AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಯುವಕನನ್ನು ಸ್ಕೂಟಿಗೆ ಕಟ್ಟಿ ರಸ್ತೆಯಲ್ಲಿ 2 ಕಿ.ಮೀ ಎಳೆದುಕೊಂಡು ಹೋದ ವಿಡಿಯೋ ವೈರಲ್

ಒಡಿಶಾದಲ್ಲಿ ಈ ಘಟನೆ ನಡೆದಿದ್ದು, 1500 ರೂ. ಹಣವನ್ನು ವಾಪಾಸ್ ಕೊಡಲಿಲ್ಲ ಎಂದು ಯುವಕನನ್ನು ಸ್ಕೂಟಿಗೆ ಕಟ್ಟಿಹಾಕಿ ಸುಮಾರು 2 ಕಿಲೋಮೀಟರ್ ಎಳೆದುಕೊಂಡು ಹೋಗಲಾಗಿದೆ.

Viral Video: ಯುವಕನನ್ನು ಸ್ಕೂಟಿಗೆ ಕಟ್ಟಿ ರಸ್ತೆಯಲ್ಲಿ 2 ಕಿ.ಮೀ ಎಳೆದುಕೊಂಡು ಹೋದ ವಿಡಿಯೋ ವೈರಲ್
ಒಡಿಶಾದಲ್ಲಿ ಸ್ಕೂಟಿಗೆ ವ್ಯಕ್ತಿಯನ್ನು ಕಟ್ಟಿ ಎಳೆದುಕೊಂಡು ಹೋಗುತ್ತಿರುವ ದೃಶ್ಯ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 18, 2022 | 3:40 PM

ಒಡಿಶಾ: ತಾವು ನೀಡಿದ್ದ ಸಾಲವನ್ನು ಸಮಯಕ್ಕೆ ಸರಿಯಾಗಿ ವಾಪಾಸ್ ಕೊಡಲಿಲ್ಲ ಎಂಬ ಕಾರಣಕ್ಕೆ 22 ವರ್ಷದ ಯುವಕನನ್ನು ತಮ್ಮ ಸ್ಕೂಟಿಗೆ ಹಗ್ಗದಲ್ಲಿ ಕಟ್ಟಿಕೊಂಡು ಟ್ರಾಫಿಕ್ ಇದ್ದ ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋವೊಂದು ವೈರಲ್ (Video Viral) ಆಗಿದೆ. ಒಡಿಶಾದಲ್ಲಿ (Odisha) ಈ ಘಟನೆ ನಡೆದಿದ್ದು, 1500 ರೂ. ಹಣವನ್ನು ವಾಪಾಸ್ ಕೊಡಲಿಲ್ಲ ಎಂದು ಯುವಕನನ್ನು ಸ್ಕೂಟಿಗೆ ಕಟ್ಟಿಹಾಕಿ ಸುಮಾರು 2 ಕಿಲೋಮೀಟರ್ ಎಳೆದುಕೊಂಡು ಹೋಗಲಾಗಿದೆ. ಆ ಸ್ಕೂಟಿಯ ಹಿಂದೆ ಆ ಯುವಕ ಓಡಿಹೋಗುತ್ತಿರುವ ದೃಶ್ಯವನ್ನು ಪಕ್ಕದ ವಾಹನದಲ್ಲಿ ಹೋಗುತ್ತಿದ್ದವರು ವಿಡಿಯೋ ಮಾಡಿದ್ದಾರೆ.

ಒಡಿಶಾದ ಕಟಕ್ ನಗರದಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ ನಂತರ ಆ ಸ್ಕೂಟಿಯಲ್ಲಿದ್ದ ಇಬ್ಬರನ್ನು ಬಂಧಿಸಲಾಯಿತು. ಆರೋಪಿಗಳ ವಿರುದ್ಧ ಅಕ್ರಮ ಬಂಧನ, ಅಪಹರಣ ಮತ್ತು ಕೊಲೆ ಯತ್ನದ ಆರೋಪ ಹೊರಿಸಲಾಗಿದೆ ಎಂದು ಕಟಕ್ ನಗರ ಉಪ ಪೊಲೀಸ್ ಆಯುಕ್ತ ಪಿನಾಕ್ ಮಿಶ್ರಾ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ವಾಕ್​ಶ್ರವಣದೋಷವುಳ್ಳ ದಂಪತಿ ನಡೆಸುವ ಈ ಪಾನೀಪುರಿ ಅಂಗಡಿಯ ವಿಡಿಯೋ ವೈರಲ್

ಜಗನ್ನಾಥ್ ಬೆಹೆರಾ ಎಂಬ ಯುವಕನ ಕೈಗಳನ್ನು 12 ಅಡಿ ಉದ್ದದ ಹಗ್ಗದಿಂದ ಕಟ್ಟಲಾಗಿತ್ತು. ಅದರ ಇನ್ನೊಂದು ತುದಿಯನ್ನು ಸ್ಕೂಟಿಗೆ ಕಟ್ಟಲಾಗಿತ್ತು. ಭಾನುವಾರ ಸುಮಾರು 20 ನಿಮಿಷಗಳ ಕಾಲ ಸ್ಟುವರ್ಟ್‌ಪಟ್ನಾ ಚೌಕದಿಂದ 2 ಕಿಲೋಮೀಟರ್‌ಗಿಂತ ಹೆಚ್ಚು ದೂರದ ಸುತಾಹತ್ ಚೌಕದವರೆಗೆ ಜಗನ್ನಾಥ್ ಅವರನ್ನು ಸ್ಕೂಟಿಯಲ್ಲಿ ಎಳೆದುಕೊಂಡು ಹೋಗಲಾಗಿತ್ತು.

ಈ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಳಿಕ, ಸುತಾಹತ್ ಸ್ಕ್ವೇರ್‌ನಲ್ಲಿ ಕೆಲವು ಸ್ಥಳೀಯರು ಬಂದು ಆ 22 ವರ್ಷದ ಯುವಕನನ್ನು ರಕ್ಷಿಸಿದ್ದಾರೆ. ಕಳೆದ ತಿಂಗಳು ಆ ಇಬ್ಬರಿಂದ ಜಗನ್ನಾಥ್ ತನ್ನ ಅಜ್ಜನ ಅಂತ್ಯಕ್ರಿಯೆಗೆ 1500 ರೂ. ಸಾಲವನ್ನು ಪಡೆದಿದ್ದ. ಅದನ್ನು ಸಮಯಕ್ಕೆ ಸರಿಯಾಗಿ ವಾಪಾಸ್ ಕೊಡದ ಹಿನ್ನೆಲೆಯಲ್ಲಿ ಈ ರೀತಿ ಮಾಡಲಾಗಿದೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು