AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪವರ್ ಕಟ್ ಹಿನ್ನೆಲೆ ಮೊಬೈಲ್ ಲೈಟ್ ಬಳಸಿ ರೋಗಿಯ ಪರೀಕ್ಷೆ ಮಾಡಿದ ಉತ್ತರ ಪ್ರದೇಶದ ವೈದ್ಯರು

ಉತ್ತರಪ್ರದೇಶದಲ್ಲಿ ಆದ ವಿದ್ಯುತ್ ಕಡಿತ ಹಿನ್ನೆಲೆ ಆಸ್ಪತ್ರೆಯೊಂದರಲ್ಲಿ ರೋಗಿಗಳ ತಪಾಸಣೆ ನಡೆಸಲು ವೈದ್ಯರು ಕಷ್ಟಪಡಬೇಕಾಯಿತು. ವೈದ್ಯರು ಮೊಬೈಲ್​ನಲ್ಲಿನ ಲೈಟ್​ ಬಳಕೆ ಮಾಡಿ ರೋಗಿಯನ್ನು ತಪಾಸಣೆ ನಡೆಸಿದ ವಿಡಿಯೋ ವೈರಲ್ ಆಗುತ್ತಿದೆ.

Viral Video: ಪವರ್ ಕಟ್ ಹಿನ್ನೆಲೆ ಮೊಬೈಲ್ ಲೈಟ್ ಬಳಸಿ ರೋಗಿಯ ಪರೀಕ್ಷೆ ಮಾಡಿದ ಉತ್ತರ ಪ್ರದೇಶದ ವೈದ್ಯರು
ವಿದ್ಯುತ್ ಸಂಪರ್ಕ ಕಡಿತ ಹಿನ್ನೆಲೆ ಉತ್ತರ ಪ್ರದೇಶದ ಬಾಲಿಯ ಜಿಲ್ಲಾಸ್ಪತ್ರೆ ವೈದ್ಯರು ರೋಗಿಯನ್ನು ಮೊಬೈಲ್ ಲೈಟ್ ಬಳಕೆ ಮಾಡಿ ತಪಾಸಣೆ ನಡೆಸಿದರು
TV9 Web
| Updated By: Rakesh Nayak Manchi|

Updated on: Sep 12, 2022 | 10:49 AM

Share

ಉತ್ತರ ಪ್ರದೇಶ: ರಾಜ್ಯದ ಜಿಲ್ಲೆಯೊಂದರಲ್ಲಿ ಆದ ಪವರ್ ಕಟ್​ ಹಿನ್ನೆಲೆ ಆಸ್ಪತ್ರೆಯಲ್ಲಿ ವೈದ್ಯರು ಪರದಾಡುವಂತಾಯಿತು. ಭಾರೀ ಮಳೆಯ ಅವಾಂತರ ಹಿನ್ನೆಲೆ ಶನಿವಾರ ವಿದ್ಯುತ್ ಕಡಿತಗೊಳಿಸಲಾಯಿತು. ಈ ವೇಳೆ ಬಾಲಿಯ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ವೈದ್ಯರು ರೋಗಿಗಳನ್ನು ತಪಾಸಣೆ ನಡೆಸಲು ಮೊಬೈಲ್ ಲೈಟ್ ಮೊರೆ ಹೋಗಬೇಕಾಯಿತು. ಸದ್ಯ ಇದರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ, ಕತ್ತಲಿನಲ್ಲಿ ವೈದ್ಯರು ಮೊಬೈಲ್ ಲೈಟ್ ಬಳಕೆ ಮಾಡಿ ಮಹಿಳಾ ರೋಗಿಯೊಬ್ಬರನ್ನು ಮಲಗಿಸಿ ತಪಾಸಣೆ ನಡೆಸುತ್ತಿರುವುದನ್ನು ಕಾಣಬಹುದು.

ಘಟನೆ ಬಗ್ಗೆ ವಿವರಿಸಿದ ಜಿಲ್ಲಾ ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಕ ಮತ್ತು ಪ್ರಭಾರ ಮುಖ್ಯಾಧಿಕಾರಿ ಡಾ.ಆರ್.ಡಿ.ರಾಮ್, ಆಸ್ಪತ್ರೆಯಲ್ಲಿ ಜನರೇಟರ್ ವ್ಯವಸ್ಥೆ ಇದೆ. ಆದರೆ ಜನರೇಟರ್​ಗಾಗಿ ಬ್ಯಾಟರಿಗಳನ್ನು ಪಡೆಯುವಾಗ 15ರಿಂದ 20 ನಿಮಿಷಗಳ ಕಾಲ ತಡವಾಗಿದೆ ಎಂದು ತಿಳಿಸಿದರು. ಜನರೇಟರ್ ಬ್ಯಾಟರಿ ಇಲ್ಲದೇ ಇರಲು ಕಾರಣವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾವಾಗಲೂ ಬ್ಯಾಟರಿಗಳು ಕಳ್ಳತನವಾಗುವ ಭಯ ಇದ್ದೇ ಇರುತ್ತದೆ. ಹಾಗಾಗಿ ತೆಗೆಯಲಾಗಿದೆ ಎಂದು ಹೇಳಿದ್ದಾರೆ.

ರಾಜಕೀಯವಾಗಿ ಹೆಚ್ಚು ಚರ್ಚೆಯಲ್ಲಿರುವ ದೇಶದಲ್ಲಿ ರಾಜ್ಯಗಳಲ್ಲಿ ಉತ್ತರಪ್ರದೇಶವೂ ಒಂದಾಗಿದೆ. ಇಲ್ಲಿನ ಧನಾತ್ಮಕ, ನಕರಾತ್ಮಕ ವಿಷಯಗಳು ದೇಶದಾದ್ಯಂತ ರಾಜಕೀಯವಾಗಿ ಹೆಚ್ಚು ಚರ್ಚೆಗೆ ಗುರಿಯಾಗುತ್ತದೆ. ಸದ್ಯ ಬಾಲಿಯ ಆಸ್ಪತ್ರೆಯಲ್ಲಿನ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದರೂ ರಾಜ್ಯ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?