AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಯುವಕನನ್ನು ಸ್ಕೂಟಿಗೆ ಕಟ್ಟಿ ರಸ್ತೆಯಲ್ಲಿ 2 ಕಿ.ಮೀ ಎಳೆದುಕೊಂಡು ಹೋದ ವಿಡಿಯೋ ವೈರಲ್

ಒಡಿಶಾದಲ್ಲಿ ಈ ಘಟನೆ ನಡೆದಿದ್ದು, 1500 ರೂ. ಹಣವನ್ನು ವಾಪಾಸ್ ಕೊಡಲಿಲ್ಲ ಎಂದು ಯುವಕನನ್ನು ಸ್ಕೂಟಿಗೆ ಕಟ್ಟಿಹಾಕಿ ಸುಮಾರು 2 ಕಿಲೋಮೀಟರ್ ಎಳೆದುಕೊಂಡು ಹೋಗಲಾಗಿದೆ.

Viral Video: ಯುವಕನನ್ನು ಸ್ಕೂಟಿಗೆ ಕಟ್ಟಿ ರಸ್ತೆಯಲ್ಲಿ 2 ಕಿ.ಮೀ ಎಳೆದುಕೊಂಡು ಹೋದ ವಿಡಿಯೋ ವೈರಲ್
ಒಡಿಶಾದಲ್ಲಿ ಸ್ಕೂಟಿಗೆ ವ್ಯಕ್ತಿಯನ್ನು ಕಟ್ಟಿ ಎಳೆದುಕೊಂಡು ಹೋಗುತ್ತಿರುವ ದೃಶ್ಯ
TV9 Web
| Edited By: |

Updated on: Oct 18, 2022 | 3:40 PM

Share

ಒಡಿಶಾ: ತಾವು ನೀಡಿದ್ದ ಸಾಲವನ್ನು ಸಮಯಕ್ಕೆ ಸರಿಯಾಗಿ ವಾಪಾಸ್ ಕೊಡಲಿಲ್ಲ ಎಂಬ ಕಾರಣಕ್ಕೆ 22 ವರ್ಷದ ಯುವಕನನ್ನು ತಮ್ಮ ಸ್ಕೂಟಿಗೆ ಹಗ್ಗದಲ್ಲಿ ಕಟ್ಟಿಕೊಂಡು ಟ್ರಾಫಿಕ್ ಇದ್ದ ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋವೊಂದು ವೈರಲ್ (Video Viral) ಆಗಿದೆ. ಒಡಿಶಾದಲ್ಲಿ (Odisha) ಈ ಘಟನೆ ನಡೆದಿದ್ದು, 1500 ರೂ. ಹಣವನ್ನು ವಾಪಾಸ್ ಕೊಡಲಿಲ್ಲ ಎಂದು ಯುವಕನನ್ನು ಸ್ಕೂಟಿಗೆ ಕಟ್ಟಿಹಾಕಿ ಸುಮಾರು 2 ಕಿಲೋಮೀಟರ್ ಎಳೆದುಕೊಂಡು ಹೋಗಲಾಗಿದೆ. ಆ ಸ್ಕೂಟಿಯ ಹಿಂದೆ ಆ ಯುವಕ ಓಡಿಹೋಗುತ್ತಿರುವ ದೃಶ್ಯವನ್ನು ಪಕ್ಕದ ವಾಹನದಲ್ಲಿ ಹೋಗುತ್ತಿದ್ದವರು ವಿಡಿಯೋ ಮಾಡಿದ್ದಾರೆ.

ಒಡಿಶಾದ ಕಟಕ್ ನಗರದಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ ನಂತರ ಆ ಸ್ಕೂಟಿಯಲ್ಲಿದ್ದ ಇಬ್ಬರನ್ನು ಬಂಧಿಸಲಾಯಿತು. ಆರೋಪಿಗಳ ವಿರುದ್ಧ ಅಕ್ರಮ ಬಂಧನ, ಅಪಹರಣ ಮತ್ತು ಕೊಲೆ ಯತ್ನದ ಆರೋಪ ಹೊರಿಸಲಾಗಿದೆ ಎಂದು ಕಟಕ್ ನಗರ ಉಪ ಪೊಲೀಸ್ ಆಯುಕ್ತ ಪಿನಾಕ್ ಮಿಶ್ರಾ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ವಾಕ್​ಶ್ರವಣದೋಷವುಳ್ಳ ದಂಪತಿ ನಡೆಸುವ ಈ ಪಾನೀಪುರಿ ಅಂಗಡಿಯ ವಿಡಿಯೋ ವೈರಲ್

ಜಗನ್ನಾಥ್ ಬೆಹೆರಾ ಎಂಬ ಯುವಕನ ಕೈಗಳನ್ನು 12 ಅಡಿ ಉದ್ದದ ಹಗ್ಗದಿಂದ ಕಟ್ಟಲಾಗಿತ್ತು. ಅದರ ಇನ್ನೊಂದು ತುದಿಯನ್ನು ಸ್ಕೂಟಿಗೆ ಕಟ್ಟಲಾಗಿತ್ತು. ಭಾನುವಾರ ಸುಮಾರು 20 ನಿಮಿಷಗಳ ಕಾಲ ಸ್ಟುವರ್ಟ್‌ಪಟ್ನಾ ಚೌಕದಿಂದ 2 ಕಿಲೋಮೀಟರ್‌ಗಿಂತ ಹೆಚ್ಚು ದೂರದ ಸುತಾಹತ್ ಚೌಕದವರೆಗೆ ಜಗನ್ನಾಥ್ ಅವರನ್ನು ಸ್ಕೂಟಿಯಲ್ಲಿ ಎಳೆದುಕೊಂಡು ಹೋಗಲಾಗಿತ್ತು.

ಈ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಳಿಕ, ಸುತಾಹತ್ ಸ್ಕ್ವೇರ್‌ನಲ್ಲಿ ಕೆಲವು ಸ್ಥಳೀಯರು ಬಂದು ಆ 22 ವರ್ಷದ ಯುವಕನನ್ನು ರಕ್ಷಿಸಿದ್ದಾರೆ. ಕಳೆದ ತಿಂಗಳು ಆ ಇಬ್ಬರಿಂದ ಜಗನ್ನಾಥ್ ತನ್ನ ಅಜ್ಜನ ಅಂತ್ಯಕ್ರಿಯೆಗೆ 1500 ರೂ. ಸಾಲವನ್ನು ಪಡೆದಿದ್ದ. ಅದನ್ನು ಸಮಯಕ್ಕೆ ಸರಿಯಾಗಿ ವಾಪಾಸ್ ಕೊಡದ ಹಿನ್ನೆಲೆಯಲ್ಲಿ ಈ ರೀತಿ ಮಾಡಲಾಗಿದೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ