AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಯುವಕನನ್ನು ಸ್ಕೂಟಿಗೆ ಕಟ್ಟಿ ರಸ್ತೆಯಲ್ಲಿ 2 ಕಿ.ಮೀ ಎಳೆದುಕೊಂಡು ಹೋದ ವಿಡಿಯೋ ವೈರಲ್

ಒಡಿಶಾದಲ್ಲಿ ಈ ಘಟನೆ ನಡೆದಿದ್ದು, 1500 ರೂ. ಹಣವನ್ನು ವಾಪಾಸ್ ಕೊಡಲಿಲ್ಲ ಎಂದು ಯುವಕನನ್ನು ಸ್ಕೂಟಿಗೆ ಕಟ್ಟಿಹಾಕಿ ಸುಮಾರು 2 ಕಿಲೋಮೀಟರ್ ಎಳೆದುಕೊಂಡು ಹೋಗಲಾಗಿದೆ.

Viral Video: ಯುವಕನನ್ನು ಸ್ಕೂಟಿಗೆ ಕಟ್ಟಿ ರಸ್ತೆಯಲ್ಲಿ 2 ಕಿ.ಮೀ ಎಳೆದುಕೊಂಡು ಹೋದ ವಿಡಿಯೋ ವೈರಲ್
ಒಡಿಶಾದಲ್ಲಿ ಸ್ಕೂಟಿಗೆ ವ್ಯಕ್ತಿಯನ್ನು ಕಟ್ಟಿ ಎಳೆದುಕೊಂಡು ಹೋಗುತ್ತಿರುವ ದೃಶ್ಯ
TV9 Web
| Edited By: |

Updated on: Oct 18, 2022 | 3:40 PM

Share

ಒಡಿಶಾ: ತಾವು ನೀಡಿದ್ದ ಸಾಲವನ್ನು ಸಮಯಕ್ಕೆ ಸರಿಯಾಗಿ ವಾಪಾಸ್ ಕೊಡಲಿಲ್ಲ ಎಂಬ ಕಾರಣಕ್ಕೆ 22 ವರ್ಷದ ಯುವಕನನ್ನು ತಮ್ಮ ಸ್ಕೂಟಿಗೆ ಹಗ್ಗದಲ್ಲಿ ಕಟ್ಟಿಕೊಂಡು ಟ್ರಾಫಿಕ್ ಇದ್ದ ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋವೊಂದು ವೈರಲ್ (Video Viral) ಆಗಿದೆ. ಒಡಿಶಾದಲ್ಲಿ (Odisha) ಈ ಘಟನೆ ನಡೆದಿದ್ದು, 1500 ರೂ. ಹಣವನ್ನು ವಾಪಾಸ್ ಕೊಡಲಿಲ್ಲ ಎಂದು ಯುವಕನನ್ನು ಸ್ಕೂಟಿಗೆ ಕಟ್ಟಿಹಾಕಿ ಸುಮಾರು 2 ಕಿಲೋಮೀಟರ್ ಎಳೆದುಕೊಂಡು ಹೋಗಲಾಗಿದೆ. ಆ ಸ್ಕೂಟಿಯ ಹಿಂದೆ ಆ ಯುವಕ ಓಡಿಹೋಗುತ್ತಿರುವ ದೃಶ್ಯವನ್ನು ಪಕ್ಕದ ವಾಹನದಲ್ಲಿ ಹೋಗುತ್ತಿದ್ದವರು ವಿಡಿಯೋ ಮಾಡಿದ್ದಾರೆ.

ಒಡಿಶಾದ ಕಟಕ್ ನಗರದಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ ನಂತರ ಆ ಸ್ಕೂಟಿಯಲ್ಲಿದ್ದ ಇಬ್ಬರನ್ನು ಬಂಧಿಸಲಾಯಿತು. ಆರೋಪಿಗಳ ವಿರುದ್ಧ ಅಕ್ರಮ ಬಂಧನ, ಅಪಹರಣ ಮತ್ತು ಕೊಲೆ ಯತ್ನದ ಆರೋಪ ಹೊರಿಸಲಾಗಿದೆ ಎಂದು ಕಟಕ್ ನಗರ ಉಪ ಪೊಲೀಸ್ ಆಯುಕ್ತ ಪಿನಾಕ್ ಮಿಶ್ರಾ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ವಾಕ್​ಶ್ರವಣದೋಷವುಳ್ಳ ದಂಪತಿ ನಡೆಸುವ ಈ ಪಾನೀಪುರಿ ಅಂಗಡಿಯ ವಿಡಿಯೋ ವೈರಲ್

ಜಗನ್ನಾಥ್ ಬೆಹೆರಾ ಎಂಬ ಯುವಕನ ಕೈಗಳನ್ನು 12 ಅಡಿ ಉದ್ದದ ಹಗ್ಗದಿಂದ ಕಟ್ಟಲಾಗಿತ್ತು. ಅದರ ಇನ್ನೊಂದು ತುದಿಯನ್ನು ಸ್ಕೂಟಿಗೆ ಕಟ್ಟಲಾಗಿತ್ತು. ಭಾನುವಾರ ಸುಮಾರು 20 ನಿಮಿಷಗಳ ಕಾಲ ಸ್ಟುವರ್ಟ್‌ಪಟ್ನಾ ಚೌಕದಿಂದ 2 ಕಿಲೋಮೀಟರ್‌ಗಿಂತ ಹೆಚ್ಚು ದೂರದ ಸುತಾಹತ್ ಚೌಕದವರೆಗೆ ಜಗನ್ನಾಥ್ ಅವರನ್ನು ಸ್ಕೂಟಿಯಲ್ಲಿ ಎಳೆದುಕೊಂಡು ಹೋಗಲಾಗಿತ್ತು.

ಈ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಳಿಕ, ಸುತಾಹತ್ ಸ್ಕ್ವೇರ್‌ನಲ್ಲಿ ಕೆಲವು ಸ್ಥಳೀಯರು ಬಂದು ಆ 22 ವರ್ಷದ ಯುವಕನನ್ನು ರಕ್ಷಿಸಿದ್ದಾರೆ. ಕಳೆದ ತಿಂಗಳು ಆ ಇಬ್ಬರಿಂದ ಜಗನ್ನಾಥ್ ತನ್ನ ಅಜ್ಜನ ಅಂತ್ಯಕ್ರಿಯೆಗೆ 1500 ರೂ. ಸಾಲವನ್ನು ಪಡೆದಿದ್ದ. ಅದನ್ನು ಸಮಯಕ್ಕೆ ಸರಿಯಾಗಿ ವಾಪಾಸ್ ಕೊಡದ ಹಿನ್ನೆಲೆಯಲ್ಲಿ ಈ ರೀತಿ ಮಾಡಲಾಗಿದೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ