೊಸ ವರ್ಷದ ಸಂಭ್ರಮಾಚರಣೆ ಮುಗಿಸಿ, ಕುಡಿದು ವಾಹನ ಚಲಾಯಿಸುತ್ತಿದ್ದ ಐವರ ಕಾರು ಯುವತಿಯ ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಆ ವೇಳೆ ಆಕೆಯ ಬಟ್ಟೆ ಕಾರಿಗೆ ಸಿಕ್ಕಿಹಾಕಿಕೊಂಡ ಹಿನ್ನೆಲೆಯಲ್ಲಿ ಆ ಕಾರು ಆಕೆಯನ್ನು 20 ಕಿ.ಮೀವರೆಗೂ ಎಳೆದುಕೊಂಡು ಹೋಗಿತ್ತು. ಕಂಠಪೂರ್ತಿ ಕುಡಿದಿದ್ದರಿಂದ ಆಕೆ ತಮ್ಮ ಕಾರಿನಡಿ ಸಿಲುಕಿಕೊಂಡಿದ್ದು ಆ ಐವರಿಗೆ ತಿಳಿದಿಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ: shocking ಹೊಸ ವರ್ಷಾಚರಣೆ ವೇಳೆ ಭೀಕರ ಅಪಘಾತ, ಯುವತಿಯನ್ನು ಎಳೆದೊಯ್ದಿ ಕಾರು: 4ಕಿ.ಮೀ ದೂರದಲ್ಲಿ ಶವ ಪತ್ತೆ

ಪ್ರತ್ಯಕ್ಷದರ್ಶಿ ದೀಪಕ್ ದಹಿಯಾ ಮಿಠಾಯಿ ಅಂಗಡಿಯನ್ನು ನಡೆಸುತ್ತಿರುವ ಲಾಡ್‌ಪುರ ಗ್ರಾಮದ ದೆಹಲಿಯ ಕಂಝವಾಲಾ ರಸ್ತೆಯಲ್ಲಿ ಮಾರುತಿ ಬಲೆನೊ ಕಾರು ಯು-ಟರ್ನ್ ಮಾಡುವುದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ನೋಡಬಹುದು. ಈ ವೇಳೆ ಆ ಕಾರಿನಡಿ ಯುವತಿ ಸಿಲುಕಿರುವುದು ಕೂಡ ಕಾಣುತ್ತದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಈ ಘಟನೆಯನ್ನು ನಾಚಿಕೆಗೇಡಿನ ಸಂಗತಿ ಎಂದು ಕರೆದಿದ್ದಾರೆ. ಅಲ್ಲದೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ. ಆರೋಪಿಗಳು ಯು-ಟರ್ನ್ ತೆಗೆದುಕೊಳ್ಳುವ ಮೂಲಕ ಸುಮಾರು 4ರಿಂದ 5 ಕಿಲೋಮೀಟರ್ ಒಂದೇ ರಸ್ತೆಯಲ್ಲಿ ಪದೇ ಪದೇ ವಾಹನ ಚಲಾಯಿಸುತ್ತಿದ್ದರು ಎಂದು ದಹಿಯಾ ಹೇಳಿದ್ದಾರೆ.

ನಾನು ಹಲವು ಬಾರಿ ಅವರನ್ನು ತಡೆಯಲು ಯತ್ನಿಸಿದರೂ ವಾಹನ ನಿಲ್ಲಿಸದೆ ಸುಮಾರು ಒಂದೂವರೆ ಗಂಟೆಗಳ ಕಾಲ ಯುವತಿಯ ಶವವನ್ನು ಸುಮಾರು 20 ಕಿ.ಮೀ ಹೊತ್ತು ಸಾಗಿಸಿದರು ಎಂದು ಪ್ರತ್ಯಕ್ಷದರ್ಶಿ ದಹಿಯಾ ಹೇಳಿದ್ದಾರೆ. ಆತ ತನ್ನ ಬೈಕ್​ನಲ್ಲಿ ಕಾರನ್ನು ಹಿಂಬಾಲಿಸಿ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದನು. ಸುಮಾರು ಒಂದೂವರೆ ಗಂಟೆಗಳ ನಂತರ ಆ ಯುವತಿಯ ಶವವು ಕಾಂಜ್ವಾಲಾ ರಸ್ತೆಯ ಜ್ಯೋತಿ ಗ್ರಾಮದ ಬಳಿ ಕಾರಿನಿಂದ ಹೊರಗೆ ಬಿದ್ದಿತು. ನಂತರ ಕಾರಿನಲ್ಲಿದ್ದ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ; ದೆಹಲಿ ಯುವತಿಯ ಸಾವಿನ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ಬೇಸರ

ಆ ಯುವತಿಯ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದು ಆಕೆಯ ದೇಹವು ಕಾರಿನ ಕೆಳಗೆ ಸಿಕ್ಕಿಹಾಕಿಕೊಂಡು, ಬಹಳ ದೂರದವರೆಗೆ ಎಳೆದುಕೊಂಡು ಹೋಗಿದ್ದರಿಂದ ಯುವತಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳು ಈ ಅಪಘಾತದ ವೇಳೆ ಕಾರಿನ ಗ್ಲಾಸ್ ಹಾಕಿಕೊಂಡಿದ್ದರು. ಅಲ್ಲದೆ, ಕಾರಿನೊಳಗೆ ಜೋರಾಗಿ ಸಂಗೀತ ಹಾಕಿಕೊಂಡಿದ್ದರು. ಆದ್ದರಿಂದ ಅವರು ತಮ್ಮ ಕಾರಿನಡಿ ಯುವತಿ ಸಿಲುಕಿರುವುದನ್ನು ಗಮನಿಸಲಿಲ್ಲ. ಆಕೆ ಸಿಲುಕಿದ್ದು ಗೊತ್ತಾಗುತ್ತಿದ್ದಂತೆ ಕಾರಿನಿಂದ ಪರಾರಿಯಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:29 pm, Mon, 2 January 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್