AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕನ್ವರ್ ಯಾತ್ರೆಯಲ್ಲಿ ಕಾಲು ನೋವಿನಿಂದ ಬಳಲುತ್ತಿದ್ದ ಯಾತ್ರಿಕನ ಕಾಲಿಗೆ ನೋವು ನಿವಾರಕ ಸ್ಪ್ರೇ ಹಚ್ಚಿ ಮಸಾಜ್ ಮಾಡಿದ ಪೊಲೀಸ್, ವಿಡಿಯೋ ವೈರಲ್

ವಾರ್ಷಿಕ ಕನ್ವರ್ ಯಾತ್ರೆಗೆ ಭಕ್ತರ ಸಮೂಹವೇ ಹರಿದುಬರುತ್ತಿದ್ದಾರೆ. ಈ ನಡುವೆ ಯಾತ್ರೆಗೆ ಬಂದ ಶಿವಭಕ್ತರೊಬ್ಬರು ಕಾಲು ನೋವಿನಿಂದ ಬಳಲಿದಾಗ ಪೊಲೀಸ್ ಅಧಿಕಾರಿಯೊಬ್ಬರು ನೋವು ನಿವಾರಕಗಳನ್ನು ಹಚ್ಚಿದ್ದಾರೆ

Viral Video: ಕನ್ವರ್ ಯಾತ್ರೆಯಲ್ಲಿ ಕಾಲು ನೋವಿನಿಂದ ಬಳಲುತ್ತಿದ್ದ ಯಾತ್ರಿಕನ ಕಾಲಿಗೆ ನೋವು ನಿವಾರಕ ಸ್ಪ್ರೇ ಹಚ್ಚಿ ಮಸಾಜ್ ಮಾಡಿದ ಪೊಲೀಸ್, ವಿಡಿಯೋ ವೈರಲ್
ಕನ್ವಾರಿಯಾ ಅವರ ಕಾಲಿಗೆ ನೋವು ನಿವಾರಕ ಸ್ಪ್ರೇ ಅನ್ವಯಿಸಿದ ಪೊಲೀಸ್ ಅಧಿಕಾರಿ
Follow us
TV9 Web
| Updated By: Rakesh Nayak Manchi

Updated on:Jul 25, 2022 | 2:29 PM

ಹಾಪುರ್: ವಾರ್ಷಿಕ ಕನ್ವರ್ ಯಾತ್ರೆಗೆ ಭಕ್ತರ ಸಮೂಹವೇ ಹರಿದುಬರುತ್ತಿದ್ದಾರೆ. ಈ ನಡುವೆ ಯಾತ್ರೆಗೆ ಬಂದ ಶಿವಭಕ್ತರೊಬ್ಬರು ಕಾಲು ನೋವಿನಿಂದ ಬಳಲಿದಾಗ ಪೊಲೀಸ್ ಅಧಿಕಾರಿಯೊಬ್ಬರು ನೋವು ನಿವಾರಕಗಳನ್ನು ಹಚ್ಚಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ. ಉತ್ತರ ಪ್ರದೇಶದ ಹಾಪುರ್‌ನಲ್ಲಿ ಶಿವಭಕ್ತನ ಕಾಲಿಗೆ ನೋವು ನಿವಾರಕ ಸ್ಪ್ರೇ ಅನ್ನು ಪೊಲೀಸ್ ಇನ್ಸ್‌ಪೆಕ್ಟರ್ ಹಾಕುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.

ಕೊರೋನಾ ಹಿನ್ನೆಲೆ ಸ್ಥಗಿತಗೊಂಡಿದ್ದ ಶಿವನ ಭಕ್ತರ ವಾರ್ಷಿಕ ಕನ್ವರ್ ಯಾತ್ರೆ ಜು.14ರಂದು ಆರಂಭಗೊಂಡಿದೆ. ಕನ್ವಾರಿಯರು ಗಂಗಾ ನದಿಯಿಂದ ಪವಿತ್ರ ನೀರನ್ನು ತರಲು ಉತ್ತರಾಖಂಡದ ಹರಿದ್ವಾರ, ಗೌಮುಖ ಮತ್ತು ಗಂಗೋತ್ರಿಗೆ ಭೇಟಿ ನೀಡುತ್ತಾರೆ. ಅದರಂತೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ನಗರಗಳಲ್ಲಿ ಹಿರಿಯ ಆಡಳಿತ ಮತ್ತು ಅನೇಕ ಪೊಲೀಸ್ ಅಧಿಕಾರಿಗಳು ಕನ್ವಾರಿಯಾಗಳನ್ನು ಸ್ವಾಗತಿಸಿದ್ದಾರೆ.

ಭಾನುವಾರ ಕೆಲವು ಅಧಿಕಾರಿಗಳು ಕನ್ವಾರಿಯಾಗಳ ಮೇಲೆ ಹೂವಿನ ದಳಗಳನ್ನು ಸುರಿಸಿದ್ದರು. ಇದಕ್ಕೂ ಮುನ್ನ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಧಾಮಿ ಅವರು ಬುಧವಾರ ಹರಿದ್ವಾರದಲ್ಲಿ ಕನ್ವಾರಿಯಾಗಳಿಗೆ ಆತ್ಮೀಯ ಸ್ವಾಗತವನ್ನು ನೀಡಿ ಅವರ ಪಾದಗಳನ್ನು ತೊಳೆದು ಆಶೀರ್ವಾದ ಪಡೆದರು. ಇದೀಗ ಸ್ಟೇಷನ್ ಹೌಸ್ ಆಫೀಸರ್ (SHO) ಸೋಮವೀರ್ ಸಿಂಗ್ ಹಾಪುರ್ನ ತಾತ್ಕಾಲಿಕ ಶಿಬಿರದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಕನ್ವಾರಿಯಾದ ಕಾಲುಗಳಿಗೆ ಪೊಲೀಸರು ನೋವು ನಿವಾರಕ ಸ್ಪ್ರೇ ಅನ್ನು ಅನ್ವಯಿಸುವ ವಿಡಿಯೋ ವೈರಲ್ ಆಗುತ್ತಿದೆ.

ಕನ್ವರ್ ಯಾತ್ರೆಗೆ ರಾಜ್ಯ ಸರ್ಕಾರಗಳು ಮತ್ತು ಪೊಲೀಸರಿಂದ ವ್ಯಾಪಕ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಅದಾಗ್ಯೂ, ರಸ್ತೆ ಅಪಘಾತದಲ್ಲಿ ಆರು ಕನ್ವಾರಿಯಾಗಳು ಸಾವನ್ನಪ್ಪಿದ್ದರು. ಈ ಘಟನೆಯ ನಂತರ ಉತ್ತರ ಪ್ರದೇಶ ಸರ್ಕಾರ ಭಾನುವಾರ ಹತ್ರಾಸ್ ಪೊಲೀಸ್ ವರಿಷ್ಠಾಧಿಕಾರಿಯನ್ನು ವರ್ಗಾವಣೆ ಮಾಡಿದೆ.

Published On - 2:22 pm, Mon, 25 July 22

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ