AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿಯನ್ನು ಕಾರಿನಲ್ಲಿ ಎಳೆದುಕೊಂಡು ಹೋದ ವಿಡಿಯೋ ವೈರಲ್

ಮಹಿಳಾ ಸುರಕ್ಷತೆ ಬಗ್ಗೆ ರಾತ್ರಿ ಸ್ವಾತಿ ಮಲಿವಾಲ್ ಪರಿಶೀಲನೆ ಮಾಡಲು ನಿಂತಿದ್ದಾಗ ಕಾರಿನಲ್ಲಿ ಬಂದ ವ್ಯಕ್ತಿ ಆಕೆಗೆ ಲಿಫ್ಟ್ ಕೊಡುವುದಾಗಿ ಹೇಳಿದ್ದ.

Viral Video: ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿಯನ್ನು ಕಾರಿನಲ್ಲಿ ಎಳೆದುಕೊಂಡು ಹೋದ ವಿಡಿಯೋ ವೈರಲ್
ಸ್ವಾತಿ ಮಲಿವಾಲ್‌
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 20, 2023 | 12:15 PM

ನವದೆಹಲಿ: ಕುಡಿತದ ಅಮಲಿನಲ್ಲಿ ದೆಹಲಿಯ ಮಹಿಳಾ ಆಯೋಗದ (Delhi Commission for Women) ಅಧ್ಯಕ್ಷೆ ಸ್ವಾತಿ ಮಲಿವಾಲ್‌ (Swati Maliwal) ಅವರನ್ನು ಏಮ್ಸ್‌ನ ಹೊರಗಿನ ರಸ್ತೆಯಲ್ಲಿ ಸುಮಾರು 10ರಿಂದ 15 ಮೀಟರ್ ಎಳೆದುಕೊಂಡು ಹೋದ ಆಘಾತಕಾರಿ ಘಟನೆಯ ವಿಡಿಯೋ ಇದೀಗ ಹರಿದಾಡುತ್ತಿದೆ. ಸಂಗಮ್ ವಿಹಾರ್ ನಿವಾಸಿಯಾದ 47 ವರ್ಷದ ಹರೀಶ್ ಚಂದ್ರ ಎಂಬ ವ್ಯಕ್ತಿಯನ್ನು ಕಿರುಕುಳ ಮತ್ತು ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಕುಡಿದಿದ್ದ ಚಾಲಕನ ಜೊತೆ ಮುಂಜಾನೆ 3 ಗಂಟೆ ಸುಮಾರಿಗೆ ಸ್ವಾತಿ ಮಲಿವಾಲ್ ಮಾತನಾಡುತ್ತಿದ್ದಾಗ ಆತ ಕಾರಿನ ಕಿಟಕಿ ತೆರೆದಿದ್ದ. ಆಗ ಸ್ವಾತಿ ಅವರ ಕೈ ಕಿಟಕಿಯಲ್ಲಿ ಸಿಲುಕಿಕೊಂಡಿತ್ತು. ತನ್ನ ಕಾರಿನಲ್ಲಿ ಕುಳಿತುಕೊಳ್ಳುವಂತೆ ಸ್ವಾತಿ ಅವರ ಜೊತೆ ಅಸಭ್ಯವಾಗಿ ವರ್ತಿಸಿದ ಆತ ಹಾಗೇ ಕಾರು ಚಲಾಯಿಸಿಕೊಂಡು ಹೋಗಿದ್ದ. ಈ ವೇಳೆ ಕೈ ಸಿಕ್ಕಿಹಾಕಿಕೊಂಡಿದ್ದರಿಂದ ಸ್ವಾತಿ ಅವರನ್ನು ಕಾರು ಎಳೆದುಕೊಂಡು ಹೋಗಿತ್ತು.

ಮಹಿಳಾ ಸುರಕ್ಷತೆ ಬಗ್ಗೆ ರಾತ್ರಿ ಸ್ವಾತಿ ಮಲಿವಾಲ್ ಪರಿಶೀಲನೆ ಮಾಡಲು ನಿಂತಿದ್ದಾಗ ಕಾರಿನಲ್ಲಿ ಬಂದ ವ್ಯಕ್ತಿ ಆಕೆಗೆ ಲಿಫ್ಟ್ ಕೊಡುವುದಾಗಿ ಹೇಳಿದ್ದ. ಆಗ ತನ್ನನ್ನು ಎಲ್ಲಿ ಬಿಡುತ್ತೀರಾ? ಈಗಾಗಲೇ ರಾತ್ರಿಯಾಗಿದೆ ಎಂದು ಸ್ವಾತಿ ಮಾತನಾಡುತ್ತಿದ್ದಾಗ ಆತ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ. ಈ ಘಟನೆಗೆ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಮಹಿಳಾ ಆಯೋಗದ ಅಧ್ಯಕ್ಷೆಗೇ ಹೀಗಾದರೆ ಉಳಿದ ಮಹಿಳೆಯರ ಕತೆಯೇನು? ಎಂಬ ಪ್ರಶ್ನೆಯೂ ಉದ್ಭವವಾಗಿತ್ತು. ಇದೀಗ ಈ ಘಟನೆಯ ಸಿಸಿಟಿವಿ ವಿಡಿಯೋ ಎಲ್ಲ ಕಡೆ ಹರಿದಾಡುತ್ತಿದೆ. ಸ್ವಾತಿ ಅವರೊಂದಿಗೆ ಅಸಭ್ಯವಾಗಿ ವರ್ತಿಸಿ, ಅವರನ್ನು ಎಳೆದುಕೊಂಡು ಹೋದ ಯುವಕನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ಇದನ್ನೂ ಓದಿ: Marriage Rules: ಇಬ್ಬರು ಭಾರತದ ಪ್ರಜೆಯಾಗಿಲ್ಲದಿದ್ದರೂ ವಿವಾಹ ನೋಂದಣಿ ಮಾಡಬಹುದು: ದೆಹಲಿ ಹೈಕೋರ್ಟ್​

ಕಳೆದ ರಾತ್ರಿ, ನಾನು ದೆಹಲಿಯಲ್ಲಿ ಮಹಿಳಾ ಸುರಕ್ಷತೆಯ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದೆ. ಆಗ ಕುಡಿದ ಅಮಲಿನಲ್ಲಿ ಕಾರ್ ಡ್ರೈವರ್ ನನಗೆ ಕಿರುಕುಳ ನೀಡಿದ್ದಾನೆ. ನಾನು ಅವನನ್ನು ಹಿಡಿದಾಗ ಅವನು ನನ್ನ ಕೈಯನ್ನು ಕಿಟಕಿಯಲ್ಲಿ ಸಿಲುಕಿಸಿಕೊಂಡು ನನ್ನನ್ನು ಎಳೆದುಕೊಂಡು ಹೋದನು. ಸದ್ಯ ದೇವರು ನನ್ನ ಜೀವ ಉಳಿಸಿದ. ಇಲ್ಲದಿದ್ದರೆ ಅಂಜಲಿ ಸಿಂಗ್​ಗೆ ಆದ ಸ್ಥಿತಿಯೇ ನನಗೂ ಆಗುತ್ತಿತ್ತೇನೋ. ಮಹಿಳಾ ಆಯೋಗದ ಅಧ್ಯಕ್ಷರು ದೆಹಲಿಯಲ್ಲಿ ಸುರಕ್ಷಿತವಾಗಿಲ್ಲದಿದ್ದರೆ ಉಳಿದವರ ಪರಿಸ್ಥಿತಿ ಹೇಗಿರಬಹುದು ಎಂದು ಊಹಿಸಬಹುದು ಎಂದು ಸ್ವಾತಿ ಮಲಿವಾಲ್ ಹಿಂದಿಯಲ್ಲಿ ನಡೆದ ಘಟನೆಯ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ