AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪವರ್ ಕಟ್ ಹಿನ್ನೆಲೆ ಮೊಬೈಲ್ ಲೈಟ್ ಬಳಸಿ ರೋಗಿಯ ಪರೀಕ್ಷೆ ಮಾಡಿದ ಉತ್ತರ ಪ್ರದೇಶದ ವೈದ್ಯರು

ಉತ್ತರಪ್ರದೇಶದಲ್ಲಿ ಆದ ವಿದ್ಯುತ್ ಕಡಿತ ಹಿನ್ನೆಲೆ ಆಸ್ಪತ್ರೆಯೊಂದರಲ್ಲಿ ರೋಗಿಗಳ ತಪಾಸಣೆ ನಡೆಸಲು ವೈದ್ಯರು ಕಷ್ಟಪಡಬೇಕಾಯಿತು. ವೈದ್ಯರು ಮೊಬೈಲ್​ನಲ್ಲಿನ ಲೈಟ್​ ಬಳಕೆ ಮಾಡಿ ರೋಗಿಯನ್ನು ತಪಾಸಣೆ ನಡೆಸಿದ ವಿಡಿಯೋ ವೈರಲ್ ಆಗುತ್ತಿದೆ.

Viral Video: ಪವರ್ ಕಟ್ ಹಿನ್ನೆಲೆ ಮೊಬೈಲ್ ಲೈಟ್ ಬಳಸಿ ರೋಗಿಯ ಪರೀಕ್ಷೆ ಮಾಡಿದ ಉತ್ತರ ಪ್ರದೇಶದ ವೈದ್ಯರು
ವಿದ್ಯುತ್ ಸಂಪರ್ಕ ಕಡಿತ ಹಿನ್ನೆಲೆ ಉತ್ತರ ಪ್ರದೇಶದ ಬಾಲಿಯ ಜಿಲ್ಲಾಸ್ಪತ್ರೆ ವೈದ್ಯರು ರೋಗಿಯನ್ನು ಮೊಬೈಲ್ ಲೈಟ್ ಬಳಕೆ ಮಾಡಿ ತಪಾಸಣೆ ನಡೆಸಿದರು
TV9 Web
| Edited By: |

Updated on: Sep 12, 2022 | 10:49 AM

Share

ಉತ್ತರ ಪ್ರದೇಶ: ರಾಜ್ಯದ ಜಿಲ್ಲೆಯೊಂದರಲ್ಲಿ ಆದ ಪವರ್ ಕಟ್​ ಹಿನ್ನೆಲೆ ಆಸ್ಪತ್ರೆಯಲ್ಲಿ ವೈದ್ಯರು ಪರದಾಡುವಂತಾಯಿತು. ಭಾರೀ ಮಳೆಯ ಅವಾಂತರ ಹಿನ್ನೆಲೆ ಶನಿವಾರ ವಿದ್ಯುತ್ ಕಡಿತಗೊಳಿಸಲಾಯಿತು. ಈ ವೇಳೆ ಬಾಲಿಯ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ವೈದ್ಯರು ರೋಗಿಗಳನ್ನು ತಪಾಸಣೆ ನಡೆಸಲು ಮೊಬೈಲ್ ಲೈಟ್ ಮೊರೆ ಹೋಗಬೇಕಾಯಿತು. ಸದ್ಯ ಇದರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ, ಕತ್ತಲಿನಲ್ಲಿ ವೈದ್ಯರು ಮೊಬೈಲ್ ಲೈಟ್ ಬಳಕೆ ಮಾಡಿ ಮಹಿಳಾ ರೋಗಿಯೊಬ್ಬರನ್ನು ಮಲಗಿಸಿ ತಪಾಸಣೆ ನಡೆಸುತ್ತಿರುವುದನ್ನು ಕಾಣಬಹುದು.

ಘಟನೆ ಬಗ್ಗೆ ವಿವರಿಸಿದ ಜಿಲ್ಲಾ ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಕ ಮತ್ತು ಪ್ರಭಾರ ಮುಖ್ಯಾಧಿಕಾರಿ ಡಾ.ಆರ್.ಡಿ.ರಾಮ್, ಆಸ್ಪತ್ರೆಯಲ್ಲಿ ಜನರೇಟರ್ ವ್ಯವಸ್ಥೆ ಇದೆ. ಆದರೆ ಜನರೇಟರ್​ಗಾಗಿ ಬ್ಯಾಟರಿಗಳನ್ನು ಪಡೆಯುವಾಗ 15ರಿಂದ 20 ನಿಮಿಷಗಳ ಕಾಲ ತಡವಾಗಿದೆ ಎಂದು ತಿಳಿಸಿದರು. ಜನರೇಟರ್ ಬ್ಯಾಟರಿ ಇಲ್ಲದೇ ಇರಲು ಕಾರಣವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾವಾಗಲೂ ಬ್ಯಾಟರಿಗಳು ಕಳ್ಳತನವಾಗುವ ಭಯ ಇದ್ದೇ ಇರುತ್ತದೆ. ಹಾಗಾಗಿ ತೆಗೆಯಲಾಗಿದೆ ಎಂದು ಹೇಳಿದ್ದಾರೆ.

ರಾಜಕೀಯವಾಗಿ ಹೆಚ್ಚು ಚರ್ಚೆಯಲ್ಲಿರುವ ದೇಶದಲ್ಲಿ ರಾಜ್ಯಗಳಲ್ಲಿ ಉತ್ತರಪ್ರದೇಶವೂ ಒಂದಾಗಿದೆ. ಇಲ್ಲಿನ ಧನಾತ್ಮಕ, ನಕರಾತ್ಮಕ ವಿಷಯಗಳು ದೇಶದಾದ್ಯಂತ ರಾಜಕೀಯವಾಗಿ ಹೆಚ್ಚು ಚರ್ಚೆಗೆ ಗುರಿಯಾಗುತ್ತದೆ. ಸದ್ಯ ಬಾಲಿಯ ಆಸ್ಪತ್ರೆಯಲ್ಲಿನ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದರೂ ರಾಜ್ಯ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?