AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜಮ್ಮುವಿನಲ್ಲಿ ಸುರಂಗ ಕುಸಿತದ ಬೆನ್ನಲ್ಲೇ ಪರ್ವತದ ಒಂದು ಭಾಗ ಕುಸಿದ ವಿಡಿಯೋ ವೈರಲ್

ರಾಂಬನ್ ಸುರಂಗ ಕುಸಿತದ ಸ್ಥಳದಲ್ಲಿ 10 ಜನರು ಸಿಕ್ಕಿಬಿದ್ದಿದ್ದರು. ಅದೇ ಸ್ಥಳದಲ್ಲಿ ಇಂದು ಪರ್ವತದ ಒಂದು ಭಾಗ ಕುಸಿದುಬಿದ್ದಿರುವ ಘಟನೆ ನಡೆದಿದೆ. ಇದರ ವಿಡಿಯೋ ಭಾರೀ ವೈರಲ್ ಆಗಿದೆ.

Viral Video: ಜಮ್ಮುವಿನಲ್ಲಿ ಸುರಂಗ ಕುಸಿತದ ಬೆನ್ನಲ್ಲೇ ಪರ್ವತದ ಒಂದು ಭಾಗ ಕುಸಿದ ವಿಡಿಯೋ ವೈರಲ್
ಪರ್ವತ ಕುಸಿಯುತ್ತಿರುವ ದೃಶ್ಯ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: May 20, 2022 | 8:47 PM

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ (Jammu- Srinagar National High Way) ನಿನ್ನೆ ನಿರ್ಮಾಣ ಹಂತದಲ್ಲಿದ್ದ ನಾಲ್ಕು ಪಥದ ಸುರಂಗದ ಒಂದು ಭಾಗವು ಕುಸಿದು ಬಿದ್ದಿತ್ತು. ರಾಂಬನ್ ಸುರಂಗ ಕುಸಿತದ ಸ್ಥಳದಲ್ಲಿ 10 ಜನರು ಸಿಕ್ಕಿಬಿದ್ದಿದ್ದರು. ಅದೇ ಸ್ಥಳದಲ್ಲಿ ಇಂದು ಪರ್ವತದ ಒಂದು ಭಾಗ ಕುಸಿದುಬಿದ್ದಿರುವ ಘಟನೆ ನಡೆದಿದೆ. ಇದರ ವಿಡಿಯೋ ಭಾರೀ ವೈರಲ್ ಆಗಿದೆ.

15ನೇ ಬೆಟಾಲಿಯನ್ ITBPನ ಸಿಬ್ಬಂದಿ ಮತ್ತು ಪಡೆಯ ಸ್ನಿಫರ್ ಡಾಗ್ ರಕ್ಷಣಾ ಕಾರ್ಯಾಚರಣೆಯಲ್ಲಿ ಸೇರಿಕೊಂಡಿದ್ದಾರೆ ಎಂದು ITBP ಹೇಳಿಕೆ ತಿಳಿಸಿದೆ. ಈ ಸುರಂಗ ಮಾರ್ಗವು ಹೊಸದಾಗಿ ಆರಂಭವಾಗಿರುವ ಯೋಜನೆಯಾಗಿದ್ದು, ಕಳೆದ ರಾತ್ರಿ 10.15ರ ಸುಮಾರಿಗೆ ಭೂಕುಸಿತ ಸಂಭವಿಸಿದೆ. ಈ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಸಿಕ್ಕಿಬಿದ್ದಿದ್ದು, ಹಲವು ಟ್ರಕ್‌ಗಳು, ಅಗೆಯುವ ಯಂತ್ರಗಳು ಮತ್ತು ಇತರ ವಾಹನಗಳು ಭೂಕುಸಿತದಲ್ಲಿ ಸಂಪೂರ್ಣವಾಗಿ ಹಾನಿಗೊಳಗಾಗಿವೆ.

ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಎನ್‌ಕೌಂಟರ್​​: ಇಬ್ಬರು ಉಗ್ರರ ಹತ್ಯೆ, ಶಸ್ತ್ರಾಸ್ತ್ರ ವಶಕ್ಕೆ

ಇದು ಎಸ್ಕೇಪ್ ಟನಲ್ ಆಗಿ ಬಳಸಬೇಕಾದ ಕೆಲವು ಸುರಂಗ T4 ಗೆ ಆದಿತ್ ಸುರಂಗ ಎಂದು ವರದಿಯಾಗಿದೆ. “9 ಮಂದಿ ಕಾರ್ಮಿಕರಲ್ಲಿ ಐವರು ಪಶ್ಚಿಮ ಬಂಗಾಳದವರು. ತಲಾ ಒಬ್ಬರು ನೇಪಾಳ ಮತ್ತು ಅಸ್ಸಾಂನಿಂದ ಮತ್ತು ಇಬ್ಬರು ಸ್ಥಳೀಯರು ಸಿಲುಕಿದ್ದಾರೆ. ಈ ಭೂಕುಸಿತದಲ್ಲಿ ಮೂವರು ಗಾಯಗೊಂಡಿದ್ದಾರೆ, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆಯಲ್ಲಿ ಸುರಂಗದ ಅವಶೇಷಗಳಡಿ 10 ಜನರು ಸಿಕ್ಕಿಬಿದ್ದಿದ್ದಾರೆ, ಓರ್ವ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಮತ್ತು ಅವಶೇಷಗಳಡಿ ಸಿಕ್ಕಿಬಿದ್ದ ವ್ಯಕ್ತಿಗಳನ್ನು ತಲುಪಲು ರಾಕ್ ಬ್ರೇಕರ್‌ಗಳನ್ನು ಬಳಸಲಾಗುತ್ತಿರುವುದರಿಂದ ಇನ್ನೂ ಸ್ವಲ್ಪ ಸಮಯ ತೆಗೆದುಕೊಳ್ಳುವ ಸಾಧ್ಯತೆಯಿದೆ. ಗಾಯಗೊಂಡ ಮೂವರಲ್ಲಿ ಒಬ್ಬರನ್ನು ಜಮ್ಮುವಿನ ಜಿಎಂಸಿಗೆ ಸ್ಥಳಾಂತರಿಸಲಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ಕುಸಿತ , 4 ಜನರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ರಾಂಬನ್ ಮತ್ತು ರಾಮ್ಸು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗದ ಕುಸಿತವಾಗಿರುವುದು ದುರದೃಷ್ಟಕರ ಘಟನೆ. ನಾನು ಡಿಸಿ ಮುಸ್ರತ್ ಇಸ್ಲಾಂ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಸುಮಾರು 10 ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆ. ಇನ್ನಿಬ್ಬರನ್ನು ರಕ್ಷಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.

ರಸ್ತೆಯ ಬನಿಹಾಲ್-ರಾಂಬನ್ ಭಾಗದಲ್ಲಿ ಪ್ರಸ್ತುತ ಅನೇಕ ಸುರಂಗಗಳು ನಿರ್ಮಾಣ ಹಂತದಲ್ಲಿವೆ. ಹೆದ್ದಾರಿಯ ಮಹತ್ವಾಕಾಂಕ್ಷೆಯ ಚತುಷ್ಪಥದ ಅತ್ಯಂತ ಕಷ್ಟಕರವಾದ ವಿಭಾಗವೆಂದು ಪರಿಗಣಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಅವಶೇಷಗಳು ಭಾರೀ ಪ್ರಮಾಣದಲ್ಲಿ ಮತ್ತು ಸುತ್ತಮುತ್ತಲಿನ ಎಲ್ಲಾ ಪ್ರದೇಶಗಳನ್ನು ಆವರಿಸಿರುವುದರಿಂದ ಸಿಕ್ಕಿಬಿದ್ದ ವ್ಯಕ್ತಿಗಳು ಬದುಕುಳಿಯುವ ಸಾಧ್ಯತೆ ಕಡಿಮೆ. ಆದರೆ, ರಾತ್ರಿಯ ಸಮಯದಲ್ಲಿ ಖೋನಿ ನಾಲಾದಲ್ಲಿ ಸುರಂಗದ ಒಂದು ಭಾಗವು ಕುಸಿದ ನಂತರ ತಕ್ಷಣವೇ ಜಂಟಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್
Weekly Horoscope: ಮೇ 26 ರಿಂದ ಜೂನ್​ 1 ರವರೆಗಿನ ವಾರ ಭವಿಷ್ಯ
Weekly Horoscope: ಮೇ 26 ರಿಂದ ಜೂನ್​ 1 ರವರೆಗಿನ ವಾರ ಭವಿಷ್ಯ